Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...