Homeಕರ್ನಾಟಕದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ...

ದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ ಸವಾಲು

ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ?

- Advertisement -
- Advertisement -

ನೆಹರೂ ಕುಟುಂಬ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು ಮತ್ತು ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೋಡಿಕೊಂಡು ಬಂದಿದೆ ಎಂದಿರುವ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಿದ್ದರಾಮಯ್ಯ, “ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದಿದ್ದಾರೆ.

ವಿಜಯೇಂದ್ರ ಅವರಿಗೆ ಓದುವ ಅಭ್ಯಾಸ ಇದ್ದರೆ, ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

ಬಂಡಾರುಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು? ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ, ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುವವರು, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಹಿಂದುಳಿದ ನಾಯಕರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳುತ್ತಾ ಬಂದಿದೆ ಎನ್ನುವುದಕ್ಕೆ ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್.ಬಂಗಾರಪ್ಪನವರೇ ಸಾಕ್ಷಿ. ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ.ಎಸ್ ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ. ಇದರ ವಿವರವನ್ನು ಅವರು ನೀಡುತ್ತಲೇ ಇದ್ದಾರೆ. ಬಂಗಾರಪ್ಪನವರಿರಲಿ, ನರೇಂದ್ರ ಮೋದಿ ಅವರೇ ಇರಲಿ, ಎಲ್ಲಿಯ ವರೆಗೆ ಇವರು ವರ್ಣವ್ಯವಸ್ಥೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆ ಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯ ವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ. ಇದು ಮೋದಿಯವರಿಗೂ ತಿಳಿದಿರಲಿ ಎಂದಿದ್ದಾರೆ.

ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ. ದಲಿತ ನಾಯಕ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆಬಿದ್ದು ಇತ್ತೀಚೆಗೆ ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತ: ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸವಾಲ್ ಹಾಕಿದ್ದಾರೆ.

ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು. ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹನನ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ ಎಂದಿರುವ ಸಿದ್ದರಾಮಯ್ಯ,  ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ಉತ್ತರ ಇದೆಯಾ ನಿಮ್ಮಲ್ಲಿ? ಎಂದು ಕೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ. ಶ್ರದ್ಧೆ, ಶ್ರಮ ಮತ್ತು ಜನಪಪರಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ‍್ಳುವ ಅಗತ್ಯ ಇಲ್ಲ ಎಂದಿದ್ದಾರೆ.

ವಿಜಯೇಂದ್ರ ಅವರೇ ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ನರೇಂದ್ರ ಮೋದಿ ಅವರ ಪದಚ್ಯುತಿಯ ಸೂಚನೆಯನ್ನು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ. ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ. ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ. ಆ ಹೆಸರುಗಳು ಗೋವಿಂದಪ್ಪ ಕಾರಜೋಳ ಅವರೋ, ಛಲವಾದಿ ನಾರಾಯಾಣ ಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವರಲ್ಲಿ ನಾನು ಮೊದಲಿಗನಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....