Homeಮುಖಪುಟಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

- Advertisement -
- Advertisement -

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು. ಅದನ್ನು ಖಂಡಿಸಿ ಅವರ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಲು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅನುಮತಿ ನೀಡಿರುವುದು ಸರಿಯಷ್ಟೆ. ಈಗ ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್‌ಗಳು ಆರಂಭವಾಗಿವೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡುವಾಗ ನ್ಯಾಯಮೂರ್ತಿ ಚಂದ್ರಚೂಡ್‌ರವರು “ನಾನು ಆತನ ಚಾನೆಲ್ ನೋಡುವುದೇ ಇಲ್ಲ. ನಿಮಗೆ ಕಷ್ಟವಾದರೆ ನೀವು ಆತನ ಚಾನೆಲ್ ನೋಡಬೇಡಿ, ನಿರ್ಲಕ್ಷ್ಯ ಮಾಡಿ” ಎಂದು ಹೇಳಿದ್ದರು. ಈಗ ಅದೇ ಮಾತುಗಳನ್ನು ಪುನರುಚ್ಚರಿಸುತ್ತಿರುವ ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ನವೆಂಬರ್ 9 ರಂದು ಬಾಂಬೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಆಗ ಶೆಫಾಲಿ ವೈದ್ಯೆ ಎಂಬುವವರು “ಭಾರತವು ಸರಿಯಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿಲ್ಲ. ನಾವು ಇದುವರೆಗೂ ಹೊಂದಿರುವುದು ಕೇವಲ ಜೋಕ್ ಅಷ್ಟೇ” ಎಂದು ಟ್ವೀಟ್‌ ಮಾಡಿದ್ದರು.

ನವೆಂಬರ್ 11 ರಂದು ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಕುನಾಲ್ ಕಮ್ರ “ಈ ದೇಶದ ಸುಪ್ರೀಂ ಕೋರ್ಟ್ ಎನ್ನುವುದು, ಈ ದೇಶದ ಸುಪ್ರೀಂ ಜೋಕ್” ಎಂದು ಟ್ರೋಲ್ ಮಾಡಿದ್ದರು. ಅಲ್ಲದೇ ನ್ಯಾಯಾಂಗ ನಿಂದನೆ ಎನ್ನುವುದು ಹೀಗೆ ತೋರುತ್ತದೆ ಎಂದು ಸುಪ್ರೀಂ ಕೋರ್ಟಿಗೆ ಕೇಸರಿ ಬಣ್ಣ ಬಳಿದು, ಬಿಜೆಪಿ ಬಾವುಟ ಹಾರಿಸಿರುವ ಚಿತ್ರವೊಂದನ್ನು ಅವರು ಟ್ವೀಟ್ ಮಾಡಿದ್ದರು.

“ಇದನ್ನು ನ್ಯಾಯಾಂಗ ನಿಂದನೆ ಎಂದು ಕರೆಯಬೇಡಿ, ಇದನ್ನು ಭವಿಷ್ಯದ ರಾಜ್ಯಸಭೆ ಸ್ಥಾನದ ನಿಂದನೆ ಎಂದು ಕರೆಯಿರಿ” ಎಂಬುದಾಗಿ ನೇರವಾಗಿ ಚಂದ್ರಚೂಡ್‌ರವರನ್ನು ಟೀಕಿಸಿದ್ದ ಕುನಾಲ್ ಕಮ್ರರವರ ನಾಲ್ಕು ಟ್ವೀಟ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಗುರುವಾರ ಅನುಮತಿ ನೀಡಲಾಯಿತು. ಇದನ್ನು ವಿರೋಧಿಸಿ ಪ್ರತಿರೋಧದ ಭಾಗವಾಗಿ ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಅಲ್ಲದೇ ನೀವು ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವುದಾದರೆ ಈ ದೇಶದ ನ್ಯಾಯಾಂಗದಲ್ಲಿ ನಂಬಿಕೆಯಿಲ್ಲ ಎಂದು ನವೆಂಬರ್ 9 ರಂದು ಟ್ವೀಟ್ ಮಾಡಿದ್ದ ಶೆಫಾಲಿ ವೈದ್ಯೆಯ ವಿರುದ್ಧ ಮೊದಲು ವಿಚಾರಣೆ ನಡೆಸಿ. ನಂತರ ಕುನಾಲ್ ಮೇಲೆ. ನೀವು ಕ್ಯು ವ್ಯವಸ್ಥೆಯನ್ನು ಪಾಲಿಸಬೇಕು ಎಂದು ಟ್ರೋಲ್ ಮಾಡಿದ್ದಾರೆ.

ರಿಲ್ಯಾಕ್ಸ್, ಹುಡುಗರೇ. ಕುನಾಲ್ ಕಮ್ರಾ ಅವರಿಗೆ ಏನೂ ಆಗುವುದಿಲ್ಲ. ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಪನ್‌ಸ್ಟಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಜಸ್ಟಿಸ್ ಚಂದ್ರಚೂಡ್ ಅವರ ತೀರ್ಪು ಸರಿಯಾಗಿತ್ತು. ಅದರ ಟೀಕೆ ಸರಿಯಾದುದಲ್ಲ. ಇನ್ನೊಂದು ಕೇಸಿನಲ್ಲಿ ಅನ್ಯಾಯವಾಗಿದೆಯೆಂದು ಹೇಳುವುದಕ್ಕೆ ಈ ಜಡ್ಮೆಂಟನ್ನು ದೂರವುದು ತಪ್ಪಾಗುತ್ತದೆ. ನಾವೇ ಘನತೆಯಿತ್ತು ಕಟ್ಟಿಕೊಂಡ ಸಂಸ್ಥೆಯೊಂದನ್ನು ಟೀಕಿಸುವಾಗ ನಾವು ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಬೇಕು . ಇಷ್ಟಾಗಿಯೂ ಕುನಾಲ್ ಅವರನ್ನು ಕೋರ್ಟ್ ಮನ್ನಿಸುತ್ತದೆಂದು ನಾನು ಭಾವಿಸಿದ್ದೇನೆ. ಇನ್ನು ವ್ಯವಸ್ಥೆಯಲ್ಲಿನ ಪಕ್ಷಪಾತದ ಬಗ್ಗೆ. ಒಕ್ಕೂಟ ಸರ್ಕಾರ ತನಗೆ ಬೇಕಾದಂತೆ ನಿಯಂತ್ರಿಸುತ್ತಿರುವುದರ ಬಗ್ಗೆ. ಆ ಬಗ್ಗೆ ಯಾವುದೇ ಸಂಶಯ ಬೇಡ. ಸುಧಾ ಭಾರದ್ವಾಜ್, ತೇಲ್ತುಂಬೆ ಕೇಸ್ ನ್ಯಾಯಮೂರ್ತಿ ಚಂದ್ರಚೂಡ್ ಪೀಠದ ಮುಂದೆ ಬಂದರೆ ನಿನ್ನೆ ಕೊಟ್ಟ ಕಾರಣ ನೀಡಿ ಚಂದ್ರಚೂಡ್ ಸರ್ಕಾರಕ್ಕೊಂದಿಷ್ಟು, ಪೊಲೀಸರಿಗೊಂದಿಷ್ಟು ಉಗಿದು ಬೇಲ್ ಕೊಡುತ್ತಾರೆ. ಆದರೆ ತನಗಾಗದ ಈ ಸಾಮಾಜಿಕ ಕಾರ್ಯಕರ್ತರ ಬೇಲ್ ಅರ್ಜಿ ಚಂದ್ರಚೂಡ್ ಪೀಠದ ಮುಂದೆ ಬರದಂತೆ ಈ ಸರ್ಕಾರ ನೋಡುಕೊಳ್ಳುತ್ತದೆ ಎನ್ನುವುದರಲ್ಲಿ ಯಾವುದೇ ಸಂದೇಹ ಬೇಡ. ಇಷ್ಟರವರೆಗೆ ಆಗಿರುವುದೂ ಅದೇ. ನಿನ್ನೆ ಆರ್ನಬ್ ಗೆ ಬೇಲ್ ಸಿಕ್ಕಿದೊಡನೆ ಗಾಳಿಯಲ್ಲಿ ಹಾರಿದವರಿಗೆ ಈ ಕಟು ಸತ್ಯ ಗೊತ್ತಿದ್ದರೆ ಈ ಅನ್ಯಾಯದ ವ್ಯವಸ್ಥೆಯಲ್ಲಿ ನಿಮ್ಮ ಪಾಲೂ ಇದೆ ಎಂಬ ಅರಿವು ಮೂಡಲಿ ಎಂದು ಕುಂಟಾಡಿ ನಿತೇಶ್ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...