Homeಅಂತರಾಷ್ಟ್ರೀಯನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ, ನಿಧಿ ನಿಲ್ಲಿಸಿ!: ಟ್ರಂಪ್‌ಗೆ WHO ಮಹಾಕಾರ್ಯದರ್ಶಿ ಕಹಿಮಾತು

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ.

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ನಿಧಿಯನ್ನು ನಿಲ್ಲಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ನಿಮಗೆ ಇನ್ನಷ್ಟು ಶವಗಳು ಬೇಕೆಂದಿದ್ದರೆ ನಿಧಿ ನಿಲ್ಲಿಸಿ WHO ಮಹಾಕಾರ್ಯದರ್ಶಿ ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಖಾರವಾದ ಪ್ರತಿಕ್ರಿಯೆ ನೀಡಿದ್ದರು. ತದನಂತರ ಮಾತುಕತೆಯ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಲು ಎರಡು ಬಣಗಳು ಒಪ್ಪಿಕೊಂಡಿವೆ ಎನ್ನಲಾಗಿದೆ.

‘ಕೋವಿಡ್ ಪಿಡುಗನ್ನು ಕೆಟ್ಟದಾಗಿ ನಿರ್ವಹಿಸಿದೆ ಮತ್ತು ಪಿಡುಗಿಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಮುಚ್ಚಿಹಾಕಲು ಚೀನಾದೊಂದಿಗೆ ಸೇರಿ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿ, ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ (WHO)ಗೆ ಎಪ್ರಿಲ್ 15ರಂದು ನಿಧಿ ಸ್ಥಗಿತಗೊಳಿಸಿದ್ದಾರೆ.

“ವ್ಯತಿರಿಕ್ತ ವರದಿಗಳು ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳ ಹೊರತಾಗಿಯೂ ಜನವರಿ ಮಧ್ಯಭಾಗಕ್ಕೆ ಮುನ್ನ ಮನುಷ್ಯನಿಂದ ಮನುಷ್ಯನಿಗೆ ರೋಗ ಹರಡುತ್ತಿಲ್ಲ ಎಂಬ ಕಲ್ಪನೆಯನ್ನು ಸಂಸ್ಥೆಯು ಬೆಂಬಲಿಸಿದುದು ಮತ್ತು ಅದನ್ನು ಒಂದು ಸಾರ್ವಜನಿಕ ತುರ್ತುಸ್ಥಿತಿ ಎಂದು ಘೋಷಿಸುವಲ್ಲಿ ಮಾಡಿದ ವಿಳಂಬವು ಯುಎಸ್‌ಎಗೆ ಅಮೂಲ್ಯವಾದ ಸಮಯ ನಷ್ಟವನ್ನು ಉಂಟುಮಾಡಿತು” ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಮುಖ್ಯ ಕಛೇರಿ

ನಿಲ್ಲಿಸಲಾಗುವ ನಿಧಿಯ ಮೊತ್ತವನ್ನು ಆತ ಉಲ್ಲೇಖಿಸಿಲ್ಲವಾದರೂ, ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ 5600 ಕೋಟಿ ಡಾಲರ್ ವಾರ್ಷಿಕ ಬಜೆಟಿನಲ್ಲಿ ಯುಎಸ್‌ಎಯ ದೇಣಿಗೆಯು 90 ಕೋಟಿ ಡಾಲರ್‌ಗಳಾಗಿವೆ. ಆದರೆ, ಈ ನಿರ್ಧಾರವು ಜಾರಿಗೆ ಬರುವ ಮೊದಲು ಯುಎಸ್‌ಎಯ ಕಾಂಗ್ರೆಸ್ ಅದನ್ನು ಅಂಗೀಕರಿಸಬೇಕಾಗಿದೆ.

ಜಾಗತಿಕವಾದ ಈ ಬಿಕ್ಕಟ್ಟನ್ನು ಎದುರಿಸುವ ಕೆಲಸದಲ್ಲಿ ಭಾಗವಹಿಸುತ್ತಿರುವವರು ಈ ಸುದ್ದಿಗೆ ಹರಿತವಾಗಿ ಪ್ರತಿಕ್ರಿಯಿಸಿದ್ದಾರೆ. ಟ್ರಂಪ್ ಮಾಡಿರುವ ಈ ನಿರ್ಧಾರ ಮತ್ತು ಚೀನಾ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಕುರಿತ ಆತನ ಹಿಂದಿನ ಹೇಳಿಕೆಗಳನ್ನು ಅವರು ಆರೋಪದ ಧ್ವನಿಯಲ್ಲಿ ದೂರಿದ್ದಾರೆ. ವಿಶ್ವದಾದ್ಯಂತ ಅತ್ಯಂತ ಮಹತ್ವದ ಮತ್ತು ಅತ್ಯಗತ್ಯವಾದ ಮಾನವೀಯ ಕೆಲಸಗಳನ್ನು ಮಾಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯನ್ನು ಟ್ರಂಪ್ ರಾಜಕೀಕರಣಗೊಳಿಸುತ್ತಿರುವುದಾಗಿ ಅನೇಕರು ದೂರಿದ್ದಾರೆ- ಅದೂ ಕೂಡಾ, ಅತ್ಯಂತ ಬಡದೇಶಗಳಲ್ಲಿ ಅದರ ಕಾರ್ಯಗಳು ತೀರಾ ಅಗತ್ಯವಾಗಿರುವಾಗ. ಈ ನಿರ್ಧಾರವು ಬಹಳಷ್ಟು ಸಾವುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ನಾಯಕರು ಎಚ್ಚರಿಸಿದ್ದಾರೆ.

“ದಯವಿಟ್ಟು ಈ ವೈರಸನ್ನು ರಾಜಕೀಕರಣಗೊಳಿಸಬೇಡಿ. ರಾಷ್ಟ್ರಮಟ್ಟದಲ್ಲಿ ನೀವು ಹೊಂದಿರುವ ಭಿನ್ನಾಭಿಪ್ರಾಯದ ಲಾಭವನ್ನು ಅದು ಎತ್ತುತ್ತದೆ. ನಿಮಗೆ ಹಾಗೆಯೇ ಆಗಬೇಕೆಂದಿದ್ದರೆ, ನಿಮಗೆ ಇನ್ನಷ್ಟು ಶವಪೆಟ್ಟಿಗೆಗಳು ಬೇಕೆಂದಾದರೆ, ಹಾಗೆಯೇ ಮಾಡಿ” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್ ಅವರು, ಕಳೆದ ವಾರ ನಿಧಿ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ ಹೂಡಿದಾಗಲೇ ಎಚ್ಚರಿಕೆ ನೀಡಿದ್ದರು. ಕೊರೋನ ವೈರಸ್ ಹರಡುವಿಕೆಯಲ್ಲಿ ಚೀನಾದ ಪಾತ್ರದ ಬಗ್ಗೆ ಕಾಂಗ್ರೆಷನಲ್ ತನಿಖೆ ನಡೆಸುವ ಯೋಚನೆ ಮಾಡುತ್ತಿರುವುದಾಗಿ ರಿಪಬ್ಲಿಕನ್ ಪಕ್ಷ ಮತ್ತು ಕಾಂಗ್ರೆಸ್ ಘೋಷಿಸಿರುವುದನ್ನು ಗಮನಿಸುವುದು ಕೂಡಾ ಅತ್ಯಗತ್ಯವಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾಕಾರ್ಯದರ್ಶಿ ಡಾ. ತೆದ್ರೋಸ್ ಅದನೋಮ್ ಗೆಬ್ರೆಯೇಸಸ್

ಕೊರೋನ ಪಿಡುಗನ್ನು ನಿಯಂತ್ರಿಸಲು ವಿಫಲವಾದ ಬಳಿಕ ಟ್ರಂಪ್ ಆಡಳಿತ ಮತ್ತು ರಿಪಬ್ಲಿಕನ್ನರು ಚೀನಾವನ್ನು ದೂರುವ, ಮತ್ತು ವೈರಸನ್ನು ಬಚ್ಚಿಡಲು ಚೀನಾಕ್ಕೆ ನೆರವಾದುದಾಗಿ ವಿಶ್ವ ಆರೋಗ್ಯ ಸಂಸ್ಥೆ ಮತ್ತಿತರ ಜಾಗತಿಕ ಸಂಸ್ಥೆಗಳನ್ನು ದೂರುವ ವಿವರವಾದ ಯೋಜನೆ ಹಾಕಿಕೊಂಡಿರುವುದಾಗಿ ಟೀಕಾಕಾರರು ಎಚ್ಚರಿಸಿದ್ದಾರೆ. ಈ ತನಕ ಯುಎಸ್‌ಎಯು 34,000ಕ್ಕೂ ಹೆಚ್ಚು ಸಾವುಗಳನ್ನು ದಾಖಲಿಸಿದೆ.

ಯುಎಸ್‌ಎಯು ಈ ತನಕ ವಿಶ್ವದಲ್ಲಿಯೇ ಅತೀ ಹೆಚ್ಚಿನ ಸಾವಿನ ಸಂಖ್ಯೆಯನ್ನು ದಾಖಲಿಸಿದ್ದು, ಪಿಡುಗು ಇನ್ನಷ್ಟು ಬಿಗಡಾಯಿಸುವುದನ್ನು  ತಡೆಯಲು ವಿಫಲವಾಗಿರುವ ಟ್ರಂಪ್ ಆಡಳಿತವು ಚೀನಾದತ್ತ ಬೆರಳು ತೋರಿಸಿ, ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಹಣಕಾಸು ನಿಲ್ಲಿಸುವ ಇತ್ತೀಚಿನ ಕ್ರಮವು- ಕೋವಿಡ್-19 ಬಿಕ್ಕಟ್ಟಿಗೆ ಚೀನಾವನ್ನು ದೂರುವ ದೀರ್ಘಕಾಲೀನ ತನಿಖೆಯ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿದೆ.

ಡಿಸೆಂಬರ್ ನಂತರದಿಂದ ಈ ಪಿಡುಗನ್ನು ಹೇಗೆ ಎದುರಿಸಲಾಯಿತು ಎಂಬ ಕುರಿತು ಹಂತ ಹಂತವಾಗಿ ಮಾಹಿತಿ ನೀಡಲು ಒಂದು ಕಾಲಾನುಕ್ರಮಣಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾದ ಅಧಿಕಾರಿಗಳು ಬಿಡುಗಡೆಗೊಳಿಸಿದ್ದಾರೆ ಮತ್ತು ಚೀನಾದ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ಸಂಸ್ಥೆಗಳ ನಡುವೆ ಸಮನ್ವಯ ಮತ್ತು ಸಹಕಾರವನ್ನು ತೋರಿಸಿದ್ದಾರೆ.

ಒಂದು ವಾರದ ನಂತರ WHO ಮತ್ತು ಅಮೆರಿಕಾ ಸರ್ಕಾರದ ನಡುವೆ ಸಮನ್ವಯ ಬಂದಿದ್ದು ಮಾತುಕತೆಯ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿವೆ ಎನ್ನಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವದಾದ್ಯಂತ ತನ್ನ ಮಾನವೀಯ ಕೆಲಸಗಳಿಗಾಗಿ ಹೆಸರುವಾಸಿಯಾಗಿದೆ ಮತ್ತು ಟ್ರಂಪ್ ಆಡಳಿತವು ಅದರ ಮೇಲೆ ಹೊರಿಸಿರುವ- ಈ ಪಿಡುಗಿಗೆ ಸಂಬಂಧಿಸಿದಂತೆ ಅದು ಶಾಮೀಲಾಗಿದೆ ಎಂಬ- ಆರೋಪವು ಅತಿರೇಕದ್ದಾಗಿದೆ. ಒಂದು ವೇಳೆ, ಕೆಲವು ಅಧಿಕಾರಿಗಳು ನಿಜವಾಗಿಯೂ ಯಾವುದಾದರೊಂದು ರೀತಿಯ ಮುಚ್ಚುಮರೆಯಲ್ಲಿ ತೊಡಗಿದ್ದರೂ, ಅದನ್ನು ನಂತರದಲ್ಲಿ ತನಿಖೆ ಮಾಡಬೇಕೇ ಹೊರತು, ಈ ಬಿಕ್ಕಟ್ಟು ತಾರಕಕ್ಕೇರಿರುವ ಈ ಹೊತ್ತಿನಲ್ಲಿ ಆಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅನುವಾದ: ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...