Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...