Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...