Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...