Homeಮುಖಪುಟಕರೂರು ಕಾಲ್ತುಳಿತ | "ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ": ವಿಡಿಯೋ ಮೂಲಕ...

ಕರೂರು ಕಾಲ್ತುಳಿತ | “ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ”: ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ನಟ ವಿಜಯ್

- Advertisement -
- Advertisement -

ಕರೂರು ಕಾಲ್ತುಳಿತ ದುರಂತದ ಬಳಿಕ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮೊದಲ ಬಾರಿಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತು ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ.

“ನನ್ನ ಜೀವನದಲ್ಲಿ ಇದುವರೆಗೆ ಇಂತಹ ನೋವಿನ ಪರಿಸ್ಥಿತಿಯನ್ನು ನಾನು ಎದುರಿಸಿಲ್ಲ. ನನ್ನ ಹೃದಯದಲ್ಲಿ ನೋವು ಮಾತ್ರ ಇದೆ. ಜನರು ರ‍್ಯಾಲಿಯಲ್ಲಿ ನನ್ನನ್ನು ನೋಡಲು ಬಂದಿದ್ದರು. ನನ್ನ ಮೇಲೆ ಅವರು ಇಟ್ಟಿರುವ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಯಾವಾಗಲೂ ಕೃತಜ್ಞನಾಗಿದ್ದೇನೆ. ಜನರ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು, ರಾಜಕೀಯ ಬದಿಗಿಟ್ಟು ನಾನು ಸುರಕ್ಷಿತವಾದ ಸ್ಥಳವನ್ನು ಆರಿಸಿಕೊಂಡಿದ್ದೆ. ಆದರೆ, ಏನಾಗಬಾರದೋ ಅದು ಸಂಭವಿಸಿತು” ಎಂದು ವಿಜಯ್ ವಿಡಿಯೋದಲ್ಲಿ ಹೇಳಿದ್ದಾರೆ.

“ನಾನೂ ಒಬ್ಬ ಮನುಷ್ಯ. ಅಷ್ಟೊಂದು ಜನರು ಸಂಕಷ್ಟಕ್ಕೆ ಸಿಲುಕಿದಾಗ, ನಾನು ಅವರನ್ನು ಬಿಟ್ಟು ಹೇಗೆ ಹೋಗಲಿ? ಆದರೆ, ಮತ್ತೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ನಾನು ದುರಂತ ಸ್ಥಳಕ್ಕೆ ವಾಪಸ್ ಹೋಗಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾವು ಯಾವುದೇ ತಪ್ಪು ಮಾಡಿಲ್ಲ. ಆದರೆ, ನಮ್ಮ ಪಕ್ಷದ ನಾಯಕರು, ಸ್ನೇಹಿತರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಸಿಎಂ ಸರ್, ನೀವು ಸೇಡು ತೀರಿಸಿಕೊಳ್ಳುವ ಉದ್ದೇಶ ಹೊಂದಿದ್ದರೆ, ನನಗೆ ಏನು ಬೇಕಾದರು ಮಾಡಿ. ಆದರೆ, ಅವರನ್ನು ಮುಟ್ಟಬೇಡಿ. ನಾನು ಮನೆಯಲ್ಲಿಯೇ ಇರುತ್ತೇನೆ ಅಥವಾ ನನ್ನ ಕಚೇರಿಯಲ್ಲಿಯೇ ಇರುತ್ತೇನೆ. ನೀವು ನನಗೆ ಏನು ಬೇಕಾದರೂ ಮಾಡಿ”ಎಂದು ವಿಜಯ್ ಹೇಳಿದ್ದಾರೆ.

“ರಾಜಕೀಯ ಪಿತೂರಿಯ ಬಗ್ಗೆ ಉಲ್ಲೇಖಿಸಿದ ಅವರು, “ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ. ಕರೂರಿನಲ್ಲಿ ಮಾತ್ರ ಏಕೆ ಹೀಗಾಯಿತು? ಇದು ಹೇಗೆ ಸಂಭವಿಸಿತು? ಜನರಿಗೆ ಸತ್ಯ ತಿಳಿದಿದೆ ಮತ್ತು ಅವರು ಎಲ್ಲವನ್ನೂ ಗಮನಿಸುತ್ತಿದ್ದಾರೆ” ಎಂದಿದ್ದಾರೆ.

“ನಮಗೆ ನೀಡಲಾದ ಸ್ಥಳದಿಂದಲೇ ನಾವು ಮಾತನಾಡಿದ್ದೇವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕರೂರಿನ ಜನರು ಸತ್ಯ ಹೇಳುವುದನ್ನು ನೋಡುವಾಗ (ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು) ದೇವರೇ ಸತ್ಯ ಮಾತನಾಡಲು ಭೂಮಿಗೆ ಇಳಿದಂತೆ ಭಾಸವಾಗುತ್ತಿದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ” ಎಂದು ನನಗೆ ವಿಶ್ವಾಸವಿದೆ” ಎಂದು ವಿಜಯ್ ಹೇಳಿದ್ದಾರೆ.

ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳ ನೋವಿನ ಬಗ್ಗೆ ಉಲ್ಲೇಖಿಸಿದ ವಿಜಯ್, “ಈ ಸಂದರ್ಭದಲ್ಲಿ ನಾವೆಲ್ಲರೂ ನೋವಿನಲ್ಲಿದ್ದೇವೆ. ಅನೇಕ ಕುಟುಂಬಗಳು ನೋವಿನಿಂದ ಬಳಲುತ್ತಿವೆ ಎಂದು ನನಗೆ ತಿಳಿದಿದೆ. ಗಾಯಗೊಂಡ ಎಲ್ಲರೂ ಬೇಗ ಗುಣಮುಖರಾಗಲಿ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರನ್ನೂ ನಾನು ಭೇಟಿಯಾಗುತ್ತೇನೆ” ಎಂದು ತಿಳಿಸಿದ್ದಾರೆ.

“ನಮ್ಮ ರಾಜಕೀಯ ಪ್ರಯಾಣವು ಹೆಚ್ಚಿನ ಶಕ್ತಿ ಮತ್ತು ನಿರ್ಭಯತೆಯಿಂದ ಮುಂದುವರಿಯುತ್ತದೆ. ಈ ಸಮಯದಲ್ಲಿ, ರಾಜಕಾರಣಿಗಳು, ಪಕ್ಷದ ಸದಸ್ಯರು, ನಾಯಕರು ಮತ್ತು ನನ್ನ ಪರವಾಗಿ ಮಾತನಾಡಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳುವ ಮೂಲಕ ವಿಜಯ್ ತಮ್ಮ ವಿಡಿಯೋ ಕೊನೆಗೊಳಿಸಿದ್ದಾರೆ.

ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...