Homeಆರೋಗ್ಯಸಕ್ಕರೆಯೆಂಬ ಹೊಸ ತಂಬಾಕು: ದಿನಕ್ಕೆ 25 ಗ್ರಾಂ ಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ...

ಸಕ್ಕರೆಯೆಂಬ ಹೊಸ ತಂಬಾಕು: ದಿನಕ್ಕೆ 25 ಗ್ರಾಂ ಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ

ಸಕ್ಕರೆಗೂ ಮಾದಕ ದ್ರವ್ಯಗಳ ವ್ಯಸನಿಗಳಿಗೂ ಯಾವುದೇ ವ್ಯತ್ಯಾಸವಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ನಮ್ಮ ನಿತ್ಯ ಆಹಾರದಿಂದ ಶೇ.10 ಕ್ಕಿಂತ ಹೆಚ್ಚು ಶಕ್ತಿಯನ್ನು ಸಕ್ಕರೆಯಿಂದ ಬರದಂತೆ ನೋಡಿಕೊಳ್ಳಿ ಎಂದಿದೆ.

- Advertisement -
- Advertisement -

ಕೊಕಕೋಲಾದಲ್ಲಿರುವ ಪೌಷ್ಠಿಕಾಂಶಗಳಾವುವು ಎಂದು ಕೇಳಿದಾಗ ಆ ಕಂಪನಿಯವ ಇದರಲ್ಲಿ ಮಾರಾಟವೊಂದೇ ಪೌಷ್ಠಿಕಾಂಶ (marketing is the only nutrient) ಎಂದು ಉತ್ತರಿಸುತ್ತಾನೆ. ಒಂದು ಬಾಟಲಿ ಕೊಕಕೋಲಾ ಅಥವಾ ಪೆಪ್ಸಿಯಲ್ಲಿ ಸುಮಾರು 45 ಗ್ರಾಂ ಸಕ್ಕರೆ ಜೊತೆಗೆ ಇಂಗಾಲದ ಡೈ ಆಕ್ಸೈಡ್ ಮತ್ತು ಕೃತಕ ಬಣ್ಣವಷ್ಟೇ ಇರುವುದರಿಂದ ಮಾರಾಟ ತಂತ್ರವೇ ಇದರ ನಿಜವಾದ ಅಸ್ತ್ರ. ಇದಕ್ಕೆ ಮೊದಲು ಜನರನ್ನು ವ್ಯಸನಿಗಳನ್ನಾಗಿಸಲು ಸ್ವಲ್ಪ ಕೊಕೇನ್ ಕೂಡ ಬಳಸಲಾಗುತ್ತಿತ್ತು. ಇದನ್ನು ವ್ಯಾಪಾರ ಜಗತ್ತಿನಲ್ಲಿ ಬ್ರೈನ್ ವಾಷಿಂಗ್ ಬದಲು ಬ್ರ್ಯಾಂಡ್ ವಾಷಿಂಗ್ ಎನ್ನುತ್ತಾರೆ. ಸ್ನೇಹಿತರೊಬ್ಬರು ಮಕ್ಕಳ ಹಾಲಿನ ಪುಡಿ ಮಾಡುವ ಕಂಪೆನಿಯಲ್ಲಿ ವಿಜ್ಞಾನಿಯಾಗಿದ್ದರು. ಅವರಿಗೆ ಮಕ್ಕಳ ಹಾಲಿನ ಪುಡಿಯಲ್ಲಿ ಸಕ್ಕರೆಯನ್ನು (ಸುಕ್ರೋಸ್) ಏಕೆ ಬಳಸುವಿರಿ, ತಾಯಿಯ ಹಾಲಿನಲ್ಲಿ ಇದು ಇಲ್ಲವಲ್ಲ ಎಂದು ಕೇಳಿದಾಗ ಅವರು ಕೊಟ್ಟ ಉತ್ತರ ಇದು: ನಮ್ಮ ಹಾಲಿನ ಪುಡಿಯನ್ನು ಒಮ್ಮೆ ಹಸುಗೂಸುಗಳು ಕುಡಿದ ಮೇಲೆ ತಾಯಿಯ ಹಾಲನ್ನ ಬಯಸುವುದಿಲ್ಲ ಎಂದು.

ಸಕ್ಕರೆಯನ್ನು ಇಂದು ನೂತನ ತಂಬಾಕು ಎಂದೇ ಆರೋಗ್ಯ ವ್ಯವಸ್ಥೆಯಲ್ಲಿ ಪರಿಗಣಿಸಲಾಗುತ್ತಿದೆ. ರಾಬರ್ಟ್ ಲಸ್ಟಿಕ್ ಸುಮಾರು 10 ವರ್ಷಗಳ ಹಿಂದೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸಕ್ಕರೆ ಎಂಬ ಕಹಿ ಸತ್ಯ (sugar, the bitter truth) ಎಂಬ ಭಾಷಣದಲ್ಲಿ ಸಕ್ಕರೆ ತಂದಿರುವ ಅನಾರೋಗ್ಯ ಅವಾಂತರವನ್ನು ವಿಶ್ಲೇಷಿಸಿದ್ದರು. ಇದನ್ನು ಸುಮಾರು 1 ಕೋಟಿಗೂ ಹೆಚ್ಚು ಜನ ಗಮನಿಸಿದ್ದಾರೆ. ಒಂದು ವೈಜ್ಞಾನಿಕ ಪರೀಕ್ಷೆಯಲ್ಲಿ 2 ಗುಂಪಿನ ಇಲಿಗಳನ್ನು ಬಳಸಿ ಒಂದು ಇಲಿಗಳ ಗುಂಪಿಗೆ ಹಣ್ಣು ತರಕಾರಿಗಳನ್ನ ಕೊಟ್ಟು, ಇನ್ನೊಂದು ಗುಂಪಿನ ಇಲಿಗಳಿಗೆ ಸಕ್ಕರೆ ಕೊಟ್ಟು ಪಳಗಿಸಿ, ಸ್ವಲ್ಪ ಕಾಲದ ನಂತರ ಈ ಎರಡೂ ಗುಂಪಿನ ಇಲಿಗಳ ಮೇಲೆ ಮೈ ಸುಡುವ ಲೇಸರ್ ಬೆಳಕನ್ನು ಹಾಯಿಸಿದಾಗ, ಹಣ್ಣು, ತರಕಾರಿ ತಿನ್ನುವ ಇಲಿಗಳು ಜೀವಭಯದಿಂದ, ಜೀವವಿದ್ರೆ ಮುಂದೆ ತಿನ್ನಬಹುದೆಂದು ಚಂಗನೆ ಹಾರಿ ಓಡಿಹೋದವು. ಆದರೆ ಸಕ್ಕರೆಗೆ ಪಳಗಿದ್ದ ಇಲಿಯ ಗುಂಪು ಮೈ ಸುಟ್ಟರೂ ಸಕ್ಕರೆಯನ್ನು ತಿನ್ನುತ್ತಲೇ ಇದ್ದವು. ಈ ಪ್ರಯೋಗದಿಂದ ತಿಳಿದುಬಂದದ್ದೇನೆಂದರೆ ಸಕ್ಕರೆಗೂ ಮಾದಕ ದ್ರವ್ಯಗಳ ವ್ಯಸನಿಗಳಿಗೂ ಯಾವುದೇ ವ್ಯತ್ಯಾಸವಿಲ್ಲವೆಂದು. ಇದನ್ನು ಗಮನಿಸಿದ ವಿಶ್ವ ಆರೋಗ್ಯ ಸಂಸ್ಥೆ ನಮ್ಮ ನಿತ್ಯ ಆಹಾರದಿಂದ ಶೇ.10 ಕ್ಕಿಂತ ಹೆಚ್ಚು ಶಕ್ತಿಯನ್ನು ಸಕ್ಕರೆಯಿಂದ ಬರದಂತೆ ನೋಡಿಕೊಳ್ಳಿ ಎಂದು ಹೇಳಿರುವುದಲ್ಲದೆ ಇನ್ನೂ ಉತ್ತಮವಾದ ಮತ್ತು ನಿಜವಾದ ಆರೋಗ್ಯಕ್ಕಾಗಿ ಅದನ್ನು ಶೇ.5ಕ್ಕಿಂತ ಕಮ್ಮಿ ಮಾಡಿಕೊಂಡರೆ ಒಳಿತೆಂದು ಸ್ಪಷ್ಟವಾಗಿ ಹೇಳಿದೆ. ಶೇ.5ರಷ್ಟು ಶಕ್ತಿಯನ್ನು ಸಕ್ಕರೆಯಿಂದಲೇ ಪಡೆಯಲೇಬೇಕೆಂದೇನಲ್ಲ, ಬಳಸಲೇಬೇಕಾದರೂ ಅಷ್ಟರೊಳಗೆ ನಿಯಂತ್ರಿಸಿ ಎನ್ನುವುದಾಗಿದೆ. ಇದರ ಅರ್ಥ ದಿನಕ್ಕೆ 25 ಗ್ರಾಂಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ.

ಈ 25 ಗ್ರಾಂ ಸಕ್ಕರೆ ಒಂದು ದಿನಕ್ಕೆ ಎನ್ನುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರವಾಗಿ ಭಾರತದ 138 ಕೋಟಿ ಜನರಿಗೆ 12 ಮಿಲಿಯನ್ ಟನ್ ಸಕ್ಕರೆ ಬೇಕಾಗುತ್ತದೆ. ಅಥವಾ ಶೇ.10 ರಷ್ಟು ಗರಿಷ್ಠ ಸಕ್ಕರೆಯನ್ನು ಲೆಕ್ಕ ಹಾಕಿದರೂ 24 ಮಿಲಿಯನ್ ಟನ್ ಸಾಕು. ಹನ್ನೆರಡಲ್ಲ 24 ಟನ್ನೂ ಅಲ್ಲ, ನಮ್ಮಲ್ಲಿ ಸುಮಾರು 35 ಮಿಲಿಯನ್ ಟನ್ ಸಕ್ಕರೆಯನ್ನು ಪ್ರತಿವರ್ಷ ಉತ್ಪಾದಿಸುತ್ತೇವೆ. ‘ಬೇಕಾಗಿರುವ’ ಹನ್ನೆರಡು ಮಿಲಿಯನ್ ಟನ್‍ಗಿಂತ ಮೂರು ಪಟ್ಟು ಸಕ್ಕರೆಯ ಉತ್ಪಾದನೆಯಾಗುತ್ತಿದೆ. ಜಗತ್ತಿನ ಮಧುಮೇಹ ರಾಜಧಾನಿಯೆಂದು ಭಾರತವನ್ನು ಕರೆಯುತ್ತಾರೆ. ವಯಸ್ಕರಿಗೆ ಸುಮಾರು ಶೇ.14 ರಷ್ಟು ಜನರಲ್ಲಿ ಮಧುಮೇಹ ರೋಗವಿದೆ. ಸುಮಾರು 40 ವರ್ಷಕ್ಕೆ ಮಧುಮೇಹ ಬಂದರೆ ಸುಮಾರು 10 ಲಕ್ಷ ರೂಪಾಯಿ ಆರೋಗ್ಯಕ್ಕೆ ಖರ್ಚು ಮಾಡಬೇಕಾಗುತ್ತದೆ. ಈ 35 ಮಿಲಿಯನ್ ಟನ್ ಸಕ್ಕರೆಗಾಗಿ 350 ಮಿಲಿಯನ್ ಟನ್ ಕಬ್ಬನ್ನು ಬೆಳೆಯಲು ಸುಮಾರು 5 ಮಿಲಿಯನ್ ಹೆಕ್ಟೇರ್ ಭೂಮಿಯನ್ನು ಬಳಸಲಾಗುತ್ತಿದೆ. ಮಹಾರಾಷ್ಟ್ರದಂತಹ ರಾಜ್ಯದಲ್ಲಿರುವ ಸುಮಾರು 1800 ಲಕ್ಷ ಕೋಟಿಯಷ್ಟು ಜನರ ತೆರಿಗೆ ಹಣದಿಂದ ಖರ್ಚು ಮಾಡಿ ಕಟ್ಟಿರುವ ಅಣೆಕಟ್ಟಿನಿಂದ ಶೇ.80ರಷ್ಟು ನೀರು ಕೇವಲ ಕಬ್ಬಿನ ಗದ್ದೆಗೆ ಹರಿಯುತ್ತದೆ. Sugar cane is a water guzzler, diabetes inducer. ಕಬ್ಬಿನಿಂದ ಬರುವ ಸಕ್ಕರೆಯಾಗಲಿ ಅಥವಾ ಸಾರಾಯಿಯಾಗಲಿ ಪರಿಸರಕ್ಕೆ ಮತ್ತು ಮನುಕುಲಕ್ಕೆ ಎಲ್ಲಾ ರೀತಿಯಿಂದಲೂ ಮಾರಕವೇ ಆಗಿದೆ.

ಮನುಷ್ಯನ ದೇಹದಲ್ಲಿ ಸುಮಾರು 5 ಲೀಟರ್ ರಕ್ತವಿದ್ದು, ಅದಕ್ಕೆ ಕೇವಲ 5 ಗ್ರಾಂ ಸಕ್ಕರೆಯನ್ನು ಮಾತ್ರ ಶೇಖರಿಸಲು ಸಾಮರ್ಥ್ಯವಿರುವುದು. ನಾವು ಸುಲಭವಾಗಿ ಬಳಸುವ ಸಕ್ಕರೆ ರಕ್ತಕ್ಕೆ ಶೀಘ್ರವಾಗಿ ಪ್ರವಾಹವಾಗಿ ದೇಹದ ಶೇಖರಣಾ ಸಾಮರ್ಥ್ಯವನ್ನು ಮೀರಿದಾಗ ಇನ್ಸುಲಿನ್ ಹಾರ್ಮೋನ್ ಹೆಚ್ಚು ಉತ್ಪತ್ತಿಯಾಗಿ ಈ ಸಕ್ಕರೆಯ ಪ್ರವಾಹವನ್ನು ಕೊಬ್ಬಾಗಿ ನಿರಂತರವಾಗಿ ಪರಿವರ್ತಿಸಬೇಕಾಗುತ್ತದೆ. ಹೀಗೆ ಸತತವಾಗಿ ದುಡಿದ ಇನ್ಸುಲಿನ್ ಉತ್ಪಾದಿಸುವ ಪ್ಯಾಂಕ್ರಿಯಾಸ್ ಅಥವಾ ಇನ್ಸುಲಿನ್ ಹೇಳಿದ ಮಾತಿನಂತೆ ಸಕ್ಕರೆಯನ್ನು ಬೇರೆಡೆಗೆ ಶೇಖರಿಸುವ ಜೀವಕೋಶಗಳು ಸೋತು ದೇಹದ ಸಂವಾಹಕಗಳು ಹಳಿ ತಪ್ಪಿದಾಗ ಉಂಟಾಗುವುದೇ ಮಧುಮೇಹ ರೋಗ. ಮನುಷ್ಯ ಅನುವಂಶಿಕವಾಗಿ ಸಕ್ಕರೆಯನ್ನು ರಕ್ತದಲ್ಲಿ ಹಿಡಿದಿಡಲು ಸಾಮರ್ಥ್ಯವಿಲ್ಲದಿರುವ ವಿದ್ಯಮಾನ, ಮಂಗನಿಂದ ಮಾನವನಾದ ವಿಕಾಸವಾದ ಅಡಗಿದೆ ಎನ್ನುತ್ತಾರೆ. ಹಣ್ಣು ಹಂಪಲನ್ನು ತಿನ್ನುವ ನಮ್ಮ “ಪೂರ್ವಾಶ್ರಮದಲ್ಲಿ” ಸಕ್ಕರೆಯನ್ನು ಹಿಡಿದಿಡುವ ಪ್ರಮೇಯವೇ ಒದಗಿರಲಿಲ್ಲ. ಅವಶ್ಯಕತೆ ಇಲ್ಲದ್ದು ವಿಕಾಸವಾಗುವ ಅವಕಾಶವಿರಲಿಲ್ಲ. ಹಾಗಾಗಿ ಇಂದಿಗೆ ನಾವು ಹೆಚ್ಚು ಸಕ್ಕರೆ ಬಳಸುವುದು ನಮ್ಮ ದೈಹಿಕ ಚಟುವಟಿಕೆಯ ಕಾರ್ಯವೈಖರಿಯ ಮತ್ತು ಬದುಕಿನ ಜೀವನಶೈಲಿಗೆ ವಿರುದ್ಧವಾದದ್ದು.

ಹಣ್ಣಿನಿಂದ ಸಕ್ಕರೆ ಬರುವಾಗ ಇಂತಹ ಸಮಸ್ಯೆ ಇರದಿರಲು ಕಾರಣ ಹಣ್ಣಿನಲ್ಲಿರುವ ಅಂಶ ಸುಮಾರು ಶೇ.10 ರಷ್ಟು ಸಕ್ಕರೆ ಜೊತೆ ಸುಮಾರು 85 ರಿಂದ 90 ರಷ್ಟು ನೀರೆ ಆಗಿರುತ್ತದೆ. ಹೀಗಾಗಿ ಹೊಟ್ಟೆ ತುಂಬಿ ಹೆಚ್ಚು ತಿನ್ನಲಾಗದು. ತಿನ್ನುವ ಆಹಾರವೇ ನಿಮ್ಮನ್ನು ನಿಯಂತ್ರಿಸುತ್ತದೆ. ಇದೇ ಕಬ್ಬಿನಿಂದ ಜಗಿದು ರಸದಲ್ಲಿರುವ ಸಕ್ಕರೆಯನ್ನು ತೆಗೆದುಕೊಳ್ಳಬೇಕಾದರೆ 10 ಗ್ರಾಂ ಸಕ್ಕರೆಗೆ 100 ಗ್ರಾಂ ಕಬ್ಬನ್ನು ಜಗಿದು ರಸ ಹೀರಲು ಕಾಲು ಗಂಟೆ ಬೇಕಾಗಬಹುದು – ಹಲ್ಲು ಗಟ್ಟಿ ಇದ್ದರೆ. ಅದೇ ನಾವು 2 ಚಮಚ ಸಕ್ಕರೆ ಹಾಕಿಕೊಳ್ಳಲು ಯಾವುದೇ ಆಲೋಚನೆ ಮಾಡುವುದಿಲ್ಲ. ಯಾವುದೇ ಆಹಾರ ಪದಾರ್ಥ ಶುದ್ಧವಾದಾಗ ಸತ್ವ ಹೀನವಾಗುತ್ತದೆ. Pure is junk. ಅದು ಆಹಾರಕ್ಕೂ ಮತ್ತು ಶುದ್ಧ ಮನುಷ್ಯರಿಗೂ ಅನ್ವಯ.

ಈಗ ಸಕ್ಕರೆಯ ಪರವಾಗಿ ವಕಾಲತ್ತು ವಹಿಸಲು ಹುಟ್ಟುಹಾಕಲಾಗಿರುವ ಮೀಟಾ.ಆರ್ಗ್ ಈ ಎಲ್ಲಾ ನಗ್ನ ಸತ್ಯಗಳ ವಿರುದ್ಧ ಹಿಂದೆ ಹೇಗೆ ತಂಬಾಕು ಲಾಬಿ ಸಿಗರೇಟಿನ ಪರ ಅಪಾರವಾದ ಪ್ರಚಾರ ಮಾಡಿತ್ತೋ ಹಾಗೆಯೇ ಮುಂದುವರಿಯುತ್ತಿದೆ. ತಂಬಾಕು ಲಾಬಿ ಸಿಗರೇಟಿಗೂ ಕ್ಯಾನ್ಸರ್‌ಗೂ ಸಂಬಂಧವೇ ಇಲ್ಲವೆಂದು ಸುಮಾರು 100 ವರ್ಷಗಳ ಕಾಲ “ವೈಜ್ಞಾನಿಕ” ಸಂಶೋಧನೆಗಳನ್ನು ಮಾಡಿ ಪ್ರಕಟಿಸಿತು. ಅನೇಕ ಲಾಬಿಗಳನ್ನು ಸೃಷ್ಟಿಮಾಡಿತ್ತು. ತಂಬಾಕಿನ ಪರವಾಗಿ ಅನೇಕ ಪುಸ್ತಕಗಳನ್ನು ಬರೆಯಲಾಯಿತು. ಡನ್‍ಹಿಲ್ ಎಂಬುವ ವ್ಯಕ್ತಿ ಜಂಟಲ್ ಆರ್ಟ್ ಆಫ್ ಸ್ಮೋಕಿಂಗ್ ಎನ್ನುವ ಪುಸ್ತಕ ಬರೆದ. ಕೊಕಕೋಲಾ ಕಂಪೆನಿಯವರು ಸಕ್ಕರೆ ಪರ ಇದೇ ರೀತಿಯ ವಕಾಲತ್ತನ್ನು ವಹಿಸುತ್ತಾರೆ. ಅನೇಕ ಬಾರಿ ಇಂತಹ ಲಾಬಿಗಳಿಗೆ ಕೊಕಕೋಲಾ ಮತ್ತು ಪೆಪ್ಸಿಯಂತಹ ಕಂಪೆನಿಗಳಿಂದ ಹಣ ಹೂಡಿಕೆಯಾಗುತ್ತದೆ. ಕೋಲಾ ಕಂಪೆನಿಗಳು ಹೇಳುವುದು ನಮ್ಮ ಕೋಲಾ ಕುಡಿದು ಸುಮಾರು 2 ಕಿ.ಮೀ ಓಡಿದರೆ ಯಾವ ಬೊಜ್ಜು ಬರುವುದಿಲ್ಲ ಎಂದು. ಸೋಮಾರಿಗಳು ಕೊಕಕೋಲಾ ಕುಡಿದು ಬೇಜವಾಬ್ದಾರಿಯಿಂದ ಕೊಕಕೋಲಾದಿಂದ ಬೊಜ್ಜು ಬರುತ್ತದೆ ಎಂದು ಹೇಳುತ್ತಾರೆ ಎನ್ನುವುದು ಅವರ ವಾದ. ಹೊರನೋಟಕ್ಕೆ ಸರಿ ಕಂಡರೂ ಅವರ ದೂರ್ತ ಆಲೋಚನೆ ಮತ್ತು ಅವರ ದುರುದ್ದೇಶ ಸ್ಪಷ್ಟವಾಗಿ ಗೋಚರವಾಗುತ್ತದೆ.

ಸಕ್ಕರೆ ಮತ್ತು ಕಬ್ಬನ್ನು ಮುಕ್ಕಾಲು ಭಾಗ ಕಮ್ಮಿ ಮಾಡಿ ಭಾರತೀಯರ ಆರೋಗ್ಯ, ಮಣ್ಣಿನ ಆರೋಗ್ಯ, ನೀರಿನ ಸಂರಕ್ಷಣೆ, ಪರಿಸರ ಪಾಲನೆಗಾಗಿ ಎಲ್ಲರೂ ಒಟ್ಟಾಗಿ ಚರ್ಚೆ ನಡೆಸಿ ಆರೋಗ್ಯಕರ ಕ್ರಮಗಳಿಗೆ ಮುಂದಾಗಬೇಕಿರುವ ತುರ್ತು ನಮ್ಮ ಮುಂದಿದೆ.


ಇದನ್ನೂ ಓದಿ: ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...