Homeಮುಖಪುಟಕರೂರು ಕಾಲ್ತುಳಿತ | "ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ": ವಿಡಿಯೋ ಮೂಲಕ...

ಕರೂರು ಕಾಲ್ತುಳಿತ | “ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ”: ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ನಟ ವಿಜಯ್

- Advertisement -
- Advertisement -

ಕರೂರು ಕಾಲ್ತುಳಿತ ದುರಂತದ ಬಳಿಕ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮೊದಲ ಬಾರಿಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತು ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ.

“ನನ್ನ ಜೀವನದಲ್ಲಿ ಇದುವರೆಗೆ ಇಂತಹ ನೋವಿನ ಪರಿಸ್ಥಿತಿಯನ್ನು ನಾನು ಎದುರಿಸಿಲ್ಲ. ನನ್ನ ಹೃದಯದಲ್ಲಿ ನೋವು ಮಾತ್ರ ಇದೆ. ಜನರು ರ‍್ಯಾಲಿಯಲ್ಲಿ ನನ್ನನ್ನು ನೋಡಲು ಬಂದಿದ್ದರು. ನನ್ನ ಮೇಲೆ ಅವರು ಇಟ್ಟಿರುವ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಯಾವಾಗಲೂ ಕೃತಜ್ಞನಾಗಿದ್ದೇನೆ. ಜನರ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು, ರಾಜಕೀಯ ಬದಿಗಿಟ್ಟು ನಾನು ಸುರಕ್ಷಿತವಾದ ಸ್ಥಳವನ್ನು ಆರಿಸಿಕೊಂಡಿದ್ದೆ. ಆದರೆ, ಏನಾಗಬಾರದೋ ಅದು ಸಂಭವಿಸಿತು” ಎಂದು ವಿಜಯ್ ವಿಡಿಯೋದಲ್ಲಿ ಹೇಳಿದ್ದಾರೆ.

“ನಾನೂ ಒಬ್ಬ ಮನುಷ್ಯ. ಅಷ್ಟೊಂದು ಜನರು ಸಂಕಷ್ಟಕ್ಕೆ ಸಿಲುಕಿದಾಗ, ನಾನು ಅವರನ್ನು ಬಿಟ್ಟು ಹೇಗೆ ಹೋಗಲಿ? ಆದರೆ, ಮತ್ತೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ನಾನು ದುರಂತ ಸ್ಥಳಕ್ಕೆ ವಾಪಸ್ ಹೋಗಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾವು ಯಾವುದೇ ತಪ್ಪು ಮಾಡಿಲ್ಲ. ಆದರೆ, ನಮ್ಮ ಪಕ್ಷದ ನಾಯಕರು, ಸ್ನೇಹಿತರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಸಿಎಂ ಸರ್, ನೀವು ಸೇಡು ತೀರಿಸಿಕೊಳ್ಳುವ ಉದ್ದೇಶ ಹೊಂದಿದ್ದರೆ, ನನಗೆ ಏನು ಬೇಕಾದರು ಮಾಡಿ. ಆದರೆ, ಅವರನ್ನು ಮುಟ್ಟಬೇಡಿ. ನಾನು ಮನೆಯಲ್ಲಿಯೇ ಇರುತ್ತೇನೆ ಅಥವಾ ನನ್ನ ಕಚೇರಿಯಲ್ಲಿಯೇ ಇರುತ್ತೇನೆ. ನೀವು ನನಗೆ ಏನು ಬೇಕಾದರೂ ಮಾಡಿ”ಎಂದು ವಿಜಯ್ ಹೇಳಿದ್ದಾರೆ.

“ರಾಜಕೀಯ ಪಿತೂರಿಯ ಬಗ್ಗೆ ಉಲ್ಲೇಖಿಸಿದ ಅವರು, “ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ. ಕರೂರಿನಲ್ಲಿ ಮಾತ್ರ ಏಕೆ ಹೀಗಾಯಿತು? ಇದು ಹೇಗೆ ಸಂಭವಿಸಿತು? ಜನರಿಗೆ ಸತ್ಯ ತಿಳಿದಿದೆ ಮತ್ತು ಅವರು ಎಲ್ಲವನ್ನೂ ಗಮನಿಸುತ್ತಿದ್ದಾರೆ” ಎಂದಿದ್ದಾರೆ.

“ನಮಗೆ ನೀಡಲಾದ ಸ್ಥಳದಿಂದಲೇ ನಾವು ಮಾತನಾಡಿದ್ದೇವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕರೂರಿನ ಜನರು ಸತ್ಯ ಹೇಳುವುದನ್ನು ನೋಡುವಾಗ (ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು) ದೇವರೇ ಸತ್ಯ ಮಾತನಾಡಲು ಭೂಮಿಗೆ ಇಳಿದಂತೆ ಭಾಸವಾಗುತ್ತಿದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ” ಎಂದು ನನಗೆ ವಿಶ್ವಾಸವಿದೆ” ಎಂದು ವಿಜಯ್ ಹೇಳಿದ್ದಾರೆ.

ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳ ನೋವಿನ ಬಗ್ಗೆ ಉಲ್ಲೇಖಿಸಿದ ವಿಜಯ್, “ಈ ಸಂದರ್ಭದಲ್ಲಿ ನಾವೆಲ್ಲರೂ ನೋವಿನಲ್ಲಿದ್ದೇವೆ. ಅನೇಕ ಕುಟುಂಬಗಳು ನೋವಿನಿಂದ ಬಳಲುತ್ತಿವೆ ಎಂದು ನನಗೆ ತಿಳಿದಿದೆ. ಗಾಯಗೊಂಡ ಎಲ್ಲರೂ ಬೇಗ ಗುಣಮುಖರಾಗಲಿ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರನ್ನೂ ನಾನು ಭೇಟಿಯಾಗುತ್ತೇನೆ” ಎಂದು ತಿಳಿಸಿದ್ದಾರೆ.

“ನಮ್ಮ ರಾಜಕೀಯ ಪ್ರಯಾಣವು ಹೆಚ್ಚಿನ ಶಕ್ತಿ ಮತ್ತು ನಿರ್ಭಯತೆಯಿಂದ ಮುಂದುವರಿಯುತ್ತದೆ. ಈ ಸಮಯದಲ್ಲಿ, ರಾಜಕಾರಣಿಗಳು, ಪಕ್ಷದ ಸದಸ್ಯರು, ನಾಯಕರು ಮತ್ತು ನನ್ನ ಪರವಾಗಿ ಮಾತನಾಡಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳುವ ಮೂಲಕ ವಿಜಯ್ ತಮ್ಮ ವಿಡಿಯೋ ಕೊನೆಗೊಳಿಸಿದ್ದಾರೆ.

ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...