Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...