Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...