Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...