Homeಚಳವಳಿಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: ವರವರ ರಾವ್‌‌ ಅರ್ಜಿ ತಿರಸ್ಕರಿಸಿದ NIA...

ಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: ವರವರ ರಾವ್‌‌ ಅರ್ಜಿ ತಿರಸ್ಕರಿಸಿದ NIA ಕೋರ್ಟ್

2018ರ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣ

- Advertisement -
- Advertisement -

ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಲು ಮೂರು ತಿಂಗಳು ಹೈದರಾಬಾದ್‌‌ಗೆ ತೆರಳಿದರೆ 2018ರ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣದ ಚಾರ್ಜ್‌‌ಶೀಟ್‌ ರೂಪಿಸುವುದು ವಿಳಂಬವಾಗಲಿದೆ ಎಂದು ಹೇಳಿರುವ ವಿಶೇಷ ನ್ಯಾಯಾಲಯವು, ಕ್ರಾಂತಿಕಾರಿ ಕವಿ ವರವರ ರಾವ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ವಿಶೇಷ ನ್ಯಾಯಾಧೀಶ ರಾಜೇಶ್ ಕಟಾರಿಯಾ ಅವರು ವರವರ ರಾವ್ ಅವರಿಗೆ ಜಾಮೀನು ಮಂಜೂರು ಮಾಡಿರುವ ಇತ್ತೀಚಿನ ಸುಪ್ರೀಂಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, ಇದರಲ್ಲಿ ಮೂರು ತಿಂಗಳೊಳಗೆ ಚಾರ್ಜ್‌ಶೀಟ್‌ ರೂಪಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೌರವಾನ್ವಿತ ಸುಪ್ರೀಂಕೋರ್ಟ್‌ ಹೊರಡಿಸಿದ ಮೇಲಿನ ಆದೇಶದ ದೃಷ್ಟಿಯಿಂದ, ಈ ನ್ಯಾಯಾಲಯವು ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸುವ ಅಗತ್ಯವಿದೆ. ಆದೇಶದ ಪ್ರಕಾರ ಮೂರು ತಿಂಗಳೊಳಗೆ ಏಕಕಾಲದಲ್ಲಿ ಬಾಕಿ ಉಳಿದಿರುವ ಅರ್ಜಿಯನ್ನು ನಿರ್ಧರಿಸುವ ಅಗತ್ಯವಿದೆ. ಹಾಗಾಗಿ ಅರ್ಜಿದಾರರು ಹೈದರಾಬಾದ್‌ನಲ್ಲಿ ಮೂರು ತಿಂಗಳ ಕಾಲ ಹೋಗಿ ಉಳಿಯಲು ಅನುಮತಿಸಿದರೆ, ಚಾರ್ಜ್‌‌ಶೀಟ್‌‌ ರಚನೆಯು ದೀರ್ಘವಾಗಿರುತ್ತದೆ” ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: ಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

ಆಗಸ್ಟ್ 10 ರಂದು ಸುಪ್ರೀಂಕೋರ್ಟ್ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡಿತು. ಮುಂದಿನ ವಾರ ಹೈದರಾಬಾದ್‌ನಲ್ಲಿ ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ವಿಶೇಷ ಎನ್‌ಐಎ ನ್ಯಾಯಾಲಯವನ್ನು ಸಂಪರ್ಕಿಸಲು ಅವರಿಗೆ ಅನುಮತಿ ನೀಡಿತ್ತು.

ಸುಪ್ರೀಂಕೋರ್ಟ್‌ನ ತೀರ್ಪಿನ ಪರಿಣಾಮವಾಗಿ, ವರವರ ರಾವ್ ಅವರು ಮೂರು ತಿಂಗಳ ಕಾಲ ಹೈದರಾಬಾದ್‌ಗೆ ಪ್ರಯಾಣಿಸಲು ಮತ್ತು ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿ ಕೋರಿ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅವರು, ಹೈದರಾಬಾದ್‌ನಲ್ಲಿ ತನಗೆ ಸಿಗುವ ಉಚಿತ ಚಿಕಿತ್ಸೆಗೆ ಹೋಲಿಸಿದ, ಮುಂಬೈನಲ್ಲಿ ದುಭಾರಿ ವೆಚ್ಚವಾಗಲಿದೆ ಎಂದು ಉಲ್ಲೇಖಿಸಿದರು.

ಆದರೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಅವರು ಆಗಸ್ಟ್ 8 ರ ಆದೇಶದ ಮೇಲೆ ವಿಧಿಸಲಾದ ಜಾಮೀನು ಷರತ್ತುಗಳನ್ನು ಉಲ್ಲೇಖಿಸಿ,“ಟ್ರಯಲ್ ಕೋರ್ಟ್‌ನಿಂದ ಎಕ್ಸ್‌ಪ್ರೆಸ್ ಅನುಮತಿಯಿಲ್ಲದೆ” ಅವರು ಮುಂಬೈನಿಂದ ಹೊರಹೋಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

“ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯಲು ವರವರ ರಾವ್ ಅವರ ಪ್ರಾಥಮಿಕ ಕಾರಣವೆಂದರೆ ಚಿಕಿತ್ಸಾ ವೆಚ್ಚದಲ್ಲಿನ ವ್ಯತ್ಯಾಸವಾಗಿದೆ. ಅರ್ಜಿದಾರನಿಗೆ ಮುಂಬೈನಲ್ಲಿ ಉತ್ತಮ ಚಿಕಿತ್ಸೆ ಸಿಗುವುದಿಲ್ಲ ಎಂಬುದು ಪ್ರಕರಣವಲ್ಲ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ವರವರ ರಾವ್ ಮತ್ತು ಇತರ 14 ಹೋರಾಟಗಾರರು ನಿಷೇಧಿತ ಸಿಪಿಐ(ಮಾವೋವಾದಿ)ಯ ಅಜೆಂಡಾವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ. ಪ್ರಾಥಮಿಕವಾಗಿ ಅವರ ಎಲೆಕ್ಟ್ರಾನಿಕ್ ಸಾಧನಗಳಿಂದ ವಶಪಡಿಸಿದ ಪತ್ರಗಳು ಮತ್ತು ಇಮೇಲ್‌ಗಳ ಆಧಾರದ ಮೇಲೆ ಅವರ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ-ತಡೆಗಟ್ಟುವಿಕೆ-ಕಾಯಿದೆ’ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗಾರ್ ಪರಿಷತ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕ್ರಿಮಿನಲ್ ಪಿತೂರಿಯ ಭಾಗವಾಗಿ ಆಯೋಜಿಸಲಾಗಿದೆ ಎಂದು ಎನ್‌ಐಎ ಆರೋಪಿಸಿದೆ. ಸಮಾರಂಭದಲ್ಲಿ ಮಾಡಲಾದ ಭಾಷಣವು, ಮರುದಿನ ಭೀಮಾ ಕೋರೆಗಾಂವ್‌ನಲ್ಲಿ ನಡೆದ ಜಾತಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಎನ್‌ಐಎ ಆರೋಪಿಸಿದೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

ಹೋರಾಟಗಾರರಲ್ಲಿ ಹೆಚ್ಚಿನವರು ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಹಾಗೂ ಎಫ್‌ಐಆರ್‌ನಲ್ಲಿ ತಮ್ಮ ಹೆಸರೂ ಇರಲಿಲ್ಲ ಎಂದು ಹೇಳಿದ್ದಾರೆ. ಆದರೂ ಎಲೆಕ್ಟ್ರಾನಿಕ್ ಪುರಾವೆಗಳನ್ನು ‘ಸೃಷ್ಟಿಸಿ’ ತಮ್ಮ ಬಂಧನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...