Homeಮುಖಪುಟಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರು ಜಾತಿ ತಾರತಮ್ಯದ ಕುರಿತ ಕವಿತೆಯನ್ನು ಪ್ರಕಟಿಸದ ಉತ್ಸವದ ದಿನಪತ್ರಿಕೆಯ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿದೆ.

IFFI ದಿನಪತ್ರಿಕೆಯ ಭಾನುವಾರದ ಆವೃತ್ತಿ ‘ದಿ ಪೀಕಾಕ್’, ಕಲಾವಿದ ಸಿದ್ಧೇಶ್ ಗೌತಮ್ ಅವರ ಎರಡು ಪುಟಗಳ  ವಿವರಣೆ ಒಳಗೊಂಡಿತ್ತು. ಈ ವಿವರಣೆಯನ್ನು ವಾಘ್ ಅವರ ಸೆಕ್ಯುಲರ್ ಕವಿತೆಯ ಜೊತೆಗೆ ಕೊಂಡೊಯ್ಯಲು ಉದ್ದೇಶಿಸಲಾಗಿತ್ತು ಆದರೆ ಕವಿತೆಯನ್ನು ಶನಿವಾರ ತೆಗೆದುಹಾಕಲಾಗಿದೆ.

ಗೋವಾ ಸರ್ಕಾರದ ಪರವಾಗಿ IFFI ನ್ನು ಆಯೋಜಿಸುವ ನೋಡಲ್ ಏಜೆನ್ಸಿಯಾದ ಎಂಟರ್ಟೈನ್ಮೆಂಟ್ ಸೊಸೈಟಿ ಆಫ್ ಗೋವಾ (ESG), ಕವಿತೆಯನ್ನು ಸೃಜನಾತ್ಮಕ ಕಾರಣಗಳಿಗಾಗಿ ಸೇರಿಸದಿರಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ESG ‘ದಿ ಪೀಕಾಕ್‌’ನ ಪ್ರಕಾಶನವನ್ನು ಕೂಡ ಮಾಡುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಗೌತಮ್ ಈ ಕುರಿತು ಬರೆದಿದ್ದು, ಇಂದಿನ ಸಂಚಿಕೆಗಾಗಿ ವಿಷ್ಣು ಸೂರ್ಯ ವಾಘ್ ಅವರ ಕವಿತೆಯನ್ನು ಉಲ್ಲೇಖಿಸದಂತೆ ನನ್ನನ್ನು ಕೇಳಲಾಯಿತು. ವಾಘ್ ಅವರ ಕವಿತೆ ಸೆಕ್ಯುಲರ್, ಇದನ್ನು ನಾನು ಎಚ್ಚರಿಕೆಯಿಂದ ಆರಿಸಿಕೊಂಡಿದ್ದೇನೆ. ಏಕೆಂದರೆ ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿದಿನ ಅನೇಕರಿಂದ ಜಾತಿ ತಾರತಮ್ಯದ ಹಲವಾರು ಘಟನೆಗಳನ್ನು ವ್ಯಕ್ತಪಡಿಸುತ್ತದೆ. ನನ್ನ ಜೀವನದಲ್ಲಿ ನಾನು ಅಪರಿಚಿತ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಪ್ರಸಿದ್ಧ ಕಲಾವಿದನಾಗಿಯೂ ಇದೇ ರೀತಿಯದ್ದನ್ನು ಅನೇಕ ಬಾರಿ ಅನುಭವಿಸಿದ್ದೇನೆ ಎಂದು ಹೇಳಿದ್ದಾರೆ. ಗೌತಮ್  ಕವಿತೆಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕವಿತೆಯನ್ನು ಮುದ್ರಿಸದಿರುವ ನಿರ್ಧಾರದ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಇಎಸ್‌ಜಿ ಸಿಇಒ ಅಂಕಿತಾ ಮಿಶ್ರಾ, ಲೇಖನವನ್ನು ಮುದ್ರಿಸದಿರುವ ನಿರ್ಧಾರವು ಕೇವಲ ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಮತ್ತು ಲೇಖನದ ವಿಷಯಕ್ಕೆ ಮತ್ತು ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಾಘ್ ಅವರ ಸೋದರಳಿಯ ಕೌಸ್ತುಭ್ ನಾಯ್ಕ್, ವಾಘ್ ಅವರ ಸಂಕಲನ ‘ಸುಧೀರ್ ಸೂಕ್ತ’ ಕವಿತೆಯನ್ನು ಭಾಷಾಂತರಿಸಲು ಪೀಕಾಕ್ ತಂಡವು ಕೆಲವು ದಿನಗಳ ಹಿಂದೆ ಹೇಳಿತ್ತು. ಆದರೆ ಬಳಿಕ ಕವಿತೆಯನ್ನು ಮುದ್ರಿಸಲಾಗುವುದಿಲ್ಲ ಎಂದು ಇಎಸ್‌ಜಿ ಅಧಿಕಾರಿಗಳು ತಿಳಿಸಿದ್ದರು. ಕವಿತೆಯನ್ನು ಪ್ರಕಟಿಸದಿರುವ ನಿರ್ಧಾರದ ಹಿಂದಿನ ಕಾರಣಗಳು ತನಗೆ ತಿಳಿದಿಲ್ಲವಾದರೂ, ವಾಘ್ ಅವರ ಕವಿತೆಗಳಲ್ಲಿನ  ಅಂಶಗಳು ಇದಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

ಸುಧೀರ್ ಸೂಕ್ತ ಕವನ ಸಂಕಲನವು 2017ರಲ್ಲಿ ಕೆಲವು ವಿವಾದಗಳನ್ನು ಹುಟ್ಟು ಹಾಕಿತ್ತು.  ವಾಘ್ ಅವರು ತಮ್ಮ ಕವಿತೆ ಮೂಲಕ ಗೋವಾದ ಬಹುಜನ ಸಮಾಜದ ಇತಿಹಾಸಗಳನ್ನು ಉಲ್ಲೇಖಿಸಿದ್ದಾರೆ. ಭಾಷೆಯ ಬಳಕೆ ಮತ್ತು ಅದರ ಚಿತ್ರಣ ಮತ್ತು ವಿಷಯಗಳು ಗೋವಾದ ಸಾಹಿತ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕವಾಗಿವೆ.  ಸಂವಿಧಾನ ದಿನದ ಮುನ್ನಾದಿನದಂದು ಈ ಸೆನ್ಸಾರ್‌ಶಿಪ್ ಕ್ರಿಯೆ ನಡೆದಿರುವುದು ದುರದೃಷ್ಟಕರ ಎಂದು ಕೌಸ್ತುಭ್ ನಾಯ್ಕ್ ಹೇಳಿದ್ದಾರೆ.

2017ರಲ್ಲಿ ವಾಘ್ ಅವರ ಕೊಂಕಣಿಯಲ್ಲಿನ ಕವನಗಳ ಸಂಕಲನವಾದ ಸುಧೀರ್ ಸೂಕ್ತ – ಶೂದ್ರನ ಗೀತೆಗಳು, ಕವನ ವಿಭಾಗದಲ್ಲಿ ಗೋವಾ ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಅಧಿಕೃತವಾಗಿ ಘೋಷಣೆಯ ಮೊದಲು ಪ್ರಶಸ್ತಿಯ ಸುದ್ದಿ ಸೋರಿಕೆಯಾದ ನಂತರ ಪುಸ್ತಕದ ಬಗ್ಗೆ ವಿವಾದವು ಭುಗಿಲೆದ್ದಿತ್ತು. ವಾಘ್ ಮತ್ತು ಪುಸ್ತಕದ ಪ್ರಕಾಶನ ಸಂಸ್ಥೆಯ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ವಾಘ್ ಅವರ ಸಹೋದರ ರಾಮರಾವ್ ವಾಘ್ ಮಾತನಾಡುತ್ತಾ, ಕವಿತೆಗಳು ಜಾತಿ ತಾರತಮ್ಯ ಮತ್ತು ಬಹುಜನ ಸಮಾಜ ಅನುಭವಿಸುತ್ತಿರುವ ನೋವಿನ ಬಗ್ಗೆ ಮಾತನಾಡುತ್ತವೆ. ಅವರ ಕವಿತೆಗಳು ಸಮಾಜದ ಕಟುವಾದ ಸತ್ಯಗಳನ್ನು ತೆರೆದಿಟ್ಟಿವೆ. ಆದರೆ ಕವಿತೆ ಪ್ರಕಟಿಸದಿರಲು ಕಾರಣ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೆಸ್ಬೋಸ್ ದ್ವೀಪದಲ್ಲಿ ಹಡಗು ಮುಳುಗಡೆ: ಭಾರತೀಯರು ಸೇರಿದಂತೆ 13 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...