Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...