Homeಕರೋನಾ ತಲ್ಲಣನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ನಮ್ಮನ್ನು ನೋಡಿ ನಗುತ್ತಿದ್ದರೆ, ಮುಂಬೈ ಮಾದರಿಯನ್ನು ಹೇಗೆ ಹಂಚಿಕೊಳ್ಳುವುದು: ಮುಂಬೈ ಆಯುಕ್ತ

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಈಗ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್ ಸಮಸ್ಯೆಯ ತೀವ್ರತೆಯ ಬಗ್ಗೆ ಪ್ರಾಮಾಣಿಕತೆ ಇದ್ದಲ್ಲಿ ಮಾತ್ರ “ಮುಂಬೈ ಮಾದರಿ” ಇತರ ನಗರಗಳು ಮತ್ತು ರಾಜ್ಯಗಳಲ್ಲಿ ಕೆಲಸ ಮಾಡಬಹುದೆಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ.

“ಎರಡು ತಿಂಗಳ ಹಿಂದೆ ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳು ಮಹಾರಾಷ್ಟ್ರದಲ್ಲಿ ಮಾತ್ರ ಯಾಕೆ ಕೊರೊನಾ ಎಂದು ಕರೆ ಮಾಡಿ ಕೇಳುತ್ತಿದ್ದರು. ಅವರು ನಮ್ಮನ್ನು ನೋಡಿ ನಗುತ್ತಿದ್ದರು. ಹೀಗೆ ಮಾಡಿದರೆ ಕೊರೊನಾ ನಿರ್ವಹಣೆಗೆ ಬಳಸಿದ ಮಾದರಿಯನ್ನು ಅವರೊಂದಿಗೆ ಹೇಗೆ ಹಂಚಿಕೊಳ್ಳುವುದು?… ವಿಪತ್ತುಗಳು ಸಂಭವಿಸಿದಾಗ, ಕಲಿಯಲು ಸಮಯ ಇರುವುದಿಲ್ಲ, ಆ ಮಾದರಿಗಳನ್ನು ನಕಲಿ ಮಾಡಲು ಸಮಯ ಇರುವುದಿಲ್ಲ” ಎಂದು ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

“ಮುಂಬೈಯ ಅನುಭವದಿಂದ ತಿಳಿದುಕೊಳ್ಳಿ” ಎಂದು ಸುಪ್ರೀಂ ಕೋರ್ಟ್ ಹೇಳಿದ ಕೆಲವೇ ಗಂಟೆಗಳ ನಂತರ ಬುಧವಾರ ರಾತ್ರಿ ದೆಹಲಿ ಸರ್ಕಾರ ಮತ್ತು ಕೇಂದ್ರದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಮುಂಬಯಿಯಲ್ಲಿ ಈಗ ಆಮ್ಲಜನಕದ ಸಮಸ್ಯೆಗಳು ಇಲ್ಲ. ಲಭ್ಯವಿರುವ ಆಮ್ಲಜನಕದ ಅತ್ಯುತ್ತಮ ಬಳಕೆ, ತಡೆರಹಿತ ವಿತರಣೆ ಮತ್ತು ಬಫರ್ ಸ್ಟಾಕ್ ರಚನೆ ಮತ್ತು ಅದರ ಅಸ್ತಿತ್ವದಲ್ಲಿರುವ ಸಂಪನ್ಮೂಲಗಳನ್ನು BMC ಒಟ್ಟುಗೂಡಿಸುವ ಸಾಮರ್ಥ್ಯದ ಬಗ್ಗೆ ಅವರು ಹೇಳಿದ್ದಾರೆ. ಮುಂಬೈಯಲ್ಲಿ ಇದುವರೆಗೂ ಆಮ್ಲಜನಕದ ಕೊರತೆಯಿಂದ ಯಾವುದೆ ಸಾವುಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 16-17 ರ ಮಧ್ಯದ ರಾತ್ರಿ, ಆರು ಆಸ್ಪತ್ರೆಗಳಿಂದ ಆಮ್ಲಜನಕ ಪೂರೈಕೆ ಕಡಿಮೆ ಇರುವುದರಿಂದ 168 ರೋಗಿಗಳನ್ನು ಸ್ಥಳಾಂತರಿಸಲಾಯಿತು. ಅಂದು 40 ರೋಗಿಗಳು ಗಂಭೀರವಾಗಿದ್ದರು. ಅಂತಿಮವಾಗಿ, ಎಲ್ಲರನ್ನು ಬೆಳಿಗ್ಗೆ 1 ರಿಂದ ಬೆಳಿಗ್ಗೆ 5 ರವರೆಗೆ ಸುರಕ್ಷಿತವಾಗಿ ಸೌಲಭ್ಯವಿರುವೆಡೆ ವರ್ಗಾಯಿಸಿ ಎಲ್ಲರ ಜೀವವನ್ನು ಉಳಿಸಿವಂತಾಗಿತ್ತು.

“ಈ ಘಟನೆಯ ನಂತರ, ಏಪ್ರಿಲ್ 17 ರಂದು, ಬಿಎಂಸಿಯು ರಾಜ್ಯ ಕಾರ್ಯಪಡೆಯೊಂದಿಗೆ ಆಮ್ಲಜನಕದ ಬಳಕೆಗೆ ಪ್ರೋಟೋಕಾಲ್ ಕೇಳಿದೆವು. ಆಮ್ಲಜನಕದ ಸ್ಯಾಚುರೇಷನ್‌‌ ಮಟ್ಟ 94% ಕಡಿವೆ ಇರುವವರಿಗೆ ಬೇಕಾಬಿಟ್ಟಿಯಾಗಿ ಬಳಸಬಾರದು. ಆಮ್ಲಜನಕದ ಬಳಕೆಯ ಲೆಕ್ಕಪರಿಶೋಧನೆ ಇರಬೇಕು, ಈ ಮಾಹಿತಿಯನ್ನು ನಗರದ ಎಲ್ಲಾ 176 ಆಸ್ಪತ್ರೆಗಳಿಗೆ ಪ್ರಸಾರ ಮಾಡಲಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೇ 10 ರಿಂದ ಲಾಕ್‌ಡೌನ್‌‌‌ – ‘ಜನ ಹೊಟ್ಟೆಗೆ ಏನು ತಿಂತಾರೆ?’; ಆಕ್ರೋಶ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತನಗೆ ಮುಕ್ತ ಅಧಿಕಾರ ನೀಡಿದ್ದಾಗಿ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ. “ನಾನು ಅನೇಕ ವಿಧಗಳಲ್ಲಿ ತುಂಬಾ ಅದೃಷ್ಟಶಾಲಿ, ವಾಸ್ತವಿಕವಾಗಿ ನಾನು ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಆ ರೀತಿಯ ಮುಕ್ತ ಅಧಿಕಾರ ಸಿಎಂ ನನಗೆ ನೀಡಿದ್ದಾರೆ. ಈ ಅಧಿಕಾರ ದೇಶದ ಅನೇಕ ನಗರಗಳ ನನ್ನ ಸಹೋದ್ಯೋಗಿಗಳಿಗೆ ಇಲ್ಲ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮುಂಬೈಯಲ್ಲಿ ಕೊರೊನಾ ಪರಿಸ್ಥಿತಿ ಹದಗೆಡುತ್ತಿದ್ದಾಗ ಇಕ್ಬಾಲ್ ಸಿಂಗ್ ಚಾಹಲ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಒಂದು ಸಮಯದಲ್ಲಿ ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಪೀಡಿತ ನಗರವಾಗಿದ್ದ ಮುಂಬೈಯಲ್ಲಿ ಪರಿಸ್ಥಿತಿ ಸುಧಾರಣೆಯಾಗುತ್ತಿದೆ.

ಮುಂಬೈ ಈಗಾಗಲೇ ಕೊರೊನಾ ಮೂರನೇ ಅಲೆಗೆ ತಯಾರಿ ನಡೆಸುತ್ತಿದೆ. ನಗರದಲ್ಲಿ ಬೃಹತ್‌ ಮಟ್ಟದ ಸೌಲಭ್ಯಗಳು ಮತ್ತು ಆಮ್ಲಜನಕ ಸ್ಥಾವರಗಳೊಂದಿಗೆ ಸುಮಾರು 5,500 ಹಾಸಿಗೆಗಳನ್ನು ಸೇರಿಸಲಾಗುತ್ತಿದೆ, ಇವುಗಳಲ್ಲಿ 70% ಆಮ್ಲಜನ ಇರುವ ಹಾಸಿಗೆಗಳಾಗಿದೆ.

ಇದನ್ನೂ ಓದಿ: ‘ಮೌಲ್ಯಗಳಿಗೆ ಸರಿ ಹೊಂದುತ್ತಿಲ್ಲ’: ಸುಪ್ರೀಂನಲ್ಲಿ ಚುನಾವಣಾ ಆಯೋಗವನ್ನು ಪ್ರತಿನಿಧಿಸುವ ವಕೀಲ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...