Homeಕರೋನಾ ತಲ್ಲಣನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಈಗ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್ ಸಮಸ್ಯೆಯ ತೀವ್ರತೆಯ ಬಗ್ಗೆ ಪ್ರಾಮಾಣಿಕತೆ ಇದ್ದಲ್ಲಿ ಮಾತ್ರ “ಮುಂಬೈ ಮಾದರಿ” ಇತರ ನಗರಗಳು ಮತ್ತು ರಾಜ್ಯಗಳಲ್ಲಿ ಕೆಲಸ ಮಾಡಬಹುದೆಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ.

“ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳು ಮಹಾರಾಷ್ಟ್ರದಲ್ಲಿ ಮಾತ್ರ ಯಾಕೆ ಕೊರೊನಾ ಎಂದು ಕರೆ ಮಾಡಿ ಕೇಳುತ್ತಿದ್ದರು. ಅವರು ನಮ್ಮನ್ನು ನೋಡಿ ನಗುತ್ತಿದ್ದರು. ಹೀಗೆ ಮಾಡಿದರೆ ಕೊರೊನಾ ನಿರ್ವಹಣೆಗೆ ಬಳಸಿದ ಮಾದರಿಯನ್ನು ಅವರೊಂದಿಗೆ ಹೇಗೆ ಹಂಚಿಕೊಳ್ಳುವುದು?… ವಿಪತ್ತುಗಳು ಸಂಭವಿಸಿದಾಗ, ಕಲಿಯಲು ಸಮಯ ಇರುವುದಿಲ್ಲ, ಆ ಮಾದರಿಗಳನ್ನು ನಕಲಿ ಮಾಡಲು ಸಮಯ ಇರುವುದಿಲ್ಲ” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

“ಮುಂಬೈಯ ಅನುಭವದಿಂದ ತಿಳಿದುಕೊಳ್ಳಿ” ಎಂದು ಸುಪ್ರೀಂ ಕೋರ್ಟ್ ಹೇಳಿದ ಕೆಲವೇ ಗಂಟೆಗಳ ನಂತರ ಬುಧವಾರ ರಾತ್ರಿ ದೆಹಲಿ ಸರ್ಕಾರ ಮತ್ತು ಕೇಂದ್ರದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಮುಂಬಯಿಯಲ್ಲಿ ಈಗ ಆಮ್ಲಜನಕದ ಸಮಸ್ಯೆಗಳು ಇಲ್ಲ. ಲಭ್ಯವಿರುವ ಆಮ್ಲಜನಕದ ಅತ್ಯುತ್ತಮ ಬಳಕೆ, ತಡೆರಹಿತ ವಿತರಣೆ ಮತ್ತು ಬಫರ್ ಸ್ಟಾಕ್ ರಚನೆ ಮತ್ತು ಅದರ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳನ್ನು BMC ಒಟ್ಟುಗೂಡಿಸುವ ಸಾಮರ್ಥ್ಯದ ಬಗ್ಗೆ ಅವರು ಹೇಳಿದ್ದಾರೆ. ಮುಂಬೈಯಲ್ಲಿ ಇದುವರೆಗೂ ಆಮ್ಲಜನಕದ ಕೊರತೆಯಿಂದ ಯಾವುದೆ ಸಾವುಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 16-17 ರ ಮಧ್ಯದ ರಾತ್ರಿ, ಆರು ಆಸ್ಪತ್ರೆಗಳಿಂದ ಆಮ್ಲಜನಕ ಪೂರೈಕೆ ಕಡಿಮೆ ಇರುವುದರಿಂದ 168 ರೋಗಿಗಳನ್ನು ಸ್ಥಳಾಂತರಿಸಲಾಯಿತು. ಅಂದು 40 ರೋಗಿಗಳು ಗಂಭೀರವಾಗಿದ್ದರು. ಅಂತಿಮವಾಗಿ, ಎಲ್ಲರನ್ನು ಬೆಳಿಗ್ಗೆ 1 ರಿಂದ ಬೆಳಿಗ್ಗೆ 5 ರವರೆಗೆ ಸುರಕ್ಷಿತವಾಗಿ ಸೌಲಭ್ಯವಿರುವೆಡೆ ವರ್ಗಾಯಿಸಿ ಎಲ್ಲರ ಜೀವವನ್ನು ಉಳಿಸಿವಂತಾಗಿತ್ತು.

“ಈ ಘಟನೆಯ ನಂತರ, ಏಪ್ರಿಲ್ 17 ರಂದು, ಬಿಎಂಸಿಯು ರಾಜ್ಯ ಕಾರ್ಯಪಡೆಯೊಂದಿಗೆ ಆಮ್ಲಜನಕದ ಬಳಕೆಗೆ ಪ್ರೋಟೋಕಾಲ್ ಕೇಳಿದೆವು. ಆಮ್ಲಜನಕದ ಸ್ಯಾಚುರೇಷನ್‌‌ ಮಟ್ಟ 94% ಕಡಿವೆ ಇರುವವರಿಗೆ ಬೇಕಾಬಿಟ್ಟಿಯಾಗಿ ಬಳಸಬಾರದು. ಆಮ್ಲಜನಕದ ಬಳಕೆಯ ಲೆಕ್ಕಪರಿಶೋಧನೆ ಇರಬೇಕು, ಈ ಮಾಹಿತಿಯನ್ನು ನಗರದ ಎಲ್ಲಾ 176 ಆಸ್ಪತ್ರೆಗಳಿಗೆ ಪ್ರಸಾರ ಮಾಡಲಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತನಗೆ ಮುಕ್ತ ಅಧಿಕಾರ ನೀಡಿದ್ದಾಗಿ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ. “ನಾನು ಅನೇಕ ವಿಧಗಳಲ್ಲಿ ತುಂಬಾ ಅದೃಷ್ಟಶಾಲಿ, ವಾಸ್ತವಿಕವಾಗಿ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಆ ರೀತಿಯ ಮುಕ್ತ ಅಧಿಕಾರ ಸಿಎಂ ನನಗೆ ನೀಡಿದ್ದಾರೆ. ಈ ಅಧಿಕಾರ ದೇಶದ ಅನೇಕ ನಗರಗಳ ನನ್ನ ಸಹೋದ್ಯೋಗಿಗಳಿಗೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮುಂಬೈಯಲ್ಲಿ ಕೊರೊನಾ ಪರಿಸ್ಥಿತಿ ಹದಗೆಡುತ್ತಿದ್ದಾಗ ಇಕ್ಬಾಲ್ ಸಿಂಗ್ ಚಾಹಲ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಒಂದು ಸಮಯದಲ್ಲಿ ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

ಮುಂಬೈ ಈಗಾಗಲೇ ಕೊರೊನಾ ಮೂರನೇ ಅಲೆಗೆ ತಯಾರಿ ನಡೆಸುತ್ತಿದೆ. ನಗರದಲ್ಲಿ ಬೃಹತ್‌ ಮಟ್ಟದ ಸೌಲಭ್ಯಗಳು ಮತ್ತು ಆಮ್ಲಜನಕ ಸ್ಥಾವರಗಳೊಂದಿಗೆ ಸುಮಾರು 5,500 ಹಾಸಿಗೆಗಳನ್ನು ಸೇರಿಸಲಾಗುತ್ತಿದೆ, ಇವುಗಳಲ್ಲಿ 70% ಆಮ್ಲಜನ ಇರುವ ಹಾಸಿಗೆಗಳಾಗಿದೆ.

ಇದನ್ನೂ ಓದಿ: ‘ಮೌಲ್ಯಗಳಿಗೆ ಸರಿ ಹೊಂದುತ್ತಿಲ್ಲ’: ಸುಪ್ರೀಂನಲ್ಲಿ ಚುನಾವಣಾ ಆಯೋಗವನ್ನು ಪ್ರತಿನಿಧಿಸುವ ವಕೀಲ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...