Homeಮುಖಪುಟಕರೂರು ಕಾಲ್ತುಳಿತ | "ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ": ವಿಡಿಯೋ ಮೂಲಕ...

ಕರೂರು ಕಾಲ್ತುಳಿತ | “ಸಿಎಂ ಸರ್, ನಿಮಗೆ ಸೇಡು ಇದ್ದರೆ ನನ್ನೊಂದಿಗೆ ತೀರಿಸಿಕೊಳ್ಳಿ”: ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ನಟ ವಿಜಯ್

- Advertisement -
- Advertisement -

ಕರೂರು ಕಾಲ್ತುಳಿತ ದುರಂತದ ಬಳಿಕ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮೊದಲ ಬಾರಿಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತು ತೀವ್ರ ದುಖಃ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ.

“ನನ್ನ ಜೀವನದಲ್ಲಿ ಇದುವರೆಗೆ ಇಂತಹ ನೋವಿನ ಪರಿಸ್ಥಿತಿಯನ್ನು ನಾನು ಎದುರಿಸಿಲ್ಲ. ನನ್ನ ಹೃದಯದಲ್ಲಿ ನೋವು ಮಾತ್ರ ಇದೆ. ಜನರು ರ‍್ಯಾಲಿಯಲ್ಲಿ ನನ್ನನ್ನು ನೋಡಲು ಬಂದಿದ್ದರು. ನನ್ನ ಮೇಲೆ ಅವರು ಇಟ್ಟಿರುವ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಯಾವಾಗಲೂ ಕೃತಜ್ಞನಾಗಿದ್ದೇನೆ. ಜನರ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು, ರಾಜಕೀಯ ಬದಿಗಿಟ್ಟು ನಾನು ಸುರಕ್ಷಿತವಾದ ಸ್ಥಳವನ್ನು ಆರಿಸಿಕೊಂಡಿದ್ದೆ. ಆದರೆ, ಏನಾಗಬಾರದೋ ಅದು ಸಂಭವಿಸಿತು” ಎಂದು ವಿಜಯ್ ವಿಡಿಯೋದಲ್ಲಿ ಹೇಳಿದ್ದಾರೆ.

“ನಾನೂ ಒಬ್ಬ ಮನುಷ್ಯ. ಅಷ್ಟೊಂದು ಜನರು ಸಂಕಷ್ಟಕ್ಕೆ ಸಿಲುಕಿದಾಗ, ನಾನು ಅವರನ್ನು ಬಿಟ್ಟು ಹೇಗೆ ಹೋಗಲಿ? ಆದರೆ, ಮತ್ತೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ನಾನು ದುರಂತ ಸ್ಥಳಕ್ಕೆ ವಾಪಸ್ ಹೋಗಲಿಲ್ಲ” ಎಂದು ತಿಳಿಸಿದ್ದಾರೆ.

ಮುಂದುವರಿದು, “ನಾವು ಯಾವುದೇ ತಪ್ಪು ಮಾಡಿಲ್ಲ. ಆದರೆ, ನಮ್ಮ ಪಕ್ಷದ ನಾಯಕರು, ಸ್ನೇಹಿತರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿದ್ದಾರೆ. ಸಿಎಂ ಸರ್, ನೀವು ಸೇಡು ತೀರಿಸಿಕೊಳ್ಳುವ ಉದ್ದೇಶ ಹೊಂದಿದ್ದರೆ, ನನಗೆ ಏನು ಬೇಕಾದರು ಮಾಡಿ. ಆದರೆ, ಅವರನ್ನು ಮುಟ್ಟಬೇಡಿ. ನಾನು ಮನೆಯಲ್ಲಿಯೇ ಇರುತ್ತೇನೆ ಅಥವಾ ನನ್ನ ಕಚೇರಿಯಲ್ಲಿಯೇ ಇರುತ್ತೇನೆ. ನೀವು ನನಗೆ ಏನು ಬೇಕಾದರೂ ಮಾಡಿ”ಎಂದು ವಿಜಯ್ ಹೇಳಿದ್ದಾರೆ.

“ರಾಜಕೀಯ ಪಿತೂರಿಯ ಬಗ್ಗೆ ಉಲ್ಲೇಖಿಸಿದ ಅವರು, “ನಾವು ಐದು ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ. ಕರೂರಿನಲ್ಲಿ ಮಾತ್ರ ಏಕೆ ಹೀಗಾಯಿತು? ಇದು ಹೇಗೆ ಸಂಭವಿಸಿತು? ಜನರಿಗೆ ಸತ್ಯ ತಿಳಿದಿದೆ ಮತ್ತು ಅವರು ಎಲ್ಲವನ್ನೂ ಗಮನಿಸುತ್ತಿದ್ದಾರೆ” ಎಂದಿದ್ದಾರೆ.

“ನಮಗೆ ನೀಡಲಾದ ಸ್ಥಳದಿಂದಲೇ ನಾವು ಮಾತನಾಡಿದ್ದೇವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಕರೂರಿನ ಜನರು ಸತ್ಯ ಹೇಳುವುದನ್ನು ನೋಡುವಾಗ (ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು) ದೇವರೇ ಸತ್ಯ ಮಾತನಾಡಲು ಭೂಮಿಗೆ ಇಳಿದಂತೆ ಭಾಸವಾಗುತ್ತಿದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ” ಎಂದು ನನಗೆ ವಿಶ್ವಾಸವಿದೆ” ಎಂದು ವಿಜಯ್ ಹೇಳಿದ್ದಾರೆ.

ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳ ನೋವಿನ ಬಗ್ಗೆ ಉಲ್ಲೇಖಿಸಿದ ವಿಜಯ್, “ಈ ಸಂದರ್ಭದಲ್ಲಿ ನಾವೆಲ್ಲರೂ ನೋವಿನಲ್ಲಿದ್ದೇವೆ. ಅನೇಕ ಕುಟುಂಬಗಳು ನೋವಿನಿಂದ ಬಳಲುತ್ತಿವೆ ಎಂದು ನನಗೆ ತಿಳಿದಿದೆ. ಗಾಯಗೊಂಡ ಎಲ್ಲರೂ ಬೇಗ ಗುಣಮುಖರಾಗಲಿ. ಸಾಧ್ಯವಾದಷ್ಟು ಬೇಗ ನಿಮ್ಮೆಲ್ಲರನ್ನೂ ನಾನು ಭೇಟಿಯಾಗುತ್ತೇನೆ” ಎಂದು ತಿಳಿಸಿದ್ದಾರೆ.

“ನಮ್ಮ ರಾಜಕೀಯ ಪ್ರಯಾಣವು ಹೆಚ್ಚಿನ ಶಕ್ತಿ ಮತ್ತು ನಿರ್ಭಯತೆಯಿಂದ ಮುಂದುವರಿಯುತ್ತದೆ. ಈ ಸಮಯದಲ್ಲಿ, ರಾಜಕಾರಣಿಗಳು, ಪಕ್ಷದ ಸದಸ್ಯರು, ನಾಯಕರು ಮತ್ತು ನನ್ನ ಪರವಾಗಿ ಮಾತನಾಡಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳುವ ಮೂಲಕ ವಿಜಯ್ ತಮ್ಮ ವಿಡಿಯೋ ಕೊನೆಗೊಳಿಸಿದ್ದಾರೆ.

ಕರೂರು ಕಾಲ್ತುಳಿತದ ಬಗ್ಗೆ ವದಂತಿ ಹರಡಿದ ಆರೋಪ: ಯೂಟ್ಯೂಬರ್ ಸೇರಿ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...