Homeಮುಖಪುಟಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

- Advertisement -
- Advertisement -

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು. ಅದನ್ನು ಖಂಡಿಸಿ ಅವರ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಲು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅನುಮತಿ ನೀಡಿರುವುದು ಸರಿಯಷ್ಟೆ. ಈಗ ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್‌ಗಳು ಆರಂಭವಾಗಿವೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡುವಾಗ ನ್ಯಾಯಮೂರ್ತಿ ಚಂದ್ರಚೂಡ್‌ರವರು “ನಾನು ಆತನ ಚಾನೆಲ್ ನೋಡುವುದೇ ಇಲ್ಲ. ನಿಮಗೆ ಕಷ್ಟವಾದರೆ ನೀವು ಆತನ ಚಾನೆಲ್ ನೋಡಬೇಡಿ, ನಿರ್ಲಕ್ಷ್ಯ ಮಾಡಿ” ಎಂದು ಹೇಳಿದ್ದರು. ಈಗ ಅದೇ ಮಾತುಗಳನ್ನು ಪುನರುಚ್ಚರಿಸುತ್ತಿರುವ ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ನವೆಂಬರ್ 9 ರಂದು ಬಾಂಬೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಆಗ ಶೆಫಾಲಿ ವೈದ್ಯೆ ಎಂಬುವವರು “ಭಾರತವು ಸರಿಯಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿಲ್ಲ. ನಾವು ಇದುವರೆಗೂ ಹೊಂದಿರುವುದು ಕೇವಲ ಜೋಕ್ ಅಷ್ಟೇ” ಎಂದು ಟ್ವೀಟ್‌ ಮಾಡಿದ್ದರು.

ನವೆಂಬರ್ 11 ರಂದು ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಕುನಾಲ್ ಕಮ್ರ “ಈ ದೇಶದ ಸುಪ್ರೀಂ ಕೋರ್ಟ್ ಎನ್ನುವುದು, ಈ ದೇಶದ ಸುಪ್ರೀಂ ಜೋಕ್” ಎಂದು ಟ್ರೋಲ್ ಮಾಡಿದ್ದರು. ಅಲ್ಲದೇ ನ್ಯಾಯಾಂಗ ನಿಂದನೆ ಎನ್ನುವುದು ಹೀಗೆ ತೋರುತ್ತದೆ ಎಂದು ಸುಪ್ರೀಂ ಕೋರ್ಟಿಗೆ ಕೇಸರಿ ಬಣ್ಣ ಬಳಿದು, ಬಿಜೆಪಿ ಬಾವುಟ ಹಾರಿಸಿರುವ ಚಿತ್ರವೊಂದನ್ನು ಅವರು ಟ್ವೀಟ್ ಮಾಡಿದ್ದರು.

“ಇದನ್ನು ನ್ಯಾಯಾಂಗ ನಿಂದನೆ ಎಂದು ಕರೆಯಬೇಡಿ, ಇದನ್ನು ಭವಿಷ್ಯದ ರಾಜ್ಯಸಭೆ ಸ್ಥಾನದ ನಿಂದನೆ ಎಂದು ಕರೆಯಿರಿ” ಎಂಬುದಾಗಿ ನೇರವಾಗಿ ಚಂದ್ರಚೂಡ್‌ರವರನ್ನು ಟೀಕಿಸಿದ್ದ ಕುನಾಲ್ ಕಮ್ರರವರ ನಾಲ್ಕು ಟ್ವೀಟ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಗುರುವಾರ ಅನುಮತಿ ನೀಡಲಾಯಿತು. ಇದನ್ನು ವಿರೋಧಿಸಿ ಪ್ರತಿರೋಧದ ಭಾಗವಾಗಿ ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಅಲ್ಲದೇ ನೀವು ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವುದಾದರೆ ಈ ದೇಶದ ನ್ಯಾಯಾಂಗದಲ್ಲಿ ನಂಬಿಕೆಯಿಲ್ಲ ಎಂದು ನವೆಂಬರ್ 9 ರಂದು ಟ್ವೀಟ್ ಮಾಡಿದ್ದ ಶೆಫಾಲಿ ವೈದ್ಯೆಯ ವಿರುದ್ಧ ಮೊದಲು ವಿಚಾರಣೆ ನಡೆಸಿ. ನಂತರ ಕುನಾಲ್ ಮೇಲೆ. ನೀವು ಕ್ಯು ವ್ಯವಸ್ಥೆಯನ್ನು ಪಾಲಿಸಬೇಕು ಎಂದು ಟ್ರೋಲ್ ಮಾಡಿದ್ದಾರೆ.

ರಿಲ್ಯಾಕ್ಸ್, ಹುಡುಗರೇ. ಕುನಾಲ್ ಕಮ್ರಾ ಅವರಿಗೆ ಏನೂ ಆಗುವುದಿಲ್ಲ. ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಪನ್‌ಸ್ಟಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಜಸ್ಟಿಸ್ ಚಂದ್ರಚೂಡ್ ಅವರ ತೀರ್ಪು ಸರಿಯಾಗಿತ್ತು. ಅದರ ಟೀಕೆ ಸರಿಯಾದುದಲ್ಲ. ಇನ್ನೊಂದು ಕೇಸಿನಲ್ಲಿ ಅನ್ಯಾಯವಾಗಿದೆಯೆಂದು ಹೇಳುವುದಕ್ಕೆ ಈ ಜಡ್ಮೆಂಟನ್ನು ದೂರವುದು ತಪ್ಪಾಗುತ್ತದೆ. ನಾವೇ ಘನತೆಯಿತ್ತು ಕಟ್ಟಿಕೊಂಡ ಸಂಸ್ಥೆಯೊಂದನ್ನು ಟೀಕಿಸುವಾಗ ನಾವು ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಬೇಕು . ಇಷ್ಟಾಗಿಯೂ ಕುನಾಲ್ ಅವರನ್ನು ಕೋರ್ಟ್ ಮನ್ನಿಸುತ್ತದೆಂದು ನಾನು ಭಾವಿಸಿದ್ದೇನೆ. ಇನ್ನು ವ್ಯವಸ್ಥೆಯಲ್ಲಿನ ಪಕ್ಷಪಾತದ ಬಗ್ಗೆ. ಒಕ್ಕೂಟ ಸರ್ಕಾರ ತನಗೆ ಬೇಕಾದಂತೆ ನಿಯಂತ್ರಿಸುತ್ತಿರುವುದರ ಬಗ್ಗೆ. ಆ ಬಗ್ಗೆ ಯಾವುದೇ ಸಂಶಯ ಬೇಡ. ಸುಧಾ ಭಾರದ್ವಾಜ್, ತೇಲ್ತುಂಬೆ ಕೇಸ್ ನ್ಯಾಯಮೂರ್ತಿ ಚಂದ್ರಚೂಡ್ ಪೀಠದ ಮುಂದೆ ಬಂದರೆ ನಿನ್ನೆ ಕೊಟ್ಟ ಕಾರಣ ನೀಡಿ ಚಂದ್ರಚೂಡ್ ಸರ್ಕಾರಕ್ಕೊಂದಿಷ್ಟು, ಪೊಲೀಸರಿಗೊಂದಿಷ್ಟು ಉಗಿದು ಬೇಲ್ ಕೊಡುತ್ತಾರೆ. ಆದರೆ ತನಗಾಗದ ಈ ಸಾಮಾಜಿಕ ಕಾರ್ಯಕರ್ತರ ಬೇಲ್ ಅರ್ಜಿ ಚಂದ್ರಚೂಡ್ ಪೀಠದ ಮುಂದೆ ಬರದಂತೆ ಈ ಸರ್ಕಾರ ನೋಡುಕೊಳ್ಳುತ್ತದೆ ಎನ್ನುವುದರಲ್ಲಿ ಯಾವುದೇ ಸಂದೇಹ ಬೇಡ. ಇಷ್ಟರವರೆಗೆ ಆಗಿರುವುದೂ ಅದೇ. ನಿನ್ನೆ ಆರ್ನಬ್ ಗೆ ಬೇಲ್ ಸಿಕ್ಕಿದೊಡನೆ ಗಾಳಿಯಲ್ಲಿ ಹಾರಿದವರಿಗೆ ಈ ಕಟು ಸತ್ಯ ಗೊತ್ತಿದ್ದರೆ ಈ ಅನ್ಯಾಯದ ವ್ಯವಸ್ಥೆಯಲ್ಲಿ ನಿಮ್ಮ ಪಾಲೂ ಇದೆ ಎಂಬ ಅರಿವು ಮೂಡಲಿ ಎಂದು ಕುಂಟಾಡಿ ನಿತೇಶ್ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...