Homeಮುಖಪುಟಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕುನಾಲ್ ಕಮ್ರ ಟ್ವೀಟ್ ಇಷ್ಟವಾಗದಿದ್ದರೆ, ಓದಬೇಡಿ ಅಷ್ಟೇ: ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್!

ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

- Advertisement -
- Advertisement -

ವಂಚನೆ ಮತ್ತು ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಸಂದರ್ಭದಲ್ಲಿ ದೇಶದಲ್ಲಿ ನೂರಾರು ಹೋರಾಟಗಾರರು ಹಲವಾರು ವರ್ಷಗಳಿಂದ ರಾಜಕೀಯ ಖೈದಿಗಳಾಗಿ ಜೈಲಿನಲ್ಲಿದ್ದರೂ ಅವರಿಗೆ ಏಕೆ ಜಾಮೀನು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಖ್ಯಾತ ಸ್ಟಾಂಡಪ್ ಕಮಿಡಿಯನ್ ಕುನಾಲ್ ಕಮ್ರ ಸುಪ್ರೀಂ ತೀರ್ಪನ್ನು ಟ್ರೋಲ್ ಮಾಡಿದ್ದರು. ಅದನ್ನು ಖಂಡಿಸಿ ಅವರ ವಿರುದ್ದ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಲು ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅನುಮತಿ ನೀಡಿರುವುದು ಸರಿಯಷ್ಟೆ. ಈಗ ಟ್ವಿಟ್ಟರ್‌ನಲ್ಲಿ ಮತ್ತಷ್ಟು ಟ್ರೋಲ್‌ಗಳು ಆರಂಭವಾಗಿವೆ.

ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡುವಾಗ ನ್ಯಾಯಮೂರ್ತಿ ಚಂದ್ರಚೂಡ್‌ರವರು “ನಾನು ಆತನ ಚಾನೆಲ್ ನೋಡುವುದೇ ಇಲ್ಲ. ನಿಮಗೆ ಕಷ್ಟವಾದರೆ ನೀವು ಆತನ ಚಾನೆಲ್ ನೋಡಬೇಡಿ, ನಿರ್ಲಕ್ಷ್ಯ ಮಾಡಿ” ಎಂದು ಹೇಳಿದ್ದರು. ಈಗ ಅದೇ ಮಾತುಗಳನ್ನು ಪುನರುಚ್ಚರಿಸುತ್ತಿರುವ ನೆಟ್ಟಿಗರು “ಕುನಾಲ್ ಕಮ್ರ ಟ್ವೀಟ್ ನಿಮಗೆ ಇಷ್ಟವಾಗದಿದ್ದರೆ ಅದನ್ನು ಓದಬೇಡಿ ಅಷ್ಟೇ” ಅವರ ಮೇಲೆಕೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುತ್ತೀರಿ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸುತ್ತಿದ್ದಾರೆ.

ಅರ್ನಾಬ್ ಗೋಸ್ವಾಮಿಗೆ ನವೆಂಬರ್ 9 ರಂದು ಬಾಂಬೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಆಗ ಶೆಫಾಲಿ ವೈದ್ಯೆ ಎಂಬುವವರು “ಭಾರತವು ಸರಿಯಾದ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿಲ್ಲ. ನಾವು ಇದುವರೆಗೂ ಹೊಂದಿರುವುದು ಕೇವಲ ಜೋಕ್ ಅಷ್ಟೇ” ಎಂದು ಟ್ವೀಟ್‌ ಮಾಡಿದ್ದರು.

ನವೆಂಬರ್ 11 ರಂದು ಸುಪ್ರೀಂ ಕೋರ್ಟ್ ಅರ್ನಾಬ್‌ಗೆ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಕುನಾಲ್ ಕಮ್ರ “ಈ ದೇಶದ ಸುಪ್ರೀಂ ಕೋರ್ಟ್ ಎನ್ನುವುದು, ಈ ದೇಶದ ಸುಪ್ರೀಂ ಜೋಕ್” ಎಂದು ಟ್ರೋಲ್ ಮಾಡಿದ್ದರು. ಅಲ್ಲದೇ ನ್ಯಾಯಾಂಗ ನಿಂದನೆ ಎನ್ನುವುದು ಹೀಗೆ ತೋರುತ್ತದೆ ಎಂದು ಸುಪ್ರೀಂ ಕೋರ್ಟಿಗೆ ಕೇಸರಿ ಬಣ್ಣ ಬಳಿದು, ಬಿಜೆಪಿ ಬಾವುಟ ಹಾರಿಸಿರುವ ಚಿತ್ರವೊಂದನ್ನು ಅವರು ಟ್ವೀಟ್ ಮಾಡಿದ್ದರು.

“ಇದನ್ನು ನ್ಯಾಯಾಂಗ ನಿಂದನೆ ಎಂದು ಕರೆಯಬೇಡಿ, ಇದನ್ನು ಭವಿಷ್ಯದ ರಾಜ್ಯಸಭೆ ಸ್ಥಾನದ ನಿಂದನೆ ಎಂದು ಕರೆಯಿರಿ” ಎಂಬುದಾಗಿ ನೇರವಾಗಿ ಚಂದ್ರಚೂಡ್‌ರವರನ್ನು ಟೀಕಿಸಿದ್ದ ಕುನಾಲ್ ಕಮ್ರರವರ ನಾಲ್ಕು ಟ್ವೀಟ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಗುರುವಾರ ಅನುಮತಿ ನೀಡಲಾಯಿತು. ಇದನ್ನು ವಿರೋಧಿಸಿ ಪ್ರತಿರೋಧದ ಭಾಗವಾಗಿ ಕವಿತಾ ಕೃಷ್ಣನ್, ರವಿ ನಾಯರ್, ಅಶೋಕ್ ಸ್ವೈನ್ ಸೇರಿದಂತೆ ನೂರಾರು ಹೋರಾಟಗಾರರು ಕುನಾಲ್ ಕಮ್ರರವರ ಆ ಟ್ವೀಟ್‌ಗಳನ್ನು ರೀಟ್ವೀಟ್ ಮಾಡುವ ಮೂಲಕ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಅಲ್ಲದೇ ನೀವು ನ್ಯಾಯಾಂಗ ನಿಂದನೆ ವಿಚಾರಣೆ ನಡೆಸುವುದಾದರೆ ಈ ದೇಶದ ನ್ಯಾಯಾಂಗದಲ್ಲಿ ನಂಬಿಕೆಯಿಲ್ಲ ಎಂದು ನವೆಂಬರ್ 9 ರಂದು ಟ್ವೀಟ್ ಮಾಡಿದ್ದ ಶೆಫಾಲಿ ವೈದ್ಯೆಯ ವಿರುದ್ಧ ಮೊದಲು ವಿಚಾರಣೆ ನಡೆಸಿ. ನಂತರ ಕುನಾಲ್ ಮೇಲೆ. ನೀವು ಕ್ಯು ವ್ಯವಸ್ಥೆಯನ್ನು ಪಾಲಿಸಬೇಕು ಎಂದು ಟ್ರೋಲ್ ಮಾಡಿದ್ದಾರೆ.

ರಿಲ್ಯಾಕ್ಸ್, ಹುಡುಗರೇ. ಕುನಾಲ್ ಕಮ್ರಾ ಅವರಿಗೆ ಏನೂ ಆಗುವುದಿಲ್ಲ. ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇದೆ ಎಂದು ಪನ್‌ಸ್ಟಾರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಜಸ್ಟಿಸ್ ಚಂದ್ರಚೂಡ್ ಅವರ ತೀರ್ಪು ಸರಿಯಾಗಿತ್ತು. ಅದರ ಟೀಕೆ ಸರಿಯಾದುದಲ್ಲ. ಇನ್ನೊಂದು ಕೇಸಿನಲ್ಲಿ ಅನ್ಯಾಯವಾಗಿದೆಯೆಂದು ಹೇಳುವುದಕ್ಕೆ ಈ ಜಡ್ಮೆಂಟನ್ನು ದೂರವುದು ತಪ್ಪಾಗುತ್ತದೆ. ನಾವೇ ಘನತೆಯಿತ್ತು ಕಟ್ಟಿಕೊಂಡ ಸಂಸ್ಥೆಯೊಂದನ್ನು ಟೀಕಿಸುವಾಗ ನಾವು ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಬೇಕು . ಇಷ್ಟಾಗಿಯೂ ಕುನಾಲ್ ಅವರನ್ನು ಕೋರ್ಟ್ ಮನ್ನಿಸುತ್ತದೆಂದು ನಾನು ಭಾವಿಸಿದ್ದೇನೆ. ಇನ್ನು ವ್ಯವಸ್ಥೆಯಲ್ಲಿನ ಪಕ್ಷಪಾತದ ಬಗ್ಗೆ. ಒಕ್ಕೂಟ ಸರ್ಕಾರ ತನಗೆ ಬೇಕಾದಂತೆ ನಿಯಂತ್ರಿಸುತ್ತಿರುವುದರ ಬಗ್ಗೆ. ಆ ಬಗ್ಗೆ ಯಾವುದೇ ಸಂಶಯ ಬೇಡ. ಸುಧಾ ಭಾರದ್ವಾಜ್, ತೇಲ್ತುಂಬೆ ಕೇಸ್ ನ್ಯಾಯಮೂರ್ತಿ ಚಂದ್ರಚೂಡ್ ಪೀಠದ ಮುಂದೆ ಬಂದರೆ ನಿನ್ನೆ ಕೊಟ್ಟ ಕಾರಣ ನೀಡಿ ಚಂದ್ರಚೂಡ್ ಸರ್ಕಾರಕ್ಕೊಂದಿಷ್ಟು, ಪೊಲೀಸರಿಗೊಂದಿಷ್ಟು ಉಗಿದು ಬೇಲ್ ಕೊಡುತ್ತಾರೆ. ಆದರೆ ತನಗಾಗದ ಈ ಸಾಮಾಜಿಕ ಕಾರ್ಯಕರ್ತರ ಬೇಲ್ ಅರ್ಜಿ ಚಂದ್ರಚೂಡ್ ಪೀಠದ ಮುಂದೆ ಬರದಂತೆ ಈ ಸರ್ಕಾರ ನೋಡುಕೊಳ್ಳುತ್ತದೆ ಎನ್ನುವುದರಲ್ಲಿ ಯಾವುದೇ ಸಂದೇಹ ಬೇಡ. ಇಷ್ಟರವರೆಗೆ ಆಗಿರುವುದೂ ಅದೇ. ನಿನ್ನೆ ಆರ್ನಬ್ ಗೆ ಬೇಲ್ ಸಿಕ್ಕಿದೊಡನೆ ಗಾಳಿಯಲ್ಲಿ ಹಾರಿದವರಿಗೆ ಈ ಕಟು ಸತ್ಯ ಗೊತ್ತಿದ್ದರೆ ಈ ಅನ್ಯಾಯದ ವ್ಯವಸ್ಥೆಯಲ್ಲಿ ನಿಮ್ಮ ಪಾಲೂ ಇದೆ ಎಂಬ ಅರಿವು ಮೂಡಲಿ ಎಂದು ಕುಂಟಾಡಿ ನಿತೇಶ್ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...