Homeಚಳವಳಿಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: ವರವರ ರಾವ್‌‌ ಅರ್ಜಿ ತಿರಸ್ಕರಿಸಿದ NIA...

ಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: ವರವರ ರಾವ್‌‌ ಅರ್ಜಿ ತಿರಸ್ಕರಿಸಿದ NIA ಕೋರ್ಟ್

2018ರ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣ

- Advertisement -
- Advertisement -

ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಲು ಮೂರು ತಿಂಗಳು ಹೈದರಾಬಾದ್‌‌ಗೆ ತೆರಳಿದರೆ 2018ರ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣದ ಚಾರ್ಜ್‌‌ಶೀಟ್‌ ರೂಪಿಸುವುದು ವಿಳಂಬವಾಗಲಿದೆ ಎಂದು ಹೇಳಿರುವ ವಿಶೇಷ ನ್ಯಾಯಾಲಯವು, ಕ್ರಾಂತಿಕಾರಿ ಕವಿ ವರವರ ರಾವ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ವಿಶೇಷ ನ್ಯಾಯಾಧೀಶ ರಾಜೇಶ್ ಕಟಾರಿಯಾ ಅವರು ವರವರ ರಾವ್ ಅವರಿಗೆ ಜಾಮೀನು ಮಂಜೂರು ಮಾಡಿರುವ ಇತ್ತೀಚಿನ ಸುಪ್ರೀಂಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, ಇದರಲ್ಲಿ ಮೂರು ತಿಂಗಳೊಳಗೆ ಚಾರ್ಜ್‌ಶೀಟ್‌ ರೂಪಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಗೌರವಾನ್ವಿತ ಸುಪ್ರೀಂಕೋರ್ಟ್‌ ಹೊರಡಿಸಿದ ಮೇಲಿನ ಆದೇಶದ ದೃಷ್ಟಿಯಿಂದ, ಈ ನ್ಯಾಯಾಲಯವು ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸುವ ಅಗತ್ಯವಿದೆ. ಆದೇಶದ ಪ್ರಕಾರ ಮೂರು ತಿಂಗಳೊಳಗೆ ಏಕಕಾಲದಲ್ಲಿ ಬಾಕಿ ಉಳಿದಿರುವ ಅರ್ಜಿಯನ್ನು ನಿರ್ಧರಿಸುವ ಅಗತ್ಯವಿದೆ. ಹಾಗಾಗಿ ಅರ್ಜಿದಾರರು ಹೈದರಾಬಾದ್‌ನಲ್ಲಿ ಮೂರು ತಿಂಗಳ ಕಾಲ ಹೋಗಿ ಉಳಿಯಲು ಅನುಮತಿಸಿದರೆ, ಚಾರ್ಜ್‌‌ಶೀಟ್‌‌ ರಚನೆಯು ದೀರ್ಘವಾಗಿರುತ್ತದೆ” ಎಂದು ನ್ಯಾಯಾಲಯವು ಹೇಳಿದೆ.

ಇದನ್ನೂ ಓದಿ: ಭೀಮಾಕೊರೆಗಾಂವ್ ಪ್ರಕರಣ: ಕ್ರಾಂತಿಕಾರಿ ಕವಿ ವರವರ ರಾವ್‌ಗೆ ಸುಪ್ರೀಂನಿಂದ ಜಾಮೀನು

ಆಗಸ್ಟ್ 10 ರಂದು ಸುಪ್ರೀಂಕೋರ್ಟ್ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡಿತು. ಮುಂದಿನ ವಾರ ಹೈದರಾಬಾದ್‌ನಲ್ಲಿ ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ವಿಶೇಷ ಎನ್‌ಐಎ ನ್ಯಾಯಾಲಯವನ್ನು ಸಂಪರ್ಕಿಸಲು ಅವರಿಗೆ ಅನುಮತಿ ನೀಡಿತ್ತು.

ಸುಪ್ರೀಂಕೋರ್ಟ್‌ನ ತೀರ್ಪಿನ ಪರಿಣಾಮವಾಗಿ, ವರವರ ರಾವ್ ಅವರು ಮೂರು ತಿಂಗಳ ಕಾಲ ಹೈದರಾಬಾದ್‌ಗೆ ಪ್ರಯಾಣಿಸಲು ಮತ್ತು ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅನುಮತಿ ಕೋರಿ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಅವರು, ಹೈದರಾಬಾದ್‌ನಲ್ಲಿ ತನಗೆ ಸಿಗುವ ಉಚಿತ ಚಿಕಿತ್ಸೆಗೆ ಹೋಲಿಸಿದ, ಮುಂಬೈನಲ್ಲಿ ದುಭಾರಿ ವೆಚ್ಚವಾಗಲಿದೆ ಎಂದು ಉಲ್ಲೇಖಿಸಿದರು.

ಆದರೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಶೆಟ್ಟಿ ಅವರು ಆಗಸ್ಟ್ 8 ರ ಆದೇಶದ ಮೇಲೆ ವಿಧಿಸಲಾದ ಜಾಮೀನು ಷರತ್ತುಗಳನ್ನು ಉಲ್ಲೇಖಿಸಿ,“ಟ್ರಯಲ್ ಕೋರ್ಟ್‌ನಿಂದ ಎಕ್ಸ್‌ಪ್ರೆಸ್ ಅನುಮತಿಯಿಲ್ಲದೆ” ಅವರು ಮುಂಬೈನಿಂದ ಹೊರಹೋಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವರವರ ರಾವ್ ಅವರ ಪುಸ್ತಕದಿಂದ, ‘ಹಿಂದುತ್ವ’, ‘ಸಂಘಪರಿವಾರ’ ಸೇರಿದಂತೆ ಹಲವು ಪದಗಳನ್ನು ಕೈಬಿಟ್ಟ ಪ್ರಕಾಶನ ಸಂಸ್ಥೆ!

“ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯಲು ವರವರ ರಾವ್ ಅವರ ಪ್ರಾಥಮಿಕ ಕಾರಣವೆಂದರೆ ಚಿಕಿತ್ಸಾ ವೆಚ್ಚದಲ್ಲಿನ ವ್ಯತ್ಯಾಸವಾಗಿದೆ. ಅರ್ಜಿದಾರನಿಗೆ ಮುಂಬೈನಲ್ಲಿ ಉತ್ತಮ ಚಿಕಿತ್ಸೆ ಸಿಗುವುದಿಲ್ಲ ಎಂಬುದು ಪ್ರಕರಣವಲ್ಲ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ವರವರ ರಾವ್ ಮತ್ತು ಇತರ 14 ಹೋರಾಟಗಾರರು ನಿಷೇಧಿತ ಸಿಪಿಐ(ಮಾವೋವಾದಿ)ಯ ಅಜೆಂಡಾವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಎನ್‌ಐಎ ಆರೋಪಿಸಿದೆ. ಪ್ರಾಥಮಿಕವಾಗಿ ಅವರ ಎಲೆಕ್ಟ್ರಾನಿಕ್ ಸಾಧನಗಳಿಂದ ವಶಪಡಿಸಿದ ಪತ್ರಗಳು ಮತ್ತು ಇಮೇಲ್‌ಗಳ ಆಧಾರದ ಮೇಲೆ ಅವರ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ-ತಡೆಗಟ್ಟುವಿಕೆ-ಕಾಯಿದೆ’ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2017ರ ಡಿಸೆಂಬರ್ 31 ರಂದು ಪುಣೆಯಲ್ಲಿ ಎಲ್ಗಾರ್ ಪರಿಷತ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕ್ರಿಮಿನಲ್ ಪಿತೂರಿಯ ಭಾಗವಾಗಿ ಆಯೋಜಿಸಲಾಗಿದೆ ಎಂದು ಎನ್‌ಐಎ ಆರೋಪಿಸಿದೆ. ಸಮಾರಂಭದಲ್ಲಿ ಮಾಡಲಾದ ಭಾಷಣವು, ಮರುದಿನ ಭೀಮಾ ಕೋರೆಗಾಂವ್‌ನಲ್ಲಿ ನಡೆದ ಜಾತಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಎನ್‌ಐಎ ಆರೋಪಿಸಿದೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

ಹೋರಾಟಗಾರರಲ್ಲಿ ಹೆಚ್ಚಿನವರು ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಹಾಗೂ ಎಫ್‌ಐಆರ್‌ನಲ್ಲಿ ತಮ್ಮ ಹೆಸರೂ ಇರಲಿಲ್ಲ ಎಂದು ಹೇಳಿದ್ದಾರೆ. ಆದರೂ ಎಲೆಕ್ಟ್ರಾನಿಕ್ ಪುರಾವೆಗಳನ್ನು ‘ಸೃಷ್ಟಿಸಿ’ ತಮ್ಮ ಬಂಧನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....