Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...