Homeಕರ್ನಾಟಕದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ...

ದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ ಸವಾಲು

ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ?

- Advertisement -
- Advertisement -

ನೆಹರೂ ಕುಟುಂಬ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು ಮತ್ತು ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೋಡಿಕೊಂಡು ಬಂದಿದೆ ಎಂದಿರುವ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಿದ್ದರಾಮಯ್ಯ, “ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದಿದ್ದಾರೆ.

ವಿಜಯೇಂದ್ರ ಅವರಿಗೆ ಓದುವ ಅಭ್ಯಾಸ ಇದ್ದರೆ, ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

ಬಂಡಾರುಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು? ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ, ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುವವರು, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಹಿಂದುಳಿದ ನಾಯಕರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳುತ್ತಾ ಬಂದಿದೆ ಎನ್ನುವುದಕ್ಕೆ ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್.ಬಂಗಾರಪ್ಪನವರೇ ಸಾಕ್ಷಿ. ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ.ಎಸ್ ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ. ಇದರ ವಿವರವನ್ನು ಅವರು ನೀಡುತ್ತಲೇ ಇದ್ದಾರೆ. ಬಂಗಾರಪ್ಪನವರಿರಲಿ, ನರೇಂದ್ರ ಮೋದಿ ಅವರೇ ಇರಲಿ, ಎಲ್ಲಿಯ ವರೆಗೆ ಇವರು ವರ್ಣವ್ಯವಸ್ಥೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆ ಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯ ವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ. ಇದು ಮೋದಿಯವರಿಗೂ ತಿಳಿದಿರಲಿ ಎಂದಿದ್ದಾರೆ.

ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ. ದಲಿತ ನಾಯಕ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆಬಿದ್ದು ಇತ್ತೀಚೆಗೆ ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತ: ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸವಾಲ್ ಹಾಕಿದ್ದಾರೆ.

ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು. ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹನನ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ ಎಂದಿರುವ ಸಿದ್ದರಾಮಯ್ಯ,  ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ಉತ್ತರ ಇದೆಯಾ ನಿಮ್ಮಲ್ಲಿ? ಎಂದು ಕೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ. ಶ್ರದ್ಧೆ, ಶ್ರಮ ಮತ್ತು ಜನಪಪರಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ‍್ಳುವ ಅಗತ್ಯ ಇಲ್ಲ ಎಂದಿದ್ದಾರೆ.

ವಿಜಯೇಂದ್ರ ಅವರೇ ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ನರೇಂದ್ರ ಮೋದಿ ಅವರ ಪದಚ್ಯುತಿಯ ಸೂಚನೆಯನ್ನು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ. ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ. ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ. ಆ ಹೆಸರುಗಳು ಗೋವಿಂದಪ್ಪ ಕಾರಜೋಳ ಅವರೋ, ಛಲವಾದಿ ನಾರಾಯಾಣ ಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವರಲ್ಲಿ ನಾನು ಮೊದಲಿಗನಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....