Homeಮುಖಪುಟ‘ಮರೆತೇನೆಂದರೂ ಮರೆಯಲಿ ಹೆಂಗೆ’ - ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

‘ಮರೆತೇನೆಂದರೂ ಮರೆಯಲಿ ಹೆಂಗೆ’ – ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

- Advertisement -
- Advertisement -

ಅಜ್ಞಾತವಾಸದಲ್ಲಿದ್ದರೂ ಆಗಾಗ ಕೇಳುತ್ತಲೇ ಇದ್ದ ಹೆಸರು ಜಿ. ರಾಜಶೇಖರ್. ಕರಾವಳಿ ಕೋಮುವಾದಿ ಜ್ವಾಲೆಗೆ ಸಿಕ್ಕಿತ್ತು. ರಥಬೀದಿ ಗೆಳೆಯರು ಬಕೆಟ್ ಹಿಡಿದು ಬೆಂಕಿ ನಂದಿಸಲು ಹೆಣಗುತ್ತಿದ್ದರು. ನಕ್ಕು ಸುಮ್ಮನಿದ್ದವರ ಮುಂದೆ ಈ ಸಣ್ಣ ಫೈರ್ ಬ್ರಿಗೇಡ್ ನಮ್ಮ ಮನಕ್ಕೆ ಎಂಥದೋ ಹಿತ ನೀಡುತ್ತಿತ್ತು. ತುಂಬಾ ವರ್ಷಗಳ ಕಾಲ ಅವರ ಬಗ್ಗೆ ಬಹಳ ಕೇಳಿದೆ, ಸ್ವಲ್ಪ ಓದಿದೆ. ಜೀವನದಲ್ಲಿ ಏನೇನೋ ನಡೆದುಹೋಯಿತು.

ಒಂದು ವಿಶೇಷ ಸಂದರ್ಭದಲ್ಲಿ ಮುಖ್ಯವಾಹಿನಿಗೆ ಮರಳುವ ಅವಕಾಶವೂ ದೊರೆಯಿತು. ಪ್ರೀತಿಯ ಸಮಾಜ ಸ್ವಾಗತಿಸಿತ್ತು. ಆದರೆ ಕಾನೂನು ಪ್ರಕ್ರಿಯೆ ಬಾಕಿ ಉಳಿದಿತ್ತು. ಉಡುಪಿಯಲ್ಲಿ UAPA ಒಳಗೊಂಡಂತೆ ನನ್ನ ಮೇಲೆ ಹಲವು ಕೇಸುಗಳಿದ್ದವು. ಬೇಲ್ ಪಡೆಯಲು ಜಾಮೀನು ಬೇಕಿತ್ತು. ನಕ್ಸಲೈಟನಿಗೆ ಜಾಮೀನು ನೀಡುವುದು ಸುಲಭವಲ್ಲ. ವಿಶ್ವಾಸ, ಗುಂಡಿಗೆ ಎರಡೂ ಇರಬೇಕಿತ್ತು. ಆದರೆ ರಾಜಶೇಖರರಿಗೆ ಅವ್ಯಾವುವೂ ಅಗತ್ಯವಿರಲಿಲ್ಲ. ಕನ್ವಿನ್ಸ್ ಮಾಡೋಣ ಎಂದು ಮಿತ್ರರು ಹೋದರಂತೆ. ಆದರೆ ಪೀಠಿಕೆ ಹಾಕುವ ಅಗತ್ಯವೂ ಬೀಳಲಿಲ್ಲವಂತೆ. “ಸರಿ ಕೊಡೋಣಬಿಡಿ, ಅದಕ್ಕೇನು? ನಾನು ಕೋರ್ಟಿಗೆ ಏನೆಲ್ಲಾ ತರಬೇಕು?” ಎಂದು ಕೇಳಿದರಂತೆ. ಮನುಷ್ಯರನ್ನು ನಂಬಲು‌ ಮನುಷ್ಯರಾಗಿದ್ದರೆ ಸಾಕು ಎಂಬ ಸಹಜ ವ್ಯಕ್ತಿತ್ವ ನಮ್ಮ ಸಾರ್‌ದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲಿ ಇದು ಸಾಲಲ್ಲ ಎಂದು ರಿಜೆಕ್ಟ್ ಮಾಡಿಬಿಡ್ತಾರೋ ಅಂತ ಲಾಯರ ಬಳಿ ಹಲವಾರು ಬಾರಿ ವಿಚಾರಿಸಿ, ಓಡಾಡಿ ಡಾಕ್ಯುಮೆಂಟ್ ತೆಗೆಸಿ, ಡಬಲ್ ಡಬಲ್ ಫೋಟೋಗಳನ್ನು ತೆಗೆದುಕೊಂಡು, ತಮ್ಮ ಕೊಡೆಯೊಂದಿಗೆ ನಾವು ಬರುವ ಮುನ್ನವೇ ಕೋರ್ಟಲ್ಲಿ ಬಂದು ಕಾಯುತ್ತಿದ್ದರು. ನೋಡಿ “ಮತ್ತೆ…” ಎಂದರು….ಜೀವಮಾನದ ಒಡನಾಡಿ ಎಂಬಂತೆ. ನಾನು ಅವರನ್ನು ಮೊದಲ ಬಾರಿ ಕಂಡದ್ದು ಆ ಕ್ಷಣದಲ್ಲೆ.

ನಾನು ಕಟಕಟೆಯಲ್ಲಿ ನಿಂತಿದ್ದೆ. ಅವರು ಹೊರಗಿದ್ದರು. ಕಾರಕೂನ ಅವರ ಹೆಸರು ಕೂಗಿದೊಡನೆ ಲಗುಬಗೆಯಿಂದ ಒಳಬಂದವರೇ ಸೀದಾ ಕಟಕಟೆಯಲ್ಲಿ ಬಂದು ನನ್ನ ಜೊತೆ ನಿಂತರು. ಅಲ್ಲಿ ಬೇಡ ಇಲ್ಲಿ ಬನ್ನಿ ಎಂದು ವಕೀಲರು ಅವರನ್ನು ಜಡ್ಜ್ ಬಳಿಗೆ ಕರೆದೊಯ್ದರು. ಹೊರ ಬಂದರೆ ಶಿವಸುಂದರದು ಒಂದೇ ಸಮ ನಗು. ಸಹ ಆರೋಪಿ ರಾಜಶೇಖರ್ ಎಂದು ಗೇಲಿ ಮಾಡಿದ್ದರು. ಮುಗ್ದ ರಾಜಶೇಖರರಿಗೆ ಅದರಿಂದ ಮುಜುಗರವೂ ಅನಿಸಲಿಲ್ಲ. ಸಹಜವಾಗಿಯೇ ಅವರು ನಾನು ಜೊತೆಗಿದ್ದೇನೆ ಎಂದು ನನ್ನ ಜೊತೆ ಕಟಕಟೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

ಅಂದಿನಿಂದ ನನ್ನ ಕೇಸ್ ಮುಗಿಯುವ ತನಕ ನಾನು ತಪ್ಪಿಸಿದರೂ ಅವರು ಕೋರ್ಟಿಗೆ ತಪ್ಪಿಸಲಿಲ್ಲ. ಕೋರ್ಟಿಗೆ ಅವರು ಬೇಕಿರಲಿಲ್ಲ. ಆದರೆ ಅವರಿಗೆ ಕೋರ್ಟಿಗೆ ಬರುವುದು ಮುಖ್ಯವಿತ್ತು. ಕೋರ್ಟಿನಲ್ಲಿ ನನಗೆ ಒಂಟಿತನ ಕಾಡಬಾರದು ಎಂಬುದು ಅವರ ಕಾಳಜಿಯಾಗಿತ್ತು. ಪ್ರತಿ ಡೇಟಿಗೆ ಬಂದು ಮಾತನಾಡಿಸಿ, ಕ್ಯಾಂಟೀನಿಗೆ ಕರೆದುಕೊಂಡು ಹೋಗಿ ಮಂಗಳೂರು ಬಜಿ, ಎಳ್ಳಿನ ಪಾನಕ ಕೊಡಿಸಿ, “ಬರ್ತೇನೆ..” ಅಂತ ಹೊರಡುತ್ತಿದ್ದರು.

ನನ್ನ ಕೇಸಿನ ವಿಚಾರಣೆ ಮುಗಿದು ತೀರ್ಪಿನ ದಿನ ಬರುವ ಹೊತ್ತಿಗೆ ಅವರಿಗೆ ಪಾರ್ಕಿನ್ಸನ್ ಆಗಿತ್ತು, ದೇಹ ಕೃಷವಾಗಿತ್ತು. ಆದರೂ ಕೋರ್ಟಿಗೆ ಬಂದು ಮತ್ತೊಮ್ಮೆ ಜಾಮೀನು ಧೃಡೀಕರಿಸಬೇಕಿತ್ತು. ಮಗ ವಿಷ್ಣುವಿಗೆ ಚಿಂತೆ. ಕೋರ್ಟಿನ ಮೆಟ್ಟಿಲು ಹತ್ತಿಸಿ ಕರೆತರುವುದು ಹೇಗೆ? ಜಡ್ಜ್ ಕೇಳುವ ಪ್ರಶ್ನೆಗೆ ಉತ್ತರಿಸುವಂತೆ ಮಾಡುವುದು ಹೇಗೆ? ಆಟೋದಲ್ಲಿ ಹುಶಾರಾಗಿ ಕರೆತಂದರು. ರಾಜಶೇಖರರ ದೇಹ ನಡುಗುತ್ತಿದ್ದರೂ ಮುಖ ಎಂದಿನಂತೆ ನಿಶ್ಚಲವಾಗಿತ್ತು.

ಜಡ್ಜ್ ಕೇಳಿದರು
“ಇವರ್ಯಾರು ಗೊತ್ತಾ?”
“ಗೊತ್ತು”.
“ಇವರು ನಿಮಗೆ ಏನಾಗಬೇಕು?”
“ನನ್ನ ಸ್ನೇಹಿತರು”
“ಇವರಿಗೆ ನೀವು ಶ್ಯೂರಿಟಿ ಕೊಡ್ತೀರಾ?”
“ಕೊಡ್ತೇನೆ”

ಕೇಸ್ ಖುಲಾಸ್ ಆಯಿತು. ನಾನು ಕಾನೂನಾತ್ಮಕವಾಗಿಯೂ ಬಿಡುಗಡೆಗೊಂಡೆ. ಎಂದಿನಂತೆ “ಬರ್ಲಾ…” ಎಂದು ವಿಷ್ಣು ಕೈ ಹಿಡಿದು ಹೊರಟರು.

ಇದನ್ನೂ ಓದಿ: ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಮತ್ತೆ ಕಂಡದ್ದು ಇತ್ತೀಚಿನ ಸಹಬಾಳ್ವೆ ಸಮಯದಲ್ಲೆ. ನಾನು, ಅಶೋಕ್, ದಿನಕರ ಬೇಂಗ್ರೆ ಮನೆಗೆ ಹೋದೆವು. ಗುರುಗಳು ಬದಲಾಗೇ ಇಲ್ಲ. ಮುಖದಲ್ಲಿ ಅದೇ ದೃಡತೆ, ಮಾತಿನಲ್ಲಿ ಅದೇ ಲವಲವಿಕೆ. ಭಾವನೆ ಕಾಣದ ಮುಖದಿಂದ ನಿಲ್ಲದ ನಗೆ ಚಟಾಕಿ. ಗೆಳೆಯರು‌ ಮನೆಗೆ ಬಂದಿದ್ದಾರೆ ಎಂದು ಇನ್ನಷ್ಟು ಹುರುಪು. ವಿಷ್ಣು ವಿಡಿಯೋ ಮಾಡತೊಡಗಿದರು. ಮಗನ ಕೆಣಕುವ ಪ್ರಶ್ನೆಗಳಿಗೆ ಅಪ್ಪನ ಖಚಿತತೆಯ ಉತ್ತರ.

“ಮತ್ತೆ ಏನ್ಸಮಾಚಾರ”
“ಮೇ 7 ಕ್ಕೆ ಕಾರ್ಯಕ್ರಮ”
“ಯಾವ ಕಾರ್ಯಕ್ರಮ?”
“ಕೋಮು ಸೌಹಾರ್ದದ್ದು”
“ನೀವು ಹೋಗ್ತೀರಾ?”
“ಹಾಂ ಹೋಗ್ತೇನೆ….ನಾನು ಹೋಗದಿದ್ದರೆ ಆಗಲ್ಲ”.

ಇದು ನಮ್ಮ ರಾಜಶೇಖರ್ ಸಾರ್…

ನನ್ನ ಜೀವನದಲ್ಲಿ ಅನಿರೀಕ್ಷಿತ ಆಪದ್ಬಾಂಧವರಾಗಿ ಬಂದ ಹಿರಿ ಜೀವ ಅದು. ಅವರ ಆತ್ಮೀಯತೆ, ಅಚಲತೆ, ಸರಳತೆ, ಸಹಜತೆ, ಕನಸು, ವಿಶ್ವಾಸ ಎಲ್ಲವೂ ಮರೆಯಲಾಗದಂಹವು. ಅಧ್ಯಾಯನ ಯೋಗ್ಯವಾದಂತಹವು. ನಮ್ಮ ಅರಿವಿಗೇ ಬರದಂತೆ ನಮ್ಮ ವ್ಯಕ್ತಿತ್ವವನ್ನು ಪ್ರಭಾವಿಸುವಂತಹವು.

ಇದನ್ನೂ ಓದಿ: ಜಿ ರಾಜಶೇಖರ್‌ರವರಿಗೆ ಎಪ್ಪತ್ತೈದು; ರಾಜಶೇಖರರ ‘ತಿರುಕನ ಕನಸು’

ಹಾಗಾಗಿಯೇ ನಾಡಿನ ಪಾಲಿಗಷ್ಟೇ ಅಲ್ಲ ನನ್ನ ಪಾಲಿಗೆ ರಾಜಶೇಖರರು ಅಜರಾಮರರು. ಅವರನ್ನು ಮರೆತೇನೆಂದರೂ ಮರೆಯಲು ಅಸಾಧ್ಯವಾದವರು.

ಉಡುಪಿಗೆ ಬಂದಾಗೆಲ್ಲಾ ಸಿಗ್ತೇನೆ ಸಾರ್…ಒಂದು ಗಳಿಗೆ ಸಿಕ್ಕು ಎಳ್ಳು ಪಾನಕ ಕುಡಿಸಿ ಸಾಕು.

ನಿಮ್ಮ ರುಣಿ
ನೂರ್ ಶ್ರೀಧರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...