Homeಮುಖಪುಟ‘ಮರೆತೇನೆಂದರೂ ಮರೆಯಲಿ ಹೆಂಗೆ’ - ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

‘ಮರೆತೇನೆಂದರೂ ಮರೆಯಲಿ ಹೆಂಗೆ’ – ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

- Advertisement -
- Advertisement -

ಅಜ್ಞಾತವಾಸದಲ್ಲಿದ್ದರೂ ಆಗಾಗ ಕೇಳುತ್ತಲೇ ಇದ್ದ ಹೆಸರು ಜಿ. ರಾಜಶೇಖರ್. ಕರಾವಳಿ ಕೋಮುವಾದಿ ಜ್ವಾಲೆಗೆ ಸಿಕ್ಕಿತ್ತು. ರಥಬೀದಿ ಗೆಳೆಯರು ಬಕೆಟ್ ಹಿಡಿದು ಬೆಂಕಿ ನಂದಿಸಲು ಹೆಣಗುತ್ತಿದ್ದರು. ನಕ್ಕು ಸುಮ್ಮನಿದ್ದವರ ಮುಂದೆ ಈ ಸಣ್ಣ ಫೈರ್ ಬ್ರಿಗೇಡ್ ನಮ್ಮ ಮನಕ್ಕೆ ಎಂಥದೋ ಹಿತ ನೀಡುತ್ತಿತ್ತು. ತುಂಬಾ ವರ್ಷಗಳ ಕಾಲ ಅವರ ಬಗ್ಗೆ ಬಹಳ ಕೇಳಿದೆ, ಸ್ವಲ್ಪ ಓದಿದೆ. ಜೀವನದಲ್ಲಿ ಏನೇನೋ ನಡೆದುಹೋಯಿತು.

ಒಂದು ವಿಶೇಷ ಸಂದರ್ಭದಲ್ಲಿ ಮುಖ್ಯವಾಹಿನಿಗೆ ಮರಳುವ ಅವಕಾಶವೂ ದೊರೆಯಿತು. ಪ್ರೀತಿಯ ಸಮಾಜ ಸ್ವಾಗತಿಸಿತ್ತು. ಆದರೆ ಕಾನೂನು ಪ್ರಕ್ರಿಯೆ ಬಾಕಿ ಉಳಿದಿತ್ತು. ಉಡುಪಿಯಲ್ಲಿ UAPA ಒಳಗೊಂಡಂತೆ ನನ್ನ ಮೇಲೆ ಹಲವು ಕೇಸುಗಳಿದ್ದವು. ಬೇಲ್ ಪಡೆಯಲು ಜಾಮೀನು ಬೇಕಿತ್ತು. ನಕ್ಸಲೈಟನಿಗೆ ಜಾಮೀನು ನೀಡುವುದು ಸುಲಭವಲ್ಲ. ವಿಶ್ವಾಸ, ಗುಂಡಿಗೆ ಎರಡೂ ಇರಬೇಕಿತ್ತು. ಆದರೆ ರಾಜಶೇಖರರಿಗೆ ಅವ್ಯಾವುವೂ ಅಗತ್ಯವಿರಲಿಲ್ಲ. ಕನ್ವಿನ್ಸ್ ಮಾಡೋಣ ಎಂದು ಮಿತ್ರರು ಹೋದರಂತೆ. ಆದರೆ ಪೀಠಿಕೆ ಹಾಕುವ ಅಗತ್ಯವೂ ಬೀಳಲಿಲ್ಲವಂತೆ. “ಸರಿ ಕೊಡೋಣಬಿಡಿ, ಅದಕ್ಕೇನು? ನಾನು ಕೋರ್ಟಿಗೆ ಏನೆಲ್ಲಾ ತರಬೇಕು?” ಎಂದು ಕೇಳಿದರಂತೆ. ಮನುಷ್ಯರನ್ನು ನಂಬಲು‌ ಮನುಷ್ಯರಾಗಿದ್ದರೆ ಸಾಕು ಎಂಬ ಸಹಜ ವ್ಯಕ್ತಿತ್ವ ನಮ್ಮ ಸಾರ್‌ದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲಿ ಇದು ಸಾಲಲ್ಲ ಎಂದು ರಿಜೆಕ್ಟ್ ಮಾಡಿಬಿಡ್ತಾರೋ ಅಂತ ಲಾಯರ ಬಳಿ ಹಲವಾರು ಬಾರಿ ವಿಚಾರಿಸಿ, ಓಡಾಡಿ ಡಾಕ್ಯುಮೆಂಟ್ ತೆಗೆಸಿ, ಡಬಲ್ ಡಬಲ್ ಫೋಟೋಗಳನ್ನು ತೆಗೆದುಕೊಂಡು, ತಮ್ಮ ಕೊಡೆಯೊಂದಿಗೆ ನಾವು ಬರುವ ಮುನ್ನವೇ ಕೋರ್ಟಲ್ಲಿ ಬಂದು ಕಾಯುತ್ತಿದ್ದರು. ನೋಡಿ “ಮತ್ತೆ…” ಎಂದರು….ಜೀವಮಾನದ ಒಡನಾಡಿ ಎಂಬಂತೆ. ನಾನು ಅವರನ್ನು ಮೊದಲ ಬಾರಿ ಕಂಡದ್ದು ಆ ಕ್ಷಣದಲ್ಲೆ.

ನಾನು ಕಟಕಟೆಯಲ್ಲಿ ನಿಂತಿದ್ದೆ. ಅವರು ಹೊರಗಿದ್ದರು. ಕಾರಕೂನ ಅವರ ಹೆಸರು ಕೂಗಿದೊಡನೆ ಲಗುಬಗೆಯಿಂದ ಒಳಬಂದವರೇ ಸೀದಾ ಕಟಕಟೆಯಲ್ಲಿ ಬಂದು ನನ್ನ ಜೊತೆ ನಿಂತರು. ಅಲ್ಲಿ ಬೇಡ ಇಲ್ಲಿ ಬನ್ನಿ ಎಂದು ವಕೀಲರು ಅವರನ್ನು ಜಡ್ಜ್ ಬಳಿಗೆ ಕರೆದೊಯ್ದರು. ಹೊರ ಬಂದರೆ ಶಿವಸುಂದರದು ಒಂದೇ ಸಮ ನಗು. ಸಹ ಆರೋಪಿ ರಾಜಶೇಖರ್ ಎಂದು ಗೇಲಿ ಮಾಡಿದ್ದರು. ಮುಗ್ದ ರಾಜಶೇಖರರಿಗೆ ಅದರಿಂದ ಮುಜುಗರವೂ ಅನಿಸಲಿಲ್ಲ. ಸಹಜವಾಗಿಯೇ ಅವರು ನಾನು ಜೊತೆಗಿದ್ದೇನೆ ಎಂದು ನನ್ನ ಜೊತೆ ಕಟಕಟೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

ಅಂದಿನಿಂದ ನನ್ನ ಕೇಸ್ ಮುಗಿಯುವ ತನಕ ನಾನು ತಪ್ಪಿಸಿದರೂ ಅವರು ಕೋರ್ಟಿಗೆ ತಪ್ಪಿಸಲಿಲ್ಲ. ಕೋರ್ಟಿಗೆ ಅವರು ಬೇಕಿರಲಿಲ್ಲ. ಆದರೆ ಅವರಿಗೆ ಕೋರ್ಟಿಗೆ ಬರುವುದು ಮುಖ್ಯವಿತ್ತು. ಕೋರ್ಟಿನಲ್ಲಿ ನನಗೆ ಒಂಟಿತನ ಕಾಡಬಾರದು ಎಂಬುದು ಅವರ ಕಾಳಜಿಯಾಗಿತ್ತು. ಪ್ರತಿ ಡೇಟಿಗೆ ಬಂದು ಮಾತನಾಡಿಸಿ, ಕ್ಯಾಂಟೀನಿಗೆ ಕರೆದುಕೊಂಡು ಹೋಗಿ ಮಂಗಳೂರು ಬಜಿ, ಎಳ್ಳಿನ ಪಾನಕ ಕೊಡಿಸಿ, “ಬರ್ತೇನೆ..” ಅಂತ ಹೊರಡುತ್ತಿದ್ದರು.

ನನ್ನ ಕೇಸಿನ ವಿಚಾರಣೆ ಮುಗಿದು ತೀರ್ಪಿನ ದಿನ ಬರುವ ಹೊತ್ತಿಗೆ ಅವರಿಗೆ ಪಾರ್ಕಿನ್ಸನ್ ಆಗಿತ್ತು, ದೇಹ ಕೃಷವಾಗಿತ್ತು. ಆದರೂ ಕೋರ್ಟಿಗೆ ಬಂದು ಮತ್ತೊಮ್ಮೆ ಜಾಮೀನು ಧೃಡೀಕರಿಸಬೇಕಿತ್ತು. ಮಗ ವಿಷ್ಣುವಿಗೆ ಚಿಂತೆ. ಕೋರ್ಟಿನ ಮೆಟ್ಟಿಲು ಹತ್ತಿಸಿ ಕರೆತರುವುದು ಹೇಗೆ? ಜಡ್ಜ್ ಕೇಳುವ ಪ್ರಶ್ನೆಗೆ ಉತ್ತರಿಸುವಂತೆ ಮಾಡುವುದು ಹೇಗೆ? ಆಟೋದಲ್ಲಿ ಹುಶಾರಾಗಿ ಕರೆತಂದರು. ರಾಜಶೇಖರರ ದೇಹ ನಡುಗುತ್ತಿದ್ದರೂ ಮುಖ ಎಂದಿನಂತೆ ನಿಶ್ಚಲವಾಗಿತ್ತು.

ಜಡ್ಜ್ ಕೇಳಿದರು
“ಇವರ್ಯಾರು ಗೊತ್ತಾ?”
“ಗೊತ್ತು”.
“ಇವರು ನಿಮಗೆ ಏನಾಗಬೇಕು?”
“ನನ್ನ ಸ್ನೇಹಿತರು”
“ಇವರಿಗೆ ನೀವು ಶ್ಯೂರಿಟಿ ಕೊಡ್ತೀರಾ?”
“ಕೊಡ್ತೇನೆ”

ಕೇಸ್ ಖುಲಾಸ್ ಆಯಿತು. ನಾನು ಕಾನೂನಾತ್ಮಕವಾಗಿಯೂ ಬಿಡುಗಡೆಗೊಂಡೆ. ಎಂದಿನಂತೆ “ಬರ್ಲಾ…” ಎಂದು ವಿಷ್ಣು ಕೈ ಹಿಡಿದು ಹೊರಟರು.

ಇದನ್ನೂ ಓದಿ: ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಮತ್ತೆ ಕಂಡದ್ದು ಇತ್ತೀಚಿನ ಸಹಬಾಳ್ವೆ ಸಮಯದಲ್ಲೆ. ನಾನು, ಅಶೋಕ್, ದಿನಕರ ಬೇಂಗ್ರೆ ಮನೆಗೆ ಹೋದೆವು. ಗುರುಗಳು ಬದಲಾಗೇ ಇಲ್ಲ. ಮುಖದಲ್ಲಿ ಅದೇ ದೃಡತೆ, ಮಾತಿನಲ್ಲಿ ಅದೇ ಲವಲವಿಕೆ. ಭಾವನೆ ಕಾಣದ ಮುಖದಿಂದ ನಿಲ್ಲದ ನಗೆ ಚಟಾಕಿ. ಗೆಳೆಯರು‌ ಮನೆಗೆ ಬಂದಿದ್ದಾರೆ ಎಂದು ಇನ್ನಷ್ಟು ಹುರುಪು. ವಿಷ್ಣು ವಿಡಿಯೋ ಮಾಡತೊಡಗಿದರು. ಮಗನ ಕೆಣಕುವ ಪ್ರಶ್ನೆಗಳಿಗೆ ಅಪ್ಪನ ಖಚಿತತೆಯ ಉತ್ತರ.

“ಮತ್ತೆ ಏನ್ಸಮಾಚಾರ”
“ಮೇ 7 ಕ್ಕೆ ಕಾರ್ಯಕ್ರಮ”
“ಯಾವ ಕಾರ್ಯಕ್ರಮ?”
“ಕೋಮು ಸೌಹಾರ್ದದ್ದು”
“ನೀವು ಹೋಗ್ತೀರಾ?”
“ಹಾಂ ಹೋಗ್ತೇನೆ….ನಾನು ಹೋಗದಿದ್ದರೆ ಆಗಲ್ಲ”.

ಇದು ನಮ್ಮ ರಾಜಶೇಖರ್ ಸಾರ್…

ನನ್ನ ಜೀವನದಲ್ಲಿ ಅನಿರೀಕ್ಷಿತ ಆಪದ್ಬಾಂಧವರಾಗಿ ಬಂದ ಹಿರಿ ಜೀವ ಅದು. ಅವರ ಆತ್ಮೀಯತೆ, ಅಚಲತೆ, ಸರಳತೆ, ಸಹಜತೆ, ಕನಸು, ವಿಶ್ವಾಸ ಎಲ್ಲವೂ ಮರೆಯಲಾಗದಂಹವು. ಅಧ್ಯಾಯನ ಯೋಗ್ಯವಾದಂತಹವು. ನಮ್ಮ ಅರಿವಿಗೇ ಬರದಂತೆ ನಮ್ಮ ವ್ಯಕ್ತಿತ್ವವನ್ನು ಪ್ರಭಾವಿಸುವಂತಹವು.

ಇದನ್ನೂ ಓದಿ: ಜಿ ರಾಜಶೇಖರ್‌ರವರಿಗೆ ಎಪ್ಪತ್ತೈದು; ರಾಜಶೇಖರರ ‘ತಿರುಕನ ಕನಸು’

ಹಾಗಾಗಿಯೇ ನಾಡಿನ ಪಾಲಿಗಷ್ಟೇ ಅಲ್ಲ ನನ್ನ ಪಾಲಿಗೆ ರಾಜಶೇಖರರು ಅಜರಾಮರರು. ಅವರನ್ನು ಮರೆತೇನೆಂದರೂ ಮರೆಯಲು ಅಸಾಧ್ಯವಾದವರು.

ಉಡುಪಿಗೆ ಬಂದಾಗೆಲ್ಲಾ ಸಿಗ್ತೇನೆ ಸಾರ್…ಒಂದು ಗಳಿಗೆ ಸಿಕ್ಕು ಎಳ್ಳು ಪಾನಕ ಕುಡಿಸಿ ಸಾಕು.

ನಿಮ್ಮ ರುಣಿ
ನೂರ್ ಶ್ರೀಧರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...