Homeಮುಖಪುಟ‘ಮರೆತೇನೆಂದರೂ ಮರೆಯಲಿ ಹೆಂಗೆ’ - ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

‘ಮರೆತೇನೆಂದರೂ ಮರೆಯಲಿ ಹೆಂಗೆ’ – ಹೋರಾಟಗಾರ ಜಿ. ರಾಜಶೇಖರ ಅವರಿಗೆ ನುಡಿನಮನ

- Advertisement -
- Advertisement -

ಅಜ್ಞಾತವಾಸದಲ್ಲಿದ್ದರೂ ಆಗಾಗ ಕೇಳುತ್ತಲೇ ಇದ್ದ ಹೆಸರು ಜಿ. ರಾಜಶೇಖರ್. ಕರಾವಳಿ ಕೋಮುವಾದಿ ಜ್ವಾಲೆಗೆ ಸಿಕ್ಕಿತ್ತು. ರಥಬೀದಿ ಗೆಳೆಯರು ಬಕೆಟ್ ಹಿಡಿದು ಬೆಂಕಿ ನಂದಿಸಲು ಹೆಣಗುತ್ತಿದ್ದರು. ನಕ್ಕು ಸುಮ್ಮನಿದ್ದವರ ಮುಂದೆ ಈ ಸಣ್ಣ ಫೈರ್ ಬ್ರಿಗೇಡ್ ನಮ್ಮ ಮನಕ್ಕೆ ಎಂಥದೋ ಹಿತ ನೀಡುತ್ತಿತ್ತು. ತುಂಬಾ ವರ್ಷಗಳ ಕಾಲ ಅವರ ಬಗ್ಗೆ ಬಹಳ ಕೇಳಿದೆ, ಸ್ವಲ್ಪ ಓದಿದೆ. ಜೀವನದಲ್ಲಿ ಏನೇನೋ ನಡೆದುಹೋಯಿತು.

ಒಂದು ವಿಶೇಷ ಸಂದರ್ಭದಲ್ಲಿ ಮುಖ್ಯವಾಹಿನಿಗೆ ಮರಳುವ ಅವಕಾಶವೂ ದೊರೆಯಿತು. ಪ್ರೀತಿಯ ಸಮಾಜ ಸ್ವಾಗತಿಸಿತ್ತು. ಆದರೆ ಕಾನೂನು ಪ್ರಕ್ರಿಯೆ ಬಾಕಿ ಉಳಿದಿತ್ತು. ಉಡುಪಿಯಲ್ಲಿ UAPA ಒಳಗೊಂಡಂತೆ ನನ್ನ ಮೇಲೆ ಹಲವು ಕೇಸುಗಳಿದ್ದವು. ಬೇಲ್ ಪಡೆಯಲು ಜಾಮೀನು ಬೇಕಿತ್ತು. ನಕ್ಸಲೈಟನಿಗೆ ಜಾಮೀನು ನೀಡುವುದು ಸುಲಭವಲ್ಲ. ವಿಶ್ವಾಸ, ಗುಂಡಿಗೆ ಎರಡೂ ಇರಬೇಕಿತ್ತು. ಆದರೆ ರಾಜಶೇಖರರಿಗೆ ಅವ್ಯಾವುವೂ ಅಗತ್ಯವಿರಲಿಲ್ಲ. ಕನ್ವಿನ್ಸ್ ಮಾಡೋಣ ಎಂದು ಮಿತ್ರರು ಹೋದರಂತೆ. ಆದರೆ ಪೀಠಿಕೆ ಹಾಕುವ ಅಗತ್ಯವೂ ಬೀಳಲಿಲ್ಲವಂತೆ. “ಸರಿ ಕೊಡೋಣಬಿಡಿ, ಅದಕ್ಕೇನು? ನಾನು ಕೋರ್ಟಿಗೆ ಏನೆಲ್ಲಾ ತರಬೇಕು?” ಎಂದು ಕೇಳಿದರಂತೆ. ಮನುಷ್ಯರನ್ನು ನಂಬಲು‌ ಮನುಷ್ಯರಾಗಿದ್ದರೆ ಸಾಕು ಎಂಬ ಸಹಜ ವ್ಯಕ್ತಿತ್ವ ನಮ್ಮ ಸಾರ್‌ದು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲಿ ಇದು ಸಾಲಲ್ಲ ಎಂದು ರಿಜೆಕ್ಟ್ ಮಾಡಿಬಿಡ್ತಾರೋ ಅಂತ ಲಾಯರ ಬಳಿ ಹಲವಾರು ಬಾರಿ ವಿಚಾರಿಸಿ, ಓಡಾಡಿ ಡಾಕ್ಯುಮೆಂಟ್ ತೆಗೆಸಿ, ಡಬಲ್ ಡಬಲ್ ಫೋಟೋಗಳನ್ನು ತೆಗೆದುಕೊಂಡು, ತಮ್ಮ ಕೊಡೆಯೊಂದಿಗೆ ನಾವು ಬರುವ ಮುನ್ನವೇ ಕೋರ್ಟಲ್ಲಿ ಬಂದು ಕಾಯುತ್ತಿದ್ದರು. ನೋಡಿ “ಮತ್ತೆ…” ಎಂದರು….ಜೀವಮಾನದ ಒಡನಾಡಿ ಎಂಬಂತೆ. ನಾನು ಅವರನ್ನು ಮೊದಲ ಬಾರಿ ಕಂಡದ್ದು ಆ ಕ್ಷಣದಲ್ಲೆ.

ನಾನು ಕಟಕಟೆಯಲ್ಲಿ ನಿಂತಿದ್ದೆ. ಅವರು ಹೊರಗಿದ್ದರು. ಕಾರಕೂನ ಅವರ ಹೆಸರು ಕೂಗಿದೊಡನೆ ಲಗುಬಗೆಯಿಂದ ಒಳಬಂದವರೇ ಸೀದಾ ಕಟಕಟೆಯಲ್ಲಿ ಬಂದು ನನ್ನ ಜೊತೆ ನಿಂತರು. ಅಲ್ಲಿ ಬೇಡ ಇಲ್ಲಿ ಬನ್ನಿ ಎಂದು ವಕೀಲರು ಅವರನ್ನು ಜಡ್ಜ್ ಬಳಿಗೆ ಕರೆದೊಯ್ದರು. ಹೊರ ಬಂದರೆ ಶಿವಸುಂದರದು ಒಂದೇ ಸಮ ನಗು. ಸಹ ಆರೋಪಿ ರಾಜಶೇಖರ್ ಎಂದು ಗೇಲಿ ಮಾಡಿದ್ದರು. ಮುಗ್ದ ರಾಜಶೇಖರರಿಗೆ ಅದರಿಂದ ಮುಜುಗರವೂ ಅನಿಸಲಿಲ್ಲ. ಸಹಜವಾಗಿಯೇ ಅವರು ನಾನು ಜೊತೆಗಿದ್ದೇನೆ ಎಂದು ನನ್ನ ಜೊತೆ ಕಟಕಟೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ಹಿರಿಯ ಚಿಂತಕ, ಜನಪರ ಹೋರಾಟಗಾರ ಜಿ. ರಾಜಶೇಖರ (75) ನಿಧನ

ಅಂದಿನಿಂದ ನನ್ನ ಕೇಸ್ ಮುಗಿಯುವ ತನಕ ನಾನು ತಪ್ಪಿಸಿದರೂ ಅವರು ಕೋರ್ಟಿಗೆ ತಪ್ಪಿಸಲಿಲ್ಲ. ಕೋರ್ಟಿಗೆ ಅವರು ಬೇಕಿರಲಿಲ್ಲ. ಆದರೆ ಅವರಿಗೆ ಕೋರ್ಟಿಗೆ ಬರುವುದು ಮುಖ್ಯವಿತ್ತು. ಕೋರ್ಟಿನಲ್ಲಿ ನನಗೆ ಒಂಟಿತನ ಕಾಡಬಾರದು ಎಂಬುದು ಅವರ ಕಾಳಜಿಯಾಗಿತ್ತು. ಪ್ರತಿ ಡೇಟಿಗೆ ಬಂದು ಮಾತನಾಡಿಸಿ, ಕ್ಯಾಂಟೀನಿಗೆ ಕರೆದುಕೊಂಡು ಹೋಗಿ ಮಂಗಳೂರು ಬಜಿ, ಎಳ್ಳಿನ ಪಾನಕ ಕೊಡಿಸಿ, “ಬರ್ತೇನೆ..” ಅಂತ ಹೊರಡುತ್ತಿದ್ದರು.

ನನ್ನ ಕೇಸಿನ ವಿಚಾರಣೆ ಮುಗಿದು ತೀರ್ಪಿನ ದಿನ ಬರುವ ಹೊತ್ತಿಗೆ ಅವರಿಗೆ ಪಾರ್ಕಿನ್ಸನ್ ಆಗಿತ್ತು, ದೇಹ ಕೃಷವಾಗಿತ್ತು. ಆದರೂ ಕೋರ್ಟಿಗೆ ಬಂದು ಮತ್ತೊಮ್ಮೆ ಜಾಮೀನು ಧೃಡೀಕರಿಸಬೇಕಿತ್ತು. ಮಗ ವಿಷ್ಣುವಿಗೆ ಚಿಂತೆ. ಕೋರ್ಟಿನ ಮೆಟ್ಟಿಲು ಹತ್ತಿಸಿ ಕರೆತರುವುದು ಹೇಗೆ? ಜಡ್ಜ್ ಕೇಳುವ ಪ್ರಶ್ನೆಗೆ ಉತ್ತರಿಸುವಂತೆ ಮಾಡುವುದು ಹೇಗೆ? ಆಟೋದಲ್ಲಿ ಹುಶಾರಾಗಿ ಕರೆತಂದರು. ರಾಜಶೇಖರರ ದೇಹ ನಡುಗುತ್ತಿದ್ದರೂ ಮುಖ ಎಂದಿನಂತೆ ನಿಶ್ಚಲವಾಗಿತ್ತು.

ಜಡ್ಜ್ ಕೇಳಿದರು
“ಇವರ್ಯಾರು ಗೊತ್ತಾ?”
“ಗೊತ್ತು”.
“ಇವರು ನಿಮಗೆ ಏನಾಗಬೇಕು?”
“ನನ್ನ ಸ್ನೇಹಿತರು”
“ಇವರಿಗೆ ನೀವು ಶ್ಯೂರಿಟಿ ಕೊಡ್ತೀರಾ?”
“ಕೊಡ್ತೇನೆ”

ಕೇಸ್ ಖುಲಾಸ್ ಆಯಿತು. ನಾನು ಕಾನೂನಾತ್ಮಕವಾಗಿಯೂ ಬಿಡುಗಡೆಗೊಂಡೆ. ಎಂದಿನಂತೆ “ಬರ್ಲಾ…” ಎಂದು ವಿಷ್ಣು ಕೈ ಹಿಡಿದು ಹೊರಟರು.

ಇದನ್ನೂ ಓದಿ: ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಮತ್ತೆ ಕಂಡದ್ದು ಇತ್ತೀಚಿನ ಸಹಬಾಳ್ವೆ ಸಮಯದಲ್ಲೆ. ನಾನು, ಅಶೋಕ್, ದಿನಕರ ಬೇಂಗ್ರೆ ಮನೆಗೆ ಹೋದೆವು. ಗುರುಗಳು ಬದಲಾಗೇ ಇಲ್ಲ. ಮುಖದಲ್ಲಿ ಅದೇ ದೃಡತೆ, ಮಾತಿನಲ್ಲಿ ಅದೇ ಲವಲವಿಕೆ. ಭಾವನೆ ಕಾಣದ ಮುಖದಿಂದ ನಿಲ್ಲದ ನಗೆ ಚಟಾಕಿ. ಗೆಳೆಯರು‌ ಮನೆಗೆ ಬಂದಿದ್ದಾರೆ ಎಂದು ಇನ್ನಷ್ಟು ಹುರುಪು. ವಿಷ್ಣು ವಿಡಿಯೋ ಮಾಡತೊಡಗಿದರು. ಮಗನ ಕೆಣಕುವ ಪ್ರಶ್ನೆಗಳಿಗೆ ಅಪ್ಪನ ಖಚಿತತೆಯ ಉತ್ತರ.

“ಮತ್ತೆ ಏನ್ಸಮಾಚಾರ”
“ಮೇ 7 ಕ್ಕೆ ಕಾರ್ಯಕ್ರಮ”
“ಯಾವ ಕಾರ್ಯಕ್ರಮ?”
“ಕೋಮು ಸೌಹಾರ್ದದ್ದು”
“ನೀವು ಹೋಗ್ತೀರಾ?”
“ಹಾಂ ಹೋಗ್ತೇನೆ….ನಾನು ಹೋಗದಿದ್ದರೆ ಆಗಲ್ಲ”.

ಇದು ನಮ್ಮ ರಾಜಶೇಖರ್ ಸಾರ್…

ನನ್ನ ಜೀವನದಲ್ಲಿ ಅನಿರೀಕ್ಷಿತ ಆಪದ್ಬಾಂಧವರಾಗಿ ಬಂದ ಹಿರಿ ಜೀವ ಅದು. ಅವರ ಆತ್ಮೀಯತೆ, ಅಚಲತೆ, ಸರಳತೆ, ಸಹಜತೆ, ಕನಸು, ವಿಶ್ವಾಸ ಎಲ್ಲವೂ ಮರೆಯಲಾಗದಂಹವು. ಅಧ್ಯಾಯನ ಯೋಗ್ಯವಾದಂತಹವು. ನಮ್ಮ ಅರಿವಿಗೇ ಬರದಂತೆ ನಮ್ಮ ವ್ಯಕ್ತಿತ್ವವನ್ನು ಪ್ರಭಾವಿಸುವಂತಹವು.

ಇದನ್ನೂ ಓದಿ: ಜಿ ರಾಜಶೇಖರ್‌ರವರಿಗೆ ಎಪ್ಪತ್ತೈದು; ರಾಜಶೇಖರರ ‘ತಿರುಕನ ಕನಸು’

ಹಾಗಾಗಿಯೇ ನಾಡಿನ ಪಾಲಿಗಷ್ಟೇ ಅಲ್ಲ ನನ್ನ ಪಾಲಿಗೆ ರಾಜಶೇಖರರು ಅಜರಾಮರರು. ಅವರನ್ನು ಮರೆತೇನೆಂದರೂ ಮರೆಯಲು ಅಸಾಧ್ಯವಾದವರು.

ಉಡುಪಿಗೆ ಬಂದಾಗೆಲ್ಲಾ ಸಿಗ್ತೇನೆ ಸಾರ್…ಒಂದು ಗಳಿಗೆ ಸಿಕ್ಕು ಎಳ್ಳು ಪಾನಕ ಕುಡಿಸಿ ಸಾಕು.

ನಿಮ್ಮ ರುಣಿ
ನೂರ್ ಶ್ರೀಧರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...