Homeಆರೋಗ್ಯಸಕ್ಕರೆಯೆಂಬ ಹೊಸ ತಂಬಾಕು: ದಿನಕ್ಕೆ 25 ಗ್ರಾಂ ಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ...

ಸಕ್ಕರೆಯೆಂಬ ಹೊಸ ತಂಬಾಕು: ದಿನಕ್ಕೆ 25 ಗ್ರಾಂ ಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ

ಸಕ್ಕರೆಗೂ ಮಾದಕ ದ್ರವ್ಯಗಳ ವ್ಯಸನಿಗಳಿಗೂ ಯಾವುದೇ ವ್ಯತ್ಯಾಸವಿಲ್ಲವೆಂದು ವಿಶ್ವ ಆರೋಗ್ಯ ಸಂಸ್ಥೆ ನಮ್ಮ ನಿತ್ಯ ಆಹಾರದಿಂದ ಶೇ.10 ಕ್ಕಿಂತ ಹೆಚ್ಚು ಶಕ್ತಿಯನ್ನು ಸಕ್ಕರೆಯಿಂದ ಬರದಂತೆ ನೋಡಿಕೊಳ್ಳಿ ಎಂದಿದೆ.

- Advertisement -
- Advertisement -

ಕೊಕಕೋಲಾದಲ್ಲಿರುವ ಪೌಷ್ಠಿಕಾಂಶಗಳಾವುವು ಎಂದು ಕೇಳಿದಾಗ ಆ ಕಂಪನಿಯವ ಇದರಲ್ಲಿ ಮಾರಾಟವೊಂದೇ ಪೌಷ್ಠಿಕಾಂಶ (marketing is the only nutrient) ಎಂದು ಉತ್ತರಿಸುತ್ತಾನೆ. ಒಂದು ಬಾಟಲಿ ಕೊಕಕೋಲಾ ಅಥವಾ ಪೆಪ್ಸಿಯಲ್ಲಿ ಸುಮಾರು 45 ಗ್ರಾಂ ಸಕ್ಕರೆ ಜೊತೆಗೆ ಇಂಗಾಲದ ಡೈ ಆಕ್ಸೈಡ್ ಮತ್ತು ಕೃತಕ ಬಣ್ಣವಷ್ಟೇ ಇರುವುದರಿಂದ ಮಾರಾಟ ತಂತ್ರವೇ ಇದರ ನಿಜವಾದ ಅಸ್ತ್ರ. ಇದಕ್ಕೆ ಮೊದಲು ಜನರನ್ನು ವ್ಯಸನಿಗಳನ್ನಾಗಿಸಲು ಸ್ವಲ್ಪ ಕೊಕೇನ್ ಕೂಡ ಬಳಸಲಾಗುತ್ತಿತ್ತು. ಇದನ್ನು ವ್ಯಾಪಾರ ಜಗತ್ತಿನಲ್ಲಿ ಬ್ರೈನ್ ವಾಷಿಂಗ್ ಬದಲು ಬ್ರ್ಯಾಂಡ್ ವಾಷಿಂಗ್ ಎನ್ನುತ್ತಾರೆ. ಸ್ನೇಹಿತರೊಬ್ಬರು ಮಕ್ಕಳ ಹಾಲಿನ ಪುಡಿ ಮಾಡುವ ಕಂಪೆನಿಯಲ್ಲಿ ವಿಜ್ಞಾನಿಯಾಗಿದ್ದರು. ಅವರಿಗೆ ಮಕ್ಕಳ ಹಾಲಿನ ಪುಡಿಯಲ್ಲಿ ಸಕ್ಕರೆಯನ್ನು (ಸುಕ್ರೋಸ್) ಏಕೆ ಬಳಸುವಿರಿ, ತಾಯಿಯ ಹಾಲಿನಲ್ಲಿ ಇದು ಇಲ್ಲವಲ್ಲ ಎಂದು ಕೇಳಿದಾಗ ಅವರು ಕೊಟ್ಟ ಉತ್ತರ ಇದು: ನಮ್ಮ ಹಾಲಿನ ಪುಡಿಯನ್ನು ಒಮ್ಮೆ ಹಸುಗೂಸುಗಳು ಕುಡಿದ ಮೇಲೆ ತಾಯಿಯ ಹಾಲನ್ನ ಬಯಸುವುದಿಲ್ಲ ಎಂದು.

ಸಕ್ಕರೆಯನ್ನು ಇಂದು ನೂತನ ತಂಬಾಕು ಎಂದೇ ಆರೋಗ್ಯ ವ್ಯವಸ್ಥೆಯಲ್ಲಿ ಪರಿಗಣಿಸಲಾಗುತ್ತಿದೆ. ರಾಬರ್ಟ್ ಲಸ್ಟಿಕ್ ಸುಮಾರು 10 ವರ್ಷಗಳ ಹಿಂದೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸಕ್ಕರೆ ಎಂಬ ಕಹಿ ಸತ್ಯ (sugar, the bitter truth) ಎಂಬ ಭಾಷಣದಲ್ಲಿ ಸಕ್ಕರೆ ತಂದಿರುವ ಅನಾರೋಗ್ಯ ಅವಾಂತರವನ್ನು ವಿಶ್ಲೇಷಿಸಿದ್ದರು. ಇದನ್ನು ಸುಮಾರು 1 ಕೋಟಿಗೂ ಹೆಚ್ಚು ಜನ ಗಮನಿಸಿದ್ದಾರೆ. ಒಂದು ವೈಜ್ಞಾನಿಕ ಪರೀಕ್ಷೆಯಲ್ಲಿ 2 ಗುಂಪಿನ ಇಲಿಗಳನ್ನು ಬಳಸಿ ಒಂದು ಇಲಿಗಳ ಗುಂಪಿಗೆ ಹಣ್ಣು ತರಕಾರಿಗಳನ್ನ ಕೊಟ್ಟು, ಇನ್ನೊಂದು ಗುಂಪಿನ ಇಲಿಗಳಿಗೆ ಸಕ್ಕರೆ ಕೊಟ್ಟು ಪಳಗಿಸಿ, ಸ್ವಲ್ಪ ಕಾಲದ ನಂತರ ಈ ಎರಡೂ ಗುಂಪಿನ ಇಲಿಗಳ ಮೇಲೆ ಮೈ ಸುಡುವ ಲೇಸರ್ ಬೆಳಕನ್ನು ಹಾಯಿಸಿದಾಗ, ಹಣ್ಣು, ತರಕಾರಿ ತಿನ್ನುವ ಇಲಿಗಳು ಜೀವಭಯದಿಂದ, ಜೀವವಿದ್ರೆ ಮುಂದೆ ತಿನ್ನಬಹುದೆಂದು ಚಂಗನೆ ಹಾರಿ ಓಡಿಹೋದವು. ಆದರೆ ಸಕ್ಕರೆಗೆ ಪಳಗಿದ್ದ ಇಲಿಯ ಗುಂಪು ಮೈ ಸುಟ್ಟರೂ ಸಕ್ಕರೆಯನ್ನು ತಿನ್ನುತ್ತಲೇ ಇದ್ದವು. ಈ ಪ್ರಯೋಗದಿಂದ ತಿಳಿದುಬಂದದ್ದೇನೆಂದರೆ ಸಕ್ಕರೆಗೂ ಮಾದಕ ದ್ರವ್ಯಗಳ ವ್ಯಸನಿಗಳಿಗೂ ಯಾವುದೇ ವ್ಯತ್ಯಾಸವಿಲ್ಲವೆಂದು. ಇದನ್ನು ಗಮನಿಸಿದ ವಿಶ್ವ ಆರೋಗ್ಯ ಸಂಸ್ಥೆ ನಮ್ಮ ನಿತ್ಯ ಆಹಾರದಿಂದ ಶೇ.10 ಕ್ಕಿಂತ ಹೆಚ್ಚು ಶಕ್ತಿಯನ್ನು ಸಕ್ಕರೆಯಿಂದ ಬರದಂತೆ ನೋಡಿಕೊಳ್ಳಿ ಎಂದು ಹೇಳಿರುವುದಲ್ಲದೆ ಇನ್ನೂ ಉತ್ತಮವಾದ ಮತ್ತು ನಿಜವಾದ ಆರೋಗ್ಯಕ್ಕಾಗಿ ಅದನ್ನು ಶೇ.5ಕ್ಕಿಂತ ಕಮ್ಮಿ ಮಾಡಿಕೊಂಡರೆ ಒಳಿತೆಂದು ಸ್ಪಷ್ಟವಾಗಿ ಹೇಳಿದೆ. ಶೇ.5ರಷ್ಟು ಶಕ್ತಿಯನ್ನು ಸಕ್ಕರೆಯಿಂದಲೇ ಪಡೆಯಲೇಬೇಕೆಂದೇನಲ್ಲ, ಬಳಸಲೇಬೇಕಾದರೂ ಅಷ್ಟರೊಳಗೆ ನಿಯಂತ್ರಿಸಿ ಎನ್ನುವುದಾಗಿದೆ. ಇದರ ಅರ್ಥ ದಿನಕ್ಕೆ 25 ಗ್ರಾಂಗಿಂತ ಹೆಚ್ಚು ಸಕ್ಕರೆ ಬಳಸಿದರೆ ಅನಾರೋಗ್ಯಕ್ಕೆ ಆಹ್ವಾನ ಕೊಟ್ಟಂತೆ.

ಈ 25 ಗ್ರಾಂ ಸಕ್ಕರೆ ಒಂದು ದಿನಕ್ಕೆ ಎನ್ನುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರವಾಗಿ ಭಾರತದ 138 ಕೋಟಿ ಜನರಿಗೆ 12 ಮಿಲಿಯನ್ ಟನ್ ಸಕ್ಕರೆ ಬೇಕಾಗುತ್ತದೆ. ಅಥವಾ ಶೇ.10 ರಷ್ಟು ಗರಿಷ್ಠ ಸಕ್ಕರೆಯನ್ನು ಲೆಕ್ಕ ಹಾಕಿದರೂ 24 ಮಿಲಿಯನ್ ಟನ್ ಸಾಕು. ಹನ್ನೆರಡಲ್ಲ 24 ಟನ್ನೂ ಅಲ್ಲ, ನಮ್ಮಲ್ಲಿ ಸುಮಾರು 35 ಮಿಲಿಯನ್ ಟನ್ ಸಕ್ಕರೆಯನ್ನು ಪ್ರತಿವರ್ಷ ಉತ್ಪಾದಿಸುತ್ತೇವೆ. ‘ಬೇಕಾಗಿರುವ’ ಹನ್ನೆರಡು ಮಿಲಿಯನ್ ಟನ್‍ಗಿಂತ ಮೂರು ಪಟ್ಟು ಸಕ್ಕರೆಯ ಉತ್ಪಾದನೆಯಾಗುತ್ತಿದೆ. ಜಗತ್ತಿನ ಮಧುಮೇಹ ರಾಜಧಾನಿಯೆಂದು ಭಾರತವನ್ನು ಕರೆಯುತ್ತಾರೆ. ವಯಸ್ಕರಿಗೆ ಸುಮಾರು ಶೇ.14 ರಷ್ಟು ಜನರಲ್ಲಿ ಮಧುಮೇಹ ರೋಗವಿದೆ. ಸುಮಾರು 40 ವರ್ಷಕ್ಕೆ ಮಧುಮೇಹ ಬಂದರೆ ಸುಮಾರು 10 ಲಕ್ಷ ರೂಪಾಯಿ ಆರೋಗ್ಯಕ್ಕೆ ಖರ್ಚು ಮಾಡಬೇಕಾಗುತ್ತದೆ. ಈ 35 ಮಿಲಿಯನ್ ಟನ್ ಸಕ್ಕರೆಗಾಗಿ 350 ಮಿಲಿಯನ್ ಟನ್ ಕಬ್ಬನ್ನು ಬೆಳೆಯಲು ಸುಮಾರು 5 ಮಿಲಿಯನ್ ಹೆಕ್ಟೇರ್ ಭೂಮಿಯನ್ನು ಬಳಸಲಾಗುತ್ತಿದೆ. ಮಹಾರಾಷ್ಟ್ರದಂತಹ ರಾಜ್ಯದಲ್ಲಿರುವ ಸುಮಾರು 1800 ಲಕ್ಷ ಕೋಟಿಯಷ್ಟು ಜನರ ತೆರಿಗೆ ಹಣದಿಂದ ಖರ್ಚು ಮಾಡಿ ಕಟ್ಟಿರುವ ಅಣೆಕಟ್ಟಿನಿಂದ ಶೇ.80ರಷ್ಟು ನೀರು ಕೇವಲ ಕಬ್ಬಿನ ಗದ್ದೆಗೆ ಹರಿಯುತ್ತದೆ. Sugar cane is a water guzzler, diabetes inducer. ಕಬ್ಬಿನಿಂದ ಬರುವ ಸಕ್ಕರೆಯಾಗಲಿ ಅಥವಾ ಸಾರಾಯಿಯಾಗಲಿ ಪರಿಸರಕ್ಕೆ ಮತ್ತು ಮನುಕುಲಕ್ಕೆ ಎಲ್ಲಾ ರೀತಿಯಿಂದಲೂ ಮಾರಕವೇ ಆಗಿದೆ.

ಮನುಷ್ಯನ ದೇಹದಲ್ಲಿ ಸುಮಾರು 5 ಲೀಟರ್ ರಕ್ತವಿದ್ದು, ಅದಕ್ಕೆ ಕೇವಲ 5 ಗ್ರಾಂ ಸಕ್ಕರೆಯನ್ನು ಮಾತ್ರ ಶೇಖರಿಸಲು ಸಾಮರ್ಥ್ಯವಿರುವುದು. ನಾವು ಸುಲಭವಾಗಿ ಬಳಸುವ ಸಕ್ಕರೆ ರಕ್ತಕ್ಕೆ ಶೀಘ್ರವಾಗಿ ಪ್ರವಾಹವಾಗಿ ದೇಹದ ಶೇಖರಣಾ ಸಾಮರ್ಥ್ಯವನ್ನು ಮೀರಿದಾಗ ಇನ್ಸುಲಿನ್ ಹಾರ್ಮೋನ್ ಹೆಚ್ಚು ಉತ್ಪತ್ತಿಯಾಗಿ ಈ ಸಕ್ಕರೆಯ ಪ್ರವಾಹವನ್ನು ಕೊಬ್ಬಾಗಿ ನಿರಂತರವಾಗಿ ಪರಿವರ್ತಿಸಬೇಕಾಗುತ್ತದೆ. ಹೀಗೆ ಸತತವಾಗಿ ದುಡಿದ ಇನ್ಸುಲಿನ್ ಉತ್ಪಾದಿಸುವ ಪ್ಯಾಂಕ್ರಿಯಾಸ್ ಅಥವಾ ಇನ್ಸುಲಿನ್ ಹೇಳಿದ ಮಾತಿನಂತೆ ಸಕ್ಕರೆಯನ್ನು ಬೇರೆಡೆಗೆ ಶೇಖರಿಸುವ ಜೀವಕೋಶಗಳು ಸೋತು ದೇಹದ ಸಂವಾಹಕಗಳು ಹಳಿ ತಪ್ಪಿದಾಗ ಉಂಟಾಗುವುದೇ ಮಧುಮೇಹ ರೋಗ. ಮನುಷ್ಯ ಅನುವಂಶಿಕವಾಗಿ ಸಕ್ಕರೆಯನ್ನು ರಕ್ತದಲ್ಲಿ ಹಿಡಿದಿಡಲು ಸಾಮರ್ಥ್ಯವಿಲ್ಲದಿರುವ ವಿದ್ಯಮಾನ, ಮಂಗನಿಂದ ಮಾನವನಾದ ವಿಕಾಸವಾದ ಅಡಗಿದೆ ಎನ್ನುತ್ತಾರೆ. ಹಣ್ಣು ಹಂಪಲನ್ನು ತಿನ್ನುವ ನಮ್ಮ “ಪೂರ್ವಾಶ್ರಮದಲ್ಲಿ” ಸಕ್ಕರೆಯನ್ನು ಹಿಡಿದಿಡುವ ಪ್ರಮೇಯವೇ ಒದಗಿರಲಿಲ್ಲ. ಅವಶ್ಯಕತೆ ಇಲ್ಲದ್ದು ವಿಕಾಸವಾಗುವ ಅವಕಾಶವಿರಲಿಲ್ಲ. ಹಾಗಾಗಿ ಇಂದಿಗೆ ನಾವು ಹೆಚ್ಚು ಸಕ್ಕರೆ ಬಳಸುವುದು ನಮ್ಮ ದೈಹಿಕ ಚಟುವಟಿಕೆಯ ಕಾರ್ಯವೈಖರಿಯ ಮತ್ತು ಬದುಕಿನ ಜೀವನಶೈಲಿಗೆ ವಿರುದ್ಧವಾದದ್ದು.

ಹಣ್ಣಿನಿಂದ ಸಕ್ಕರೆ ಬರುವಾಗ ಇಂತಹ ಸಮಸ್ಯೆ ಇರದಿರಲು ಕಾರಣ ಹಣ್ಣಿನಲ್ಲಿರುವ ಅಂಶ ಸುಮಾರು ಶೇ.10 ರಷ್ಟು ಸಕ್ಕರೆ ಜೊತೆ ಸುಮಾರು 85 ರಿಂದ 90 ರಷ್ಟು ನೀರೆ ಆಗಿರುತ್ತದೆ. ಹೀಗಾಗಿ ಹೊಟ್ಟೆ ತುಂಬಿ ಹೆಚ್ಚು ತಿನ್ನಲಾಗದು. ತಿನ್ನುವ ಆಹಾರವೇ ನಿಮ್ಮನ್ನು ನಿಯಂತ್ರಿಸುತ್ತದೆ. ಇದೇ ಕಬ್ಬಿನಿಂದ ಜಗಿದು ರಸದಲ್ಲಿರುವ ಸಕ್ಕರೆಯನ್ನು ತೆಗೆದುಕೊಳ್ಳಬೇಕಾದರೆ 10 ಗ್ರಾಂ ಸಕ್ಕರೆಗೆ 100 ಗ್ರಾಂ ಕಬ್ಬನ್ನು ಜಗಿದು ರಸ ಹೀರಲು ಕಾಲು ಗಂಟೆ ಬೇಕಾಗಬಹುದು – ಹಲ್ಲು ಗಟ್ಟಿ ಇದ್ದರೆ. ಅದೇ ನಾವು 2 ಚಮಚ ಸಕ್ಕರೆ ಹಾಕಿಕೊಳ್ಳಲು ಯಾವುದೇ ಆಲೋಚನೆ ಮಾಡುವುದಿಲ್ಲ. ಯಾವುದೇ ಆಹಾರ ಪದಾರ್ಥ ಶುದ್ಧವಾದಾಗ ಸತ್ವ ಹೀನವಾಗುತ್ತದೆ. Pure is junk. ಅದು ಆಹಾರಕ್ಕೂ ಮತ್ತು ಶುದ್ಧ ಮನುಷ್ಯರಿಗೂ ಅನ್ವಯ.

ಈಗ ಸಕ್ಕರೆಯ ಪರವಾಗಿ ವಕಾಲತ್ತು ವಹಿಸಲು ಹುಟ್ಟುಹಾಕಲಾಗಿರುವ ಮೀಟಾ.ಆರ್ಗ್ ಈ ಎಲ್ಲಾ ನಗ್ನ ಸತ್ಯಗಳ ವಿರುದ್ಧ ಹಿಂದೆ ಹೇಗೆ ತಂಬಾಕು ಲಾಬಿ ಸಿಗರೇಟಿನ ಪರ ಅಪಾರವಾದ ಪ್ರಚಾರ ಮಾಡಿತ್ತೋ ಹಾಗೆಯೇ ಮುಂದುವರಿಯುತ್ತಿದೆ. ತಂಬಾಕು ಲಾಬಿ ಸಿಗರೇಟಿಗೂ ಕ್ಯಾನ್ಸರ್‌ಗೂ ಸಂಬಂಧವೇ ಇಲ್ಲವೆಂದು ಸುಮಾರು 100 ವರ್ಷಗಳ ಕಾಲ “ವೈಜ್ಞಾನಿಕ” ಸಂಶೋಧನೆಗಳನ್ನು ಮಾಡಿ ಪ್ರಕಟಿಸಿತು. ಅನೇಕ ಲಾಬಿಗಳನ್ನು ಸೃಷ್ಟಿಮಾಡಿತ್ತು. ತಂಬಾಕಿನ ಪರವಾಗಿ ಅನೇಕ ಪುಸ್ತಕಗಳನ್ನು ಬರೆಯಲಾಯಿತು. ಡನ್‍ಹಿಲ್ ಎಂಬುವ ವ್ಯಕ್ತಿ ಜಂಟಲ್ ಆರ್ಟ್ ಆಫ್ ಸ್ಮೋಕಿಂಗ್ ಎನ್ನುವ ಪುಸ್ತಕ ಬರೆದ. ಕೊಕಕೋಲಾ ಕಂಪೆನಿಯವರು ಸಕ್ಕರೆ ಪರ ಇದೇ ರೀತಿಯ ವಕಾಲತ್ತನ್ನು ವಹಿಸುತ್ತಾರೆ. ಅನೇಕ ಬಾರಿ ಇಂತಹ ಲಾಬಿಗಳಿಗೆ ಕೊಕಕೋಲಾ ಮತ್ತು ಪೆಪ್ಸಿಯಂತಹ ಕಂಪೆನಿಗಳಿಂದ ಹಣ ಹೂಡಿಕೆಯಾಗುತ್ತದೆ. ಕೋಲಾ ಕಂಪೆನಿಗಳು ಹೇಳುವುದು ನಮ್ಮ ಕೋಲಾ ಕುಡಿದು ಸುಮಾರು 2 ಕಿ.ಮೀ ಓಡಿದರೆ ಯಾವ ಬೊಜ್ಜು ಬರುವುದಿಲ್ಲ ಎಂದು. ಸೋಮಾರಿಗಳು ಕೊಕಕೋಲಾ ಕುಡಿದು ಬೇಜವಾಬ್ದಾರಿಯಿಂದ ಕೊಕಕೋಲಾದಿಂದ ಬೊಜ್ಜು ಬರುತ್ತದೆ ಎಂದು ಹೇಳುತ್ತಾರೆ ಎನ್ನುವುದು ಅವರ ವಾದ. ಹೊರನೋಟಕ್ಕೆ ಸರಿ ಕಂಡರೂ ಅವರ ದೂರ್ತ ಆಲೋಚನೆ ಮತ್ತು ಅವರ ದುರುದ್ದೇಶ ಸ್ಪಷ್ಟವಾಗಿ ಗೋಚರವಾಗುತ್ತದೆ.

ಸಕ್ಕರೆ ಮತ್ತು ಕಬ್ಬನ್ನು ಮುಕ್ಕಾಲು ಭಾಗ ಕಮ್ಮಿ ಮಾಡಿ ಭಾರತೀಯರ ಆರೋಗ್ಯ, ಮಣ್ಣಿನ ಆರೋಗ್ಯ, ನೀರಿನ ಸಂರಕ್ಷಣೆ, ಪರಿಸರ ಪಾಲನೆಗಾಗಿ ಎಲ್ಲರೂ ಒಟ್ಟಾಗಿ ಚರ್ಚೆ ನಡೆಸಿ ಆರೋಗ್ಯಕರ ಕ್ರಮಗಳಿಗೆ ಮುಂದಾಗಬೇಕಿರುವ ತುರ್ತು ನಮ್ಮ ಮುಂದಿದೆ.


ಇದನ್ನೂ ಓದಿ: ಕನ್ನಡಕ್ಕೆ ಕನ್ನಡದ್ದೆ ಊಟ ಉಂಟಾ? ಡಾ. ಕೆ.ಸಿ ರಘು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...