Homeಮುಖಪುಟಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

- Advertisement -
- Advertisement -

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು. ಅದನ್ನು ಖಂಡಿಸಿ ಅವರ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಲು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅನುಮತಿ ನೀಡಿರುವುದು ಸರಿಯಷ್ಟೆ. ಈಗ ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್‌ಗಳು ಆರಂಭವಾಗಿವೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡುವಾಗ ನ್ಯಾಯಮೂರ್ತಿ ಚಂದ್ರಚೂಡ್‌ರವರು “ನಾನು ಆತನ ಚಾನೆಲ್ ನೋಡುವುದೇ ಇಲ್ಲ. ನಿಮಗೆ ಕಷ್ಟವಾದರೆ ನೀವು ಆತನ ಚಾನೆಲ್ ನೋಡಬೇಡಿ, ನಿರ್ಲಕ್ಷ್ಯ ಮಾಡಿ” ಎಂದು ಹೇಳಿದ್ದರು. ಈಗ ಅದೇ ಮಾತುಗಳನ್ನು ಪುನರುಚ್ಚರಿಸುತ್ತಿರುವ ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ನವೆಂಬರ್ 9 ರಂದು ಬಾಂಬೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಆಗ ಶೆಫಾಲಿ ವೈದ್ಯೆ ಎಂಬುವವರು “ಭಾರತವು ಸರಿಯಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿಲ್ಲ. ನಾವು ಇದುವರೆಗೂ ಹೊಂದಿರುವುದು ಕೇವಲ ಜೋಕ್ ಅಷ್ಟೇ” ಎಂದು ಟ್ವೀಟ್‌ ಮಾಡಿದ್ದರು.

ನವೆಂಬರ್ 11 ರಂದು ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಕುನಾಲ್ ಕಮ್ರ “ಈ ದೇಶದ ಸುಪ್ರೀಂ ಕೋರ್ಟ್ ಎನ್ನುವುದು, ಈ ದೇಶದ ಸುಪ್ರೀಂ ಜೋಕ್” ಎಂದು ಟ್ರೋಲ್ ಮಾಡಿದ್ದರು. ಅಲ್ಲದೇ ನ್ಯಾಯಾಂಗ ನಿಂದನೆ ಎನ್ನುವುದು ಹೀಗೆ ತೋರುತ್ತದೆ ಎಂದು ಸುಪ್ರೀಂ ಕೋರ್ಟಿಗೆ ಕೇಸರಿ ಬಣ್ಣ ಬಳಿದು, ಬಿಜೆಪಿ ಬಾವುಟ ಹಾರಿಸಿರುವ ಚಿತ್ರವೊಂದನ್ನು ಅವರು ಟ್ವೀಟ್ ಮಾಡಿದ್ದರು.

“ಇದನ್ನು ನ್ಯಾಯಾಂಗ ನಿಂದನೆ ಎಂದು ಕರೆಯಬೇಡಿ, ಇದನ್ನು ಭವಿಷ್ಯದ ರಾಜ್ಯಸಭೆ ಸ್ಥಾನದ ನಿಂದನೆ ಎಂದು ಕರೆಯಿರಿ” ಎಂಬುದಾಗಿ ನೇರವಾಗಿ ಚಂದ್ರಚೂಡ್‌ರವರನ್ನು ಟೀಕಿಸಿದ್ದ ಕುನಾಲ್ ಕಮ್ರರವರ ನಾಲ್ಕು ಟ್ವೀಟ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಗುರುವಾರ ಅನುಮತಿ ನೀಡಲಾಯಿತು. ಇದನ್ನು ವಿರೋಧಿಸಿ ಪ್ರತಿರೋಧದ ಭಾಗವಾಗಿ ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಅಲ್ಲದೇ ನೀವು ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವುದಾದರೆ ಈ ದೇಶದ ನ್ಯಾಯಾಂಗದಲ್ಲಿ ನಂಬಿಕೆಯಿಲ್ಲ ಎಂದು ನವೆಂಬರ್ 9 ರಂದು ಟ್ವೀಟ್ ಮಾಡಿದ್ದ ಶೆಫಾಲಿ ವೈದ್ಯೆಯ ವಿರುದ್ಧ ಮೊದಲು ವಿಚಾರಣೆ ನಡೆಸಿ. ನಂತರ ಕುನಾಲ್ ಮೇಲೆ. ನೀವು ಕ್ಯು ವ್ಯವಸ್ಥೆಯನ್ನು ಪಾಲಿಸಬೇಕು ಎಂದು ಟ್ರೋಲ್ ಮಾಡಿದ್ದಾರೆ.

ರಿಲ್ಯಾಕ್ಸ್, ಹುಡುಗರೇ. ಕುನಾಲ್ ಕಮ್ರಾ ಅವರಿಗೆ ಏನೂ ಆಗುವುದಿಲ್ಲ. ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಪನ್‌ಸ್ಟಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಜಸ್ಟಿಸ್ ಚಂದ್ರಚೂಡ್ ಅವರ ತೀರ್ಪು ಸರಿಯಾಗಿತ್ತು. ಅದರ ಟೀಕೆ ಸರಿಯಾದುದಲ್ಲ. ಇನ್ನೊಂದು ಕೇಸಿನಲ್ಲಿ ಅನ್ಯಾಯವಾಗಿದೆಯೆಂದು ಹೇಳುವುದಕ್ಕೆ ಈ ಜಡ್ಮೆಂಟನ್ನು ದೂರವುದು ತಪ್ಪಾಗುತ್ತದೆ. ನಾವೇ ಘನತೆಯಿತ್ತು ಕಟ್ಟಿಕೊಂಡ ಸಂಸ್ಥೆಯೊಂದನ್ನು ಟೀಕಿಸುವಾಗ ನಾವು ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಬೇಕು . ಇಷ್ಟಾಗಿಯೂ ಕುನಾಲ್ ಅವರನ್ನು ಕೋರ್ಟ್ ಮನ್ನಿಸುತ್ತದೆಂದು ನಾನು ಭಾವಿಸಿದ್ದೇನೆ. ಇನ್ನು ವ್ಯವಸ್ಥೆಯಲ್ಲಿನ ಪಕ್ಷಪಾತದ ಬಗ್ಗೆ. ಒಕ್ಕೂಟ ಸರ್ಕಾರ ತನಗೆ ಬೇಕಾದಂತೆ ನಿಯಂತ್ರಿಸುತ್ತಿರುವುದರ ಬಗ್ಗೆ. ಆ ಬಗ್ಗೆ ಯಾವುದೇ ಸಂಶಯ ಬೇಡ. ಸುಧಾ ಭಾರದ್ವಾಜ್, ತೇಲ್ತುಂಬೆ ಕೇಸ್ ನ್ಯಾಯಮೂರ್ತಿ ಚಂದ್ರಚೂಡ್ ಪೀಠದ ಮುಂದೆ ಬಂದರೆ ನಿನ್ನೆ ಕೊಟ್ಟ ಕಾರಣ ನೀಡಿ ಚಂದ್ರಚೂಡ್ ಸರ್ಕಾರಕ್ಕೊಂದಿಷ್ಟು, ಪೊಲೀಸರಿಗೊಂದಿಷ್ಟು ಉಗಿದು ಬೇಲ್ ಕೊಡುತ್ತಾರೆ. ಆದರೆ ತನಗಾಗದ ಈ ಸಾಮಾಜಿಕ ಕಾರ್ಯಕರ್ತರ ಬೇಲ್ ಅರ್ಜಿ ಚಂದ್ರಚೂಡ್ ಪೀಠದ ಮುಂದೆ ಬರದಂತೆ ಈ ಸರ್ಕಾರ ನೋಡುಕೊಳ್ಳುತ್ತದೆ ಎನ್ನುವುದರಲ್ಲಿ ಯಾವುದೇ ಸಂದೇಹ ಬೇಡ. ಇಷ್ಟರವರೆಗೆ ಆಗಿರುವುದೂ ಅದೇ. ನಿನ್ನೆ ಆರ್ನಬ್ ಗೆ ಬೇಲ್ ಸಿಕ್ಕಿದೊಡನೆ ಗಾಳಿಯಲ್ಲಿ ಹಾರಿದವರಿಗೆ ಈ ಕಟು ಸತ್ಯ ಗೊತ್ತಿದ್ದರೆ ಈ ಅನ್ಯಾಯದ ವ್ಯವಸ್ಥೆಯಲ್ಲಿ ನಿಮ್ಮ ಪಾಲೂ ಇದೆ ಎಂಬ ಅರಿವು ಮೂಡಲಿ ಎಂದು ಕುಂಟಾಡಿ ನಿತೇಶ್ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...