Homeಮುಖಪುಟಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರು ಜಾತಿ ತಾರತಮ್ಯದ ಕುರಿತ ಕವಿತೆಯನ್ನು ಪ್ರಕಟಿಸದ ಉತ್ಸವದ ದಿನಪತ್ರಿಕೆಯ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿದೆ.

IFFI ದಿನಪತ್ರಿಕೆಯ ಭಾನುವಾರದ ಆವೃತ್ತಿ ‘ದಿ ಪೀಕಾಕ್’, ಕಲಾವಿದ ಸಿದ್ಧೇಶ್ ಗೌತಮ್ ಅವರ ಎರಡು ಪುಟಗಳ  ವಿವರಣೆ ಒಳಗೊಂಡಿತ್ತು. ಈ ವಿವರಣೆಯನ್ನು ವಾಘ್ ಅವರ ಸೆಕ್ಯುಲರ್ ಕವಿತೆಯ ಜೊತೆಗೆ ಕೊಂಡೊಯ್ಯಲು ಉದ್ದೇಶಿಸಲಾಗಿತ್ತು ಆದರೆ ಕವಿತೆಯನ್ನು ಶನಿವಾರ ತೆಗೆದುಹಾಕಲಾಗಿದೆ.

ಗೋವಾ ಸರ್ಕಾರದ ಪರವಾಗಿ IFFI ನ್ನು ಆಯೋಜಿಸುವ ನೋಡಲ್ ಏಜೆನ್ಸಿಯಾದ ಎಂಟರ್ಟೈನ್ಮೆಂಟ್ ಸೊಸೈಟಿ ಆಫ್ ಗೋವಾ (ESG), ಕವಿತೆಯನ್ನು ಸೃಜನಾತ್ಮಕ ಕಾರಣಗಳಿಗಾಗಿ ಸೇರಿಸದಿರಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ESG ‘ದಿ ಪೀಕಾಕ್‌’ನ ಪ್ರಕಾಶನವನ್ನು ಕೂಡ ಮಾಡುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಗೌತಮ್ ಈ ಕುರಿತು ಬರೆದಿದ್ದು, ಇಂದಿನ ಸಂಚಿಕೆಗಾಗಿ ವಿಷ್ಣು ಸೂರ್ಯ ವಾಘ್ ಅವರ ಕವಿತೆಯನ್ನು ಉಲ್ಲೇಖಿಸದಂತೆ ನನ್ನನ್ನು ಕೇಳಲಾಯಿತು. ವಾಘ್ ಅವರ ಕವಿತೆ ಸೆಕ್ಯುಲರ್, ಇದನ್ನು ನಾನು ಎಚ್ಚರಿಕೆಯಿಂದ ಆರಿಸಿಕೊಂಡಿದ್ದೇನೆ. ಏಕೆಂದರೆ ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿದಿನ ಅನೇಕರಿಂದ ಜಾತಿ ತಾರತಮ್ಯದ ಹಲವಾರು ಘಟನೆಗಳನ್ನು ವ್ಯಕ್ತಪಡಿಸುತ್ತದೆ. ನನ್ನ ಜೀವನದಲ್ಲಿ ನಾನು ಅಪರಿಚಿತ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಪ್ರಸಿದ್ಧ ಕಲಾವಿದನಾಗಿಯೂ ಇದೇ ರೀತಿಯದ್ದನ್ನು ಅನೇಕ ಬಾರಿ ಅನುಭವಿಸಿದ್ದೇನೆ ಎಂದು ಹೇಳಿದ್ದಾರೆ. ಗೌತಮ್  ಕವಿತೆಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕವಿತೆಯನ್ನು ಮುದ್ರಿಸದಿರುವ ನಿರ್ಧಾರದ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಇಎಸ್‌ಜಿ ಸಿಇಒ ಅಂಕಿತಾ ಮಿಶ್ರಾ, ಲೇಖನವನ್ನು ಮುದ್ರಿಸದಿರುವ ನಿರ್ಧಾರವು ಕೇವಲ ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಮತ್ತು ಲೇಖನದ ವಿಷಯಕ್ಕೆ ಮತ್ತು ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಾಘ್ ಅವರ ಸೋದರಳಿಯ ಕೌಸ್ತುಭ್ ನಾಯ್ಕ್, ವಾಘ್ ಅವರ ಸಂಕಲನ ‘ಸುಧೀರ್ ಸೂಕ್ತ’ ಕವಿತೆಯನ್ನು ಭಾಷಾಂತರಿಸಲು ಪೀಕಾಕ್ ತಂಡವು ಕೆಲವು ದಿನಗಳ ಹಿಂದೆ ಹೇಳಿತ್ತು. ಆದರೆ ಬಳಿಕ ಕವಿತೆಯನ್ನು ಮುದ್ರಿಸಲಾಗುವುದಿಲ್ಲ ಎಂದು ಇಎಸ್‌ಜಿ ಅಧಿಕಾರಿಗಳು ತಿಳಿಸಿದ್ದರು. ಕವಿತೆಯನ್ನು ಪ್ರಕಟಿಸದಿರುವ ನಿರ್ಧಾರದ ಹಿಂದಿನ ಕಾರಣಗಳು ತನಗೆ ತಿಳಿದಿಲ್ಲವಾದರೂ, ವಾಘ್ ಅವರ ಕವಿತೆಗಳಲ್ಲಿನ  ಅಂಶಗಳು ಇದಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

ಸುಧೀರ್ ಸೂಕ್ತ ಕವನ ಸಂಕಲನವು 2017ರಲ್ಲಿ ಕೆಲವು ವಿವಾದಗಳನ್ನು ಹುಟ್ಟು ಹಾಕಿತ್ತು.  ವಾಘ್ ಅವರು ತಮ್ಮ ಕವಿತೆ ಮೂಲಕ ಗೋವಾದ ಬಹುಜನ ಸಮಾಜದ ಇತಿಹಾಸಗಳನ್ನು ಉಲ್ಲೇಖಿಸಿದ್ದಾರೆ. ಭಾಷೆಯ ಬಳಕೆ ಮತ್ತು ಅದರ ಚಿತ್ರಣ ಮತ್ತು ವಿಷಯಗಳು ಗೋವಾದ ಸಾಹಿತ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕವಾಗಿವೆ.  ಸಂವಿಧಾನ ದಿನದ ಮುನ್ನಾದಿನದಂದು ಈ ಸೆನ್ಸಾರ್‌ಶಿಪ್ ಕ್ರಿಯೆ ನಡೆದಿರುವುದು ದುರದೃಷ್ಟಕರ ಎಂದು ಕೌಸ್ತುಭ್ ನಾಯ್ಕ್ ಹೇಳಿದ್ದಾರೆ.

2017ರಲ್ಲಿ ವಾಘ್ ಅವರ ಕೊಂಕಣಿಯಲ್ಲಿನ ಕವನಗಳ ಸಂಕಲನವಾದ ಸುಧೀರ್ ಸೂಕ್ತ – ಶೂದ್ರನ ಗೀತೆಗಳು, ಕವನ ವಿಭಾಗದಲ್ಲಿ ಗೋವಾ ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಅಧಿಕೃತವಾಗಿ ಘೋಷಣೆಯ ಮೊದಲು ಪ್ರಶಸ್ತಿಯ ಸುದ್ದಿ ಸೋರಿಕೆಯಾದ ನಂತರ ಪುಸ್ತಕದ ಬಗ್ಗೆ ವಿವಾದವು ಭುಗಿಲೆದ್ದಿತ್ತು. ವಾಘ್ ಮತ್ತು ಪುಸ್ತಕದ ಪ್ರಕಾಶನ ಸಂಸ್ಥೆಯ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ವಾಘ್ ಅವರ ಸಹೋದರ ರಾಮರಾವ್ ವಾಘ್ ಮಾತನಾಡುತ್ತಾ, ಕವಿತೆಗಳು ಜಾತಿ ತಾರತಮ್ಯ ಮತ್ತು ಬಹುಜನ ಸಮಾಜ ಅನುಭವಿಸುತ್ತಿರುವ ನೋವಿನ ಬಗ್ಗೆ ಮಾತನಾಡುತ್ತವೆ. ಅವರ ಕವಿತೆಗಳು ಸಮಾಜದ ಕಟುವಾದ ಸತ್ಯಗಳನ್ನು ತೆರೆದಿಟ್ಟಿವೆ. ಆದರೆ ಕವಿತೆ ಪ್ರಕಟಿಸದಿರಲು ಕಾರಣ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೆಸ್ಬೋಸ್ ದ್ವೀಪದಲ್ಲಿ ಹಡಗು ಮುಳುಗಡೆ: ಭಾರತೀಯರು ಸೇರಿದಂತೆ 13 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...