Homeಮುಖಪುಟಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

- Advertisement -
- Advertisement -

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು. ಅದನ್ನು ಖಂಡಿಸಿ ಅವರ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಲು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅನುಮತಿ ನೀಡಿರುವುದು ಸರಿಯಷ್ಟೆ. ಈಗ ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್‌ಗಳು ಆರಂಭವಾಗಿವೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡುವಾಗ ನ್ಯಾಯಮೂರ್ತಿ ಚಂದ್ರಚೂಡ್‌ರವರು “ನಾನು ಆತನ ಚಾನೆಲ್ ನೋಡುವುದೇ ಇಲ್ಲ. ನಿಮಗೆ ಕಷ್ಟವಾದರೆ ನೀವು ಆತನ ಚಾನೆಲ್ ನೋಡಬೇಡಿ, ನಿರ್ಲಕ್ಷ್ಯ ಮಾಡಿ” ಎಂದು ಹೇಳಿದ್ದರು. ಈಗ ಅದೇ ಮಾತುಗಳನ್ನು ಪುನರುಚ್ಚರಿಸುತ್ತಿರುವ ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ನವೆಂಬರ್ 9 ರಂದು ಬಾಂಬೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಆಗ ಶೆಫಾಲಿ ವೈದ್ಯೆ ಎಂಬುವವರು “ಭಾರತವು ಸರಿಯಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿಲ್ಲ. ನಾವು ಇದುವರೆಗೂ ಹೊಂದಿರುವುದು ಕೇವಲ ಜೋಕ್ ಅಷ್ಟೇ” ಎಂದು ಟ್ವೀಟ್‌ ಮಾಡಿದ್ದರು.

ನವೆಂಬರ್ 11 ರಂದು ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಕುನಾಲ್ ಕಮ್ರ “ಈ ದೇಶದ ಸುಪ್ರೀಂ ಕೋರ್ಟ್ ಎನ್ನುವುದು, ಈ ದೇಶದ ಸುಪ್ರೀಂ ಜೋಕ್” ಎಂದು ಟ್ರೋಲ್ ಮಾಡಿದ್ದರು. ಅಲ್ಲದೇ ನ್ಯಾಯಾಂಗ ನಿಂದನೆ ಎನ್ನುವುದು ಹೀಗೆ ತೋರುತ್ತದೆ ಎಂದು ಸುಪ್ರೀಂ ಕೋರ್ಟಿಗೆ ಕೇಸರಿ ಬಣ್ಣ ಬಳಿದು, ಬಿಜೆಪಿ ಬಾವುಟ ಹಾರಿಸಿರುವ ಚಿತ್ರವೊಂದನ್ನು ಅವರು ಟ್ವೀಟ್ ಮಾಡಿದ್ದರು.

“ಇದನ್ನು ನ್ಯಾಯಾಂಗ ನಿಂದನೆ ಎಂದು ಕರೆಯಬೇಡಿ, ಇದನ್ನು ಭವಿಷ್ಯದ ರಾಜ್ಯಸಭೆ ಸ್ಥಾನದ ನಿಂದನೆ ಎಂದು ಕರೆಯಿರಿ” ಎಂಬುದಾಗಿ ನೇರವಾಗಿ ಚಂದ್ರಚೂಡ್‌ರವರನ್ನು ಟೀಕಿಸಿದ್ದ ಕುನಾಲ್ ಕಮ್ರರವರ ನಾಲ್ಕು ಟ್ವೀಟ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಗುರುವಾರ ಅನುಮತಿ ನೀಡಲಾಯಿತು. ಇದನ್ನು ವಿರೋಧಿಸಿ ಪ್ರತಿರೋಧದ ಭಾಗವಾಗಿ ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಅಲ್ಲದೇ ನೀವು ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವುದಾದರೆ ಈ ದೇಶದ ನ್ಯಾಯಾಂಗದಲ್ಲಿ ನಂಬಿಕೆಯಿಲ್ಲ ಎಂದು ನವೆಂಬರ್ 9 ರಂದು ಟ್ವೀಟ್ ಮಾಡಿದ್ದ ಶೆಫಾಲಿ ವೈದ್ಯೆಯ ವಿರುದ್ಧ ಮೊದಲು ವಿಚಾರಣೆ ನಡೆಸಿ. ನಂತರ ಕುನಾಲ್ ಮೇಲೆ. ನೀವು ಕ್ಯು ವ್ಯವಸ್ಥೆಯನ್ನು ಪಾಲಿಸಬೇಕು ಎಂದು ಟ್ರೋಲ್ ಮಾಡಿದ್ದಾರೆ.

ರಿಲ್ಯಾಕ್ಸ್, ಹುಡುಗರೇ. ಕುನಾಲ್ ಕಮ್ರಾ ಅವರಿಗೆ ಏನೂ ಆಗುವುದಿಲ್ಲ. ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಪನ್‌ಸ್ಟಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಜಸ್ಟಿಸ್ ಚಂದ್ರಚೂಡ್ ಅವರ ತೀರ್ಪು ಸರಿಯಾಗಿತ್ತು. ಅದರ ಟೀಕೆ ಸರಿಯಾದುದಲ್ಲ. ಇನ್ನೊಂದು ಕೇಸಿನಲ್ಲಿ ಅನ್ಯಾಯವಾಗಿದೆಯೆಂದು ಹೇಳುವುದಕ್ಕೆ ಈ ಜಡ್ಮೆಂಟನ್ನು ದೂರವುದು ತಪ್ಪಾಗುತ್ತದೆ. ನಾವೇ ಘನತೆಯಿತ್ತು ಕಟ್ಟಿಕೊಂಡ ಸಂಸ್ಥೆಯೊಂದನ್ನು ಟೀಕಿಸುವಾಗ ನಾವು ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಬೇಕು . ಇಷ್ಟಾಗಿಯೂ ಕುನಾಲ್ ಅವರನ್ನು ಕೋರ್ಟ್ ಮನ್ನಿಸುತ್ತದೆಂದು ನಾನು ಭಾವಿಸಿದ್ದೇನೆ. ಇನ್ನು ವ್ಯವಸ್ಥೆಯಲ್ಲಿನ ಪಕ್ಷಪಾತದ ಬಗ್ಗೆ. ಒಕ್ಕೂಟ ಸರ್ಕಾರ ತನಗೆ ಬೇಕಾದಂತೆ ನಿಯಂತ್ರಿಸುತ್ತಿರುವುದರ ಬಗ್ಗೆ. ಆ ಬಗ್ಗೆ ಯಾವುದೇ ಸಂಶಯ ಬೇಡ. ಸುಧಾ ಭಾರದ್ವಾಜ್, ತೇಲ್ತುಂಬೆ ಕೇಸ್ ನ್ಯಾಯಮೂರ್ತಿ ಚಂದ್ರಚೂಡ್ ಪೀಠದ ಮುಂದೆ ಬಂದರೆ ನಿನ್ನೆ ಕೊಟ್ಟ ಕಾರಣ ನೀಡಿ ಚಂದ್ರಚೂಡ್ ಸರ್ಕಾರಕ್ಕೊಂದಿಷ್ಟು, ಪೊಲೀಸರಿಗೊಂದಿಷ್ಟು ಉಗಿದು ಬೇಲ್ ಕೊಡುತ್ತಾರೆ. ಆದರೆ ತನಗಾಗದ ಈ ಸಾಮಾಜಿಕ ಕಾರ್ಯಕರ್ತರ ಬೇಲ್ ಅರ್ಜಿ ಚಂದ್ರಚೂಡ್ ಪೀಠದ ಮುಂದೆ ಬರದಂತೆ ಈ ಸರ್ಕಾರ ನೋಡುಕೊಳ್ಳುತ್ತದೆ ಎನ್ನುವುದರಲ್ಲಿ ಯಾವುದೇ ಸಂದೇಹ ಬೇಡ. ಇಷ್ಟರವರೆಗೆ ಆಗಿರುವುದೂ ಅದೇ. ನಿನ್ನೆ ಆರ್ನಬ್ ಗೆ ಬೇಲ್ ಸಿಕ್ಕಿದೊಡನೆ ಗಾಳಿಯಲ್ಲಿ ಹಾರಿದವರಿಗೆ ಈ ಕಟು ಸತ್ಯ ಗೊತ್ತಿದ್ದರೆ ಈ ಅನ್ಯಾಯದ ವ್ಯವಸ್ಥೆಯಲ್ಲಿ ನಿಮ್ಮ ಪಾಲೂ ಇದೆ ಎಂಬ ಅರಿವು ಮೂಡಲಿ ಎಂದು ಕುಂಟಾಡಿ ನಿತೇಶ್ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...