Homeಅಂತರಾಷ್ಟ್ರೀಯವಸತಿಗೆ ಹಣಕಾಸು ಒದಗಿಸಲು 1,862 ರೂ. ಕೋಟಿ ಹೂಡಿಕೆ ಮಾಡುತ್ತಿರುವ ಐಎಫ್‌ಸಿ

ವಸತಿಗೆ ಹಣಕಾಸು ಒದಗಿಸಲು 1,862 ರೂ. ಕೋಟಿ ಹೂಡಿಕೆ ಮಾಡುತ್ತಿರುವ ಐಎಫ್‌ಸಿ

- Advertisement -
- Advertisement -

ವಿಶ್ವ ಬ್ಯಾಂಕಿನ ಇಂಟರ್ನ್ಯಾಷನಲ್ ಫೈನಾನ್ಸ್ ಕಾರ್ಪೊರೇಷನ್ (ಐಎಫ್‌ಸಿ)ಯು ‘ವಸತಿ ಅಭಿವೃದ್ಧಿ ಹಣಕಾಸು ನಿಗಮ’ದಲ್ಲಿ (ಎಚ್‌ಡಿಎಫ್‌ಸಿ) 186 ಕೋಟಿ ರೂಪಾಯಿ ಸಾಲ ಹೂಡಿಕೆ ಮಾಡುತ್ತಿದೆ ಎಂದು ವರದಿಯಾಗಿದೆ. ಎಚ್‌ಡಿಎಫ್‌ಸಿ ಭಾರತೀಯ ಹಣಕಾಸು ಸೇವೆಗಳ ಕಂಪನಿಯಾಗಿದೆ.

ಎಚ್‌ಡಿಎಫ್‌ಸಿ ಭಾರತದ ಪ್ರಮುಖ ವಸತಿ ಹಣಕಾಸು ಪೂರೈಕೆದಾರ ಸಂಸ್ಥೆಯಾಗಿದ್ದು, ಇದು ಬ್ಯಾಂಕಿಂಗ್, ಜೀವ ಮತ್ತು ಸಾಮಾನ್ಯ ವಿಮೆ, ಆಸ್ತಿ ನಿರ್ವಹಣೆ, ಸಾಹಸೋದ್ಯಮ ಬಂಡವಾಳ, ಶಿಕ್ಷಣ, ಠೇವಣಿ ಮತ್ತು ಶಿಕ್ಷಣ ಸಾಲಗಳ ರಂಗದಲ್ಲೂ ಕಾರ್ಯನಿರ್ವಹಿಸುತ್ತಿದೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

“ಉದ್ದೇಶಿತ ಹೂಡಿಕೆಯು ಎಚ್‌ಡಿಎಫ್‌ಸಿ ಲಿಮಿಟೆಡ್‌ನಲ್ಲಿ 186 ಕೋಟಿ ರೂ. (250 ಮಿಲಿಯನ್ ಡಾಲರ್‌) ವರೆಗಿನ ದೊಡ್ಡ ಸಾಲ ಹೂಡಿಕೆಯನ್ನು ಒಳಗೊಂಡಿದೆ. ಸಾಲದ ಆದಾಯವನ್ನು ಚಿಲ್ಲರೆ ಖರೀದಿದಾರರಿಗೆ ಕೈಗೆಟುಕುವ ದರದಲ್ಲಿ ವಸತಿಗಾಗಿ ಹಣಕಾಸು ಒದಗಿಸಲು ಬಳಸಲಾಗುತ್ತದೆ. ಪರಸ್ಪರ ಒಪ್ಪಿತ ಐಎಫ್‌ಸಿ ನಿಧಿಯೊಂದಿಗೆ ಕೈಗೆಟುಕುವ ಪರಿಸರ ಸ್ನೇಹಿ ವಸತಿಗಾಗಿ ಮೀಸಲಿಡಲಾಗುವುದು” ಎಂದು ಐಎಫ್‌ಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ನಿರ್ದಿಷ್ಟವಾಗಿ ಹೇಳುವುದಾದರೆ, ವಾಣಿಜ್ಯಿಕವಾಗಿ ಕಾರ್ಯಸಾಧ್ಯವಾದ ಕೈಗೆಟುಕುವ ಪರಿಸರ ಸ್ನೇಹಿ ವಸತಿಯನ್ನು ನಿರ್ಮಿಸುವ ಹಲವು ಅಂಶಗಳ ಬಗ್ಗೆ ಎಚ್‌ಡಿಎಫ್‌ಸಿಗೆ ತಾನು ಸಲಹೆ ನೀಡುವುದಾಗಿ ಐಎಫ್‌ಸಿ ಹೇಳಿದೆ.

ಭಾರತ ಸರ್ಕಾರದ “2022 ರೊಳಗೆ ಎಲ್ಲರಿಗೂ ವಸತಿ”ಯ ಉಪಕ್ರಮಕ್ಕೆ ಅನುಗುಣವಾಗಿ, ಕೆಳ ಮತ್ತು ಮಧ್ಯಮ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ವಸತಿಗಾಗಿ ಹಣಕಾಸಿನ ಲಭ್ಯತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ” ಎಂದು ಐಎಫ್‌ಸಿ ಹೇಳಿದೆ.


 

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...