Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...