Homeಕರ್ನಾಟಕಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

- Advertisement -
- Advertisement -

ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು, ಮೊಳಕೆಯಲ್ಲೇ ಚಿವುಟಿ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸಭೆ ನಡೆಸಿದ ಸಿಎಂ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕುವುದು ಡಿಸಿ, ಸಿಇಒಗಳ ಜವಾಬ್ದಾರಿ ತಾನೇ? ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಪಟ್ಟಂತೆ ಕೆಲವು ಇಲಾಖೆಗಳು ಶೇಕಡ 100ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿಯಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ ಎಂದು ಸಿಎಂ ಹೇಳಿದರು.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒಗಳು ತಮ್ಮ ಅಹಂ ಬದಿಗೊತ್ತಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

10 ಅಕ್ಟೋಬರ್ 1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವಿಸ್ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು. ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು”.

“ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ” ಎಂದು ಸಿಎಂ ಅಧಿಕಾರಿಗಳನ್ನು ಎಚ್ಚರಿಸಿದರು.

ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿಗಳು ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆಯಾಗುತ್ತಾರೆ ಎಂದರು.

ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ ಎಂದು ಹೇಳಿದರು.

ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ. ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಸಿಎಂ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...