Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...