Homeಕರ್ನಾಟಕತಂದೆ-ತಾಯಿ ಹಾಗೂ ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ತಂದೆ-ತಾಯಿ ಹಾಗೂ ಹಿರಿಯ ನಾಗರೀಕರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

- Advertisement -
- Advertisement -

• ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007
• ಕೇಂದ್ರ ಸರ್ಕಾರದ ಕಾಯ್ದೆಯ ಬಗ್ಗೆ ಪರಿಷತ್ನಲ್ಲಿ ಮಾಹಿತಿ ನೀಡಿದ ಸಚಿವರು
• ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರು ನೀಡಿದ ವಿಲ್-ದಾನಪತ್ರ ರದ್ದು
• ʼಎಸಿʼಗಳ ಹೆಗಲಿಗೆ ಹಿರಿಯ ನಾಗರೀಕರ ಹಕ್ಕನ್ನು ರಕ್ಷಿಸುವ ಹೊಣೆ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಪರಿಷತ್ನಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಬುಧವಾರ ವಿಧಾನ ಪರಿಷತ್ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, “ಕೇಂದ್ರ ಸರ್ಕಾರದ “ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ಧಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.

ಮುಂದುವರೆದು, “ ಕೇಂದ್ರ ಸರ್ಕಾರ 2007 ರಲ್ಲೇ ʼಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು” ಎಂದು ತಿಳಿಸಿದರು.

“ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ಧಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

ಕದನ ವಿರಾಮ: ಇಸ್ರೇಲ್ ನಡೆಸಿದ ಗುಂಡಿನ ದಾಳಿಗೆ 4 ಪ್ಯಾಲೆಸ್ತೀನಿಯರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Parents who were in good position in their job. Getting good salary could able to lead good life. After their retirement there is no pension. Whatever money earned could able to spent on children educatuon, marriage and small amount for a small home to construct. At last there is no money for further life. Children’s are job less earnings is comparatively very low how can parent blame children . It is all because of unwise decission of govt. Not considered sr. Citizens are not atall human beings after 30years of service no pension who’s fault it is . Govt should think on the PENSION of all retired employees. These kind of new rules on children’s of senior citizens is not wise it is only a pseudo conserne and drama as if govt.is helping senior citizens. Let they stop mass mesmerizing

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...