Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...