Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...