Homeಮುಖಪುಟ'ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆ ನೀಡುತ್ತಿರಲಿಲ್ಲ': ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

‘ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆ ನೀಡುತ್ತಿರಲಿಲ್ಲ’: ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

- Advertisement -
- Advertisement -

ಗಾಲ್ವಾನ್ ಕಣಿವೆಯಲ್ಲಿ 2020ರಲ್ಲಿ ಚೀನಾದೊಂದಿಗೆ ನಡೆದ ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 4) ತಡೆ ನೀಡಿದೆ.

ಮಧ್ಯಂತರ ಪರಿಹಾರ (ತಡೆ) ನೀಡಲಾಗಿದ್ದರೂ, ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿಗಳಾಧ ದೀಪಂಕರ್ ದತ್ತ ಮತ್ತು ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು ರಾಹುಲ್ ಗಾಂಧಿಯವರ ಹೇಳಿಕೆಗಳಿಗೆ ಅಸಮ್ಮತಿ ವ್ಯಕ್ತಪಡಿಸಿ ಮೌಖಿಕ ಹೇಳಿಕೆಗಳನ್ನು ನೀಡಿದೆ.

ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, “ವಿರೋಧ ಪಕ್ಷದ ನಾಯಕರೊಬ್ಬರು ಸಮಸ್ಯೆಗಳ ಬಗ್ಗೆ ಮಾತನಾಡಲು ಸಾಧ್ಯವಾಗದಿದ್ದರೆ, ಅದು ದುರದೃಷ್ಟಕರ ಪರಿಸ್ಥಿತಿ. ಪತ್ರಿಕೆಗಳಲ್ಲಿ ಪ್ರಕಟವಾಗುವ ಈ ವಿಷಯಗಳನ್ನು ಅವರು ಹೇಳಲು ಸಾಧ್ಯವಾಗದಿದ್ದರೆ, ಅವರು ವಿರೋಧ ಪಕ್ಷದ ನಾಯಕರಾಗಲು ಸಾಧ್ಯವಿಲ್ಲ” ಎಂದು ಸಿಂಘ್ವಿ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ದತ್ತ ಅವರು “ನೀವು ಏನು ಹೇಳಬೇಕೋ ಅದನ್ನು ಸಂಸತ್ತಿನಲ್ಲಿ ಏಕೆ ಹೇಳಬಾರದು? ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ನೀವು ಇದನ್ನು ಏಕೆ ಹೇಳಬೇಕು?” ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿಯವರ ಹೇಳಿಕೆಗೆ ಮತ್ತಷ್ಟು ಅಸಮ್ಮತಿ ವ್ಯಕ್ತಪಡಿಸಿದ ನ್ಯಾಯಮೂರ್ತಿ ದತ್ತ ಅವರು, “ಡಾ. ಸಿಂಘ್ವಿ ಅವರೇ, 2000 ಚದರ ಕಿಲೋಮೀಟರ್ ಭಾರತೀಯ ಭೂ ಪ್ರದೇಶವನ್ನು ಚೀನಿಯರು ಆಕ್ರಮಿಸಿಕೊಂಡಿದ್ದಾರೆಂದು ನಿಮಗೆ (ರಾಹುಲ್ ಗಾಂಧಿಗೆ) ಹೇಗೆ ತಿಳಿಯಿತು? ನೀವು ಅಲ್ಲಿದ್ರಾ? ನಿಮ್ಮ ಬಳಿ ಯಾವುದೇ ವಿಶ್ವಾಸಾರ್ಹ ಸಾಕ್ಷ್ಯವಿದೆಯಾ? ಯಾವುದೇ ಮಾಹಿತಿಯಿಲ್ಲದೆ ನೀವು ಈ ಹೇಳಿಕೆಗಳನ್ನು ಏಕೆ ನೀಡುತ್ತೀರಿ. ನೀವು ನಿಜವಾದ ಭಾರತೀಯರಾಗಿದ್ದರೆ, ಇದನ್ನೆಲ್ಲಾ ಹೇಳುತ್ತಿರಲಿಲ್ಲ” ಎಂದರು.

ಇದಕ್ಕೆ, “ನಮ್ಮ 20 ಸೈನಿಕರನ್ನು ಹೊಡೆದು ಕೊಲ್ಲಲಾಯಿತು. ಅದು ಕಳವಳಕಾರಿ ವಿಷಯ ಎಂದು ನಿಜವಾದ ಭಾರತೀಯನೊಬ್ಬ ಹೇಳಬಹುದು” ಎಂದು ಸಿಂಘ್ವಿ ಉತ್ತರಿಸಿದರು.

ಈ ವೇಳೆ “ಗಡಿಗಳಲ್ಲಿ ಸಂಘರ್ಷ ಉಂಟಾದಾಗ, ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸುವುದು ಅಸಾಮಾನ್ಯವೇ?” ಎಂದು ನ್ಯಾಯಮೂರ್ತಿ ದತ್ತ ಮರು ಪ್ರಶ್ನೆ ಹಾಕಿದರು.

ಇದಕ್ಕೆ ಉತ್ತರಿಸಿದ ಸಿಂಘ್ವಿ, “ಗಡಿ ಸಂಘರ್ಷದ ಬಗ್ಗೆ ಸರಿಯಾದ ಮಾಹಿತಿ ಕೊಡಬೇಕು. ಯಾವುದೇ ವಿಷಯಗಳನ್ನು ಮುಚ್ಚಿಡಬಾರದು ಎಂಬ ಉದ್ದೇಶದಿಂದ ಮಾತ್ರ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು ಎಂದಿದ್ದಾರೆ. ಆದರೆ ನ್ಯಾಯಮೂರ್ತಿ ದತ್ತ ಅವರು ಈ ಬಗ್ಗೆ ಮಾತನಾಡಲು ಸರಿಯಾದ ವೇದಿಕೆ ಇದೆ ಎಂದು ಹೇಳಿದರು.

ಅರ್ಜಿದಾರರು (ರಾಹುಲ್ ಗಾಂಧಿ) ತಮ್ಮ ಹೇಳಿಕೆಗಳನ್ನು ಉತ್ತಮ ರೀತಿಯಲ್ಲಿ ಹೇಳಬಹುದಿತ್ತು ಎಂದು ಒಪ್ಪಿಕೊಂಡ ಸಿಂಘ್ವಿ, ಕೇವಲ ಪ್ರಶ್ನೆಗಳನ್ನು ಎತ್ತಿದ್ದಕ್ಕಾಗಿ ಅವರ ವಿರುದ್ದ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದರು.

ಪ್ರಶ್ನೆಗಳನ್ನು ಎತ್ತುವುದು ವಿರೋಧ ಪಕ್ಷದ ನಾಯಕನ ಕರ್ತವ್ಯ. ಸೆಕ್ಷನ್ 223 ಬಿಎನ್‌ಎಸ್‌ಎಸ್ ಪ್ರಕಾರ, ಇಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ದೂರನ್ನು ಪರಿಗಣಿಸುವ ಮೊದಲು ಆರೋಪಿಯ ಪೂರ್ವ ವಿಚಾರಣೆ ಕಡ್ಡಾಯವಾಗಿದೆ. ಆದರೆ, ಅದನ್ನು ಈ ಪ್ರಕರಣದಲ್ಲಿ ಪಾಲಿಸಲಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ, ಸೆಕ್ಷನ್ 223ರ ಈ ಅಂಶವನ್ನು ಹೈಕೋರ್ಟ್ ಮುಂದೆ ಎತ್ತಲಾಗಿಲ್ಲ ಎಂದು ನ್ಯಾಯಮೂರ್ತಿ ದತ್ತ ಹೇಳಿದರು.

ಈ ಅಂಶವನ್ನು ಎತ್ತುವಲ್ಲಿ ಲೋಪವಾಗಿದೆ ಎಂದು ಸಿಂಘ್ವಿ ಒಪ್ಪಿಕೊಂಡರು. ಹೈಕೋರ್ಟ್‌ನಲ್ಲಿನ ಸವಾಲು ಪ್ರಾಥಮಿಕವಾಗಿ ದೂರುದಾರರ ಸ್ಥಳದ ಮೇಲೆ ಕೇಂದ್ರೀಕರಿಸಿದೆ ಎಂದು ಅವರು ಹೇಳಿದರು. ದೂರುದಾರರು ‘ನೊಂದ ವ್ಯಕ್ತಿ’ ಅಲ್ಲದಿದ್ದರೂ, ‘ಮಾನಹಾನಿಗೊಳಗಾದ ವ್ಯಕ್ತಿ’ ಎಂಬ ಹೈಕೋರ್ಟ್‌ನ ತರ್ಕವನ್ನು ಸಿಂಘ್ವಿ ಪ್ರಶ್ನಿಸಿದರು.

ಅಂತಿಮವಾಗಿ ಈ ಅಂಶವನ್ನು ಪರಿಗಣಿಸಲು ಪೀಠ ಒಪ್ಪಿಕೊಂಡಿತು ಮತ್ತು ಅಲಹಾಬಾದ್ ಹೈಕೋರ್ಟ್‌ನ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿದ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯ ಕುರಿತು ನೋಟಿಸ್ ಜಾರಿಗೊಳಿಸಿತು. ವಿಚಾರಣೆಗೆ ಮೂರು ವಾರಗಳ ಅವಧಿಗೆ ಮಧ್ಯಂತರ ತಡೆಯಾಜ್ಞೆ ನೀಡಿತು.

ಹಿರಿಯ ವಕೀಲ ಗೌರವ್ ಭಾಟಿಯಾ ಅವರು ದೂರುದಾರರ ಪರವಾಗಿ ಕೇವಿಯಟ್ ಮೇಲೆ ಹಾಜರಾಗಿದ್ದರು.

ಮೇ 29ರಂದು, ಅಲಹಾಬಾದ್ ಹೈಕೋರ್ಟ್ ರಾಹುಲ್ ಗಾಂಧಿಯವರ ಅರ್ಜಿಯನ್ನು ತಿರಸ್ಕರಿಸಿತ್ತು. ಅವರು ಮಾನನಷ್ಟ ಪ್ರಕರಣವನ್ನು ಮತ್ತು ಫೆಬ್ರವರಿ 202 ರಲ್ಲಿ ಲಕ್ನೋದ ಸಂಸದ ಶಾಸಕರ ನ್ಯಾಯಾಲಯವು ಹೊರಡಿಸಿದ ಸಮನ್ಸ್ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಭಾರತೀಯ ಸೇನೆಯ ಕುರಿತು ಅವಮಾನಕರವಾದ ಹೇಳಿಕೆಗಳನ್ನು ನೀಡುವ ಸ್ವಾತಂತ್ರ್ಯವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಒಳಗೊಂಡಿಲ್ಲ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಹೇಳಿದ್ದರು.

ಮಾಲೆಗಾಂವ್| ಜಾತಿ ಶ್ರೇಣಿ ಜಾರಿಗೊಳಿಸಿದವರು ಸನಾತನ ಧರ್ಮದ ಭಯೋತ್ಪಾದಕರು – ಎನ್‌ಸಿಪಿ-ಎಸ್‌ಸಿಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...