Homeಕರ್ನಾಟಕಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸಂವಿಧಾನ-ಜನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಿಮ್ಮ ವಿರುದ್ಧವೇ ಕ್ರಮ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

- Advertisement -
- Advertisement -

ಸಂವಿಧಾನದ ಆಶಯ ಮತ್ತು ಧ್ಯೇಯೋದ್ದೇಶಗಳಿಗೆ ಯಾರೂ ವಿರುದ್ಧವಾಗಿ ಕಾರ್ಯನಿರ್ವಹಿಸಬಾರದು. ಅಂತಹ ಶಕ್ತಿಗಳು ಬೆಳೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು, ಮೊಳಕೆಯಲ್ಲೇ ಚಿವುಟಿ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸಭೆ ನಡೆಸಿದ ಸಿಎಂ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕುವುದು ಡಿಸಿ, ಸಿಇಒಗಳ ಜವಾಬ್ದಾರಿ ತಾನೇ? ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಹಿಂದಿನ ಸಭೆಯಲ್ಲಿ ನೀಡಿದ ಸೂಚನೆಗಳು, ತೆಗೆದುಕೊಂಡ ನಿರ್ಣಯಗಳಿಗೆ ಸಂಬಂಧಪಟ್ಟಂತೆ ಕೆಲವು ಇಲಾಖೆಗಳು ಶೇಕಡ 100ರಷ್ಟು ಪ್ರಗತಿ ತೋರಿಸಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜಿಯಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಮೇಲೆ ನಿಷ್ಠುರವಾಗಿ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯ ಆಗುತ್ತದೆ ಎಂದು ಸಿಎಂ ಹೇಳಿದರು.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಸಿಇಒಗಳು ತಮ್ಮ ಅಹಂ ಬದಿಗೊತ್ತಿ ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ಈ ಉದ್ದೇಶಕ್ಕೇ ನೀವುಗಳು ಐಎಎಸ್‌ ಮಾಡಿರುವುದು. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

10 ಅಕ್ಟೋಬರ್ 1949 ರಂದು ಸಂವಿಧಾನ ಜಾರಿ ಸಭೆಯಲ್ಲಿ ಇಂಡಿಯನ್‌ ಸಿವಿಲ್‌ ಸರ್ವಿಸ್ ಬೇಕಾ ಎಂದು ಚರ್ಚೆ ಆಗಿ ಐಎಎಸ್‌ ಬೇಕು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಆ ಸಭೆಯಲ್ಲಿ ವಲ್ಲಭಾಬಾಯಿ ಪಟೇಲರು “ದೇಶವನ್ನು ನೈಜ ಸ್ವಾತಂತ್ರ್ಯ ಹೋರಾಟಗಳ ಆಶಯದಲ್ಲಿ ಮುನ್ನಡೆಸಲು ಐಎಎಸ್‌ ಸೇವೆ ಇರಬೇಕು. ಇದರ ನೈಜ ಕಾಳಜಿಯನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು”.

“ವಲ್ಲಭಬಾಯಿ ಅವರ ಮಾತನ್ನು ನಾವು ಅರ್ಥಮಾಡಿಕೊಳ್ಳಬೇಕು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲಸ ಮಾಡುವವರ ವಿರುದ್ಧ ಮತ್ತು ಜನಪರ ಆಶಯಗಳಿಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನೀವೆಲ್ಲ ಸಂವಿಧಾನ ಓದಿದ್ದೀರಿ, ಅದರ ಆಶಯಗಳಿಗೆ, ಧ್ಯೇಯೋದ್ದೇಶಗಳಿಗೆ ಬದ್ದರಾಗಿದ್ದೀರಿ ಎಂದು ನಂಬಿದ್ದೇನೆ. ಇದನ್ನು ಕಾರ್ಯರೂಪಕ್ಕೆ ತರುವುದರಲ್ಲಿ ವಿಫಲರಾದವರ ವಿರುದ್ಧ ನಾನು ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲು ನಿರ್ಧಿರಿಸಿದ್ದೇನೆ” ಎಂದು ಸಿಎಂ ಅಧಿಕಾರಿಗಳನ್ನು ಎಚ್ಚರಿಸಿದರು.

ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿಗಳು ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಿಎಂ ತಾಕೀತು ಮಾಡಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅಭಿವೃದ್ಧಿ ಕುಂಟಿತವಾದಂತೆ. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ನೇರ ಹೊಣೆಯಾಗುತ್ತಾರೆ ಎಂದರು.

ನಾವು ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ನಾವು ಮತ್ತು ನೀವು ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದು ಜನರ ತೆರಿಗೆ ಹಣದಿಂದ ಎನ್ನುವುದನ್ನು ಮರೆಯಬಾರದು. ಕಾರು, ಮನೆ ಸೇರಿ ಎಲ್ಲಾ ಸವಲತ್ತುಗಳನ್ನು ನಾವು ಕೊಟ್ಟಿರುವುದು ತೆರಿಗೆ ಹಣದಲ್ಲಿ. ಆದ್ದರಿಂದ ಜನಪರ ಧೋರಣೆಯಲ್ಲಿ ಕೆಲಸ ಮಾಡಬೇಕು. ಇದೇ ಪ್ರಜಾಪ್ರಭುತ್ವದ ಮೂಲ ಆಶಯ ಎಂದು ಹೇಳಿದರು.

ಜಿಲ್ಲಾ ಮಟ್ಟದ ಶಾಂತಿ ಸಮಿತಿ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರ್ತಾರೆ. ಶಾಂತಿ ಕಾಪಾಡಲು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಶಾಂತಿಭಂಗ ಆದ ಮೇಲೆ ಪೋಸ್ಟ್‌ ಮಾರ್ಟಂ ಮಾಡುತ್ತಾ ಕೂರಬಾರದು. ಮೊದಲೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಏನು ಸಮಸ್ಯೆ ನಿಮಗೆ ಎಂದು ಪ್ರಶ್ನಿಸಿದರು.

ಬಾಲ್ಯ ವಿವಾಹ ಆಗುವುದು ಜಿಲ್ಲಾಧಿಕಾರಿಗಳ ಗಮನಕ್ಕೆ ಏಕೆ ಬರುವುದಿಲ್ಲ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ಕೆಳಗಿನವರು ನಿಮಗೆ ಹೇಳದಿದ್ದರೆ ನಿಮಗೆ ದಕ್ಷತೆ ಇಲ್ಲ ಎಂದು ಅರ್ಥ. ನಿಮಗೆ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ, ನಿಮ್ಮ ಬಗ್ಗೆ ಅವರಿಗೆ ಭಯ ಇಲ್ಲ ಎಂದೇ ಅರ್ಥ ಎಂದು ತರಾಟೆಗೆ ತೆಗೆದುಕೊಂಡರು.

ಈ ವರ್ಷ 700 ಬಾಲ್ಯ ವಿವಾಹ ನಡೆದಿದೆ. ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್‌ಐಆರ್‌ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ 7೦೦ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಹೇಗೆ? ಬಾಲ್ಯವಿವಾಹ ತಡೆಗೆ ಕಾಯ್ದೆ, ಕಾನೂನುಗಳಿವೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಕೆಲವು ಕಡೆ ಬಳಸಿಲ್ಲ. ಇದು ತಪ್ಪಲ್ಲವೇ ಎಂದು ಸಿಎಂ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಬಲವಂತದ ಭೂಸ್ವಾಧೀನ ವಿರೋಧಿಸಿ ಸಂಯುಕ್ತ ಹೋರಾಟದಿಂದ ‘ದೇವನಹಳ್ಳಿ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...