Homeಮುಖಪುಟಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರು ಜಾತಿ ತಾರತಮ್ಯದ ಕುರಿತ ಕವಿತೆಯನ್ನು ಪ್ರಕಟಿಸದ ಉತ್ಸವದ ದಿನಪತ್ರಿಕೆಯ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿದೆ.

IFFI ದಿನಪತ್ರಿಕೆಯ ಭಾನುವಾರದ ಆವೃತ್ತಿ ‘ದಿ ಪೀಕಾಕ್’, ಕಲಾವಿದ ಸಿದ್ಧೇಶ್ ಗೌತಮ್ ಅವರ ಎರಡು ಪುಟಗಳ  ವಿವರಣೆ ಒಳಗೊಂಡಿತ್ತು. ಈ ವಿವರಣೆಯನ್ನು ವಾಘ್ ಅವರ ಸೆಕ್ಯುಲರ್ ಕವಿತೆಯ ಜೊತೆಗೆ ಕೊಂಡೊಯ್ಯಲು ಉದ್ದೇಶಿಸಲಾಗಿತ್ತು ಆದರೆ ಕವಿತೆಯನ್ನು ಶನಿವಾರ ತೆಗೆದುಹಾಕಲಾಗಿದೆ.

ಗೋವಾ ಸರ್ಕಾರದ ಪರವಾಗಿ IFFI ನ್ನು ಆಯೋಜಿಸುವ ನೋಡಲ್ ಏಜೆನ್ಸಿಯಾದ ಎಂಟರ್ಟೈನ್ಮೆಂಟ್ ಸೊಸೈಟಿ ಆಫ್ ಗೋವಾ (ESG), ಕವಿತೆಯನ್ನು ಸೃಜನಾತ್ಮಕ ಕಾರಣಗಳಿಗಾಗಿ ಸೇರಿಸದಿರಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ESG ‘ದಿ ಪೀಕಾಕ್‌’ನ ಪ್ರಕಾಶನವನ್ನು ಕೂಡ ಮಾಡುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಗೌತಮ್ ಈ ಕುರಿತು ಬರೆದಿದ್ದು, ಇಂದಿನ ಸಂಚಿಕೆಗಾಗಿ ವಿಷ್ಣು ಸೂರ್ಯ ವಾಘ್ ಅವರ ಕವಿತೆಯನ್ನು ಉಲ್ಲೇಖಿಸದಂತೆ ನನ್ನನ್ನು ಕೇಳಲಾಯಿತು. ವಾಘ್ ಅವರ ಕವಿತೆ ಸೆಕ್ಯುಲರ್, ಇದನ್ನು ನಾನು ಎಚ್ಚರಿಕೆಯಿಂದ ಆರಿಸಿಕೊಂಡಿದ್ದೇನೆ. ಏಕೆಂದರೆ ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿದಿನ ಅನೇಕರಿಂದ ಜಾತಿ ತಾರತಮ್ಯದ ಹಲವಾರು ಘಟನೆಗಳನ್ನು ವ್ಯಕ್ತಪಡಿಸುತ್ತದೆ. ನನ್ನ ಜೀವನದಲ್ಲಿ ನಾನು ಅಪರಿಚಿತ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಪ್ರಸಿದ್ಧ ಕಲಾವಿದನಾಗಿಯೂ ಇದೇ ರೀತಿಯದ್ದನ್ನು ಅನೇಕ ಬಾರಿ ಅನುಭವಿಸಿದ್ದೇನೆ ಎಂದು ಹೇಳಿದ್ದಾರೆ. ಗೌತಮ್  ಕವಿತೆಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕವಿತೆಯನ್ನು ಮುದ್ರಿಸದಿರುವ ನಿರ್ಧಾರದ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಇಎಸ್‌ಜಿ ಸಿಇಒ ಅಂಕಿತಾ ಮಿಶ್ರಾ, ಲೇಖನವನ್ನು ಮುದ್ರಿಸದಿರುವ ನಿರ್ಧಾರವು ಕೇವಲ ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಮತ್ತು ಲೇಖನದ ವಿಷಯಕ್ಕೆ ಮತ್ತು ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಾಘ್ ಅವರ ಸೋದರಳಿಯ ಕೌಸ್ತುಭ್ ನಾಯ್ಕ್, ವಾಘ್ ಅವರ ಸಂಕಲನ ‘ಸುಧೀರ್ ಸೂಕ್ತ’ ಕವಿತೆಯನ್ನು ಭಾಷಾಂತರಿಸಲು ಪೀಕಾಕ್ ತಂಡವು ಕೆಲವು ದಿನಗಳ ಹಿಂದೆ ಹೇಳಿತ್ತು. ಆದರೆ ಬಳಿಕ ಕವಿತೆಯನ್ನು ಮುದ್ರಿಸಲಾಗುವುದಿಲ್ಲ ಎಂದು ಇಎಸ್‌ಜಿ ಅಧಿಕಾರಿಗಳು ತಿಳಿಸಿದ್ದರು. ಕವಿತೆಯನ್ನು ಪ್ರಕಟಿಸದಿರುವ ನಿರ್ಧಾರದ ಹಿಂದಿನ ಕಾರಣಗಳು ತನಗೆ ತಿಳಿದಿಲ್ಲವಾದರೂ, ವಾಘ್ ಅವರ ಕವಿತೆಗಳಲ್ಲಿನ  ಅಂಶಗಳು ಇದಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

ಸುಧೀರ್ ಸೂಕ್ತ ಕವನ ಸಂಕಲನವು 2017ರಲ್ಲಿ ಕೆಲವು ವಿವಾದಗಳನ್ನು ಹುಟ್ಟು ಹಾಕಿತ್ತು.  ವಾಘ್ ಅವರು ತಮ್ಮ ಕವಿತೆ ಮೂಲಕ ಗೋವಾದ ಬಹುಜನ ಸಮಾಜದ ಇತಿಹಾಸಗಳನ್ನು ಉಲ್ಲೇಖಿಸಿದ್ದಾರೆ. ಭಾಷೆಯ ಬಳಕೆ ಮತ್ತು ಅದರ ಚಿತ್ರಣ ಮತ್ತು ವಿಷಯಗಳು ಗೋವಾದ ಸಾಹಿತ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕವಾಗಿವೆ.  ಸಂವಿಧಾನ ದಿನದ ಮುನ್ನಾದಿನದಂದು ಈ ಸೆನ್ಸಾರ್‌ಶಿಪ್ ಕ್ರಿಯೆ ನಡೆದಿರುವುದು ದುರದೃಷ್ಟಕರ ಎಂದು ಕೌಸ್ತುಭ್ ನಾಯ್ಕ್ ಹೇಳಿದ್ದಾರೆ.

2017ರಲ್ಲಿ ವಾಘ್ ಅವರ ಕೊಂಕಣಿಯಲ್ಲಿನ ಕವನಗಳ ಸಂಕಲನವಾದ ಸುಧೀರ್ ಸೂಕ್ತ – ಶೂದ್ರನ ಗೀತೆಗಳು, ಕವನ ವಿಭಾಗದಲ್ಲಿ ಗೋವಾ ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಅಧಿಕೃತವಾಗಿ ಘೋಷಣೆಯ ಮೊದಲು ಪ್ರಶಸ್ತಿಯ ಸುದ್ದಿ ಸೋರಿಕೆಯಾದ ನಂತರ ಪುಸ್ತಕದ ಬಗ್ಗೆ ವಿವಾದವು ಭುಗಿಲೆದ್ದಿತ್ತು. ವಾಘ್ ಮತ್ತು ಪುಸ್ತಕದ ಪ್ರಕಾಶನ ಸಂಸ್ಥೆಯ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ವಾಘ್ ಅವರ ಸಹೋದರ ರಾಮರಾವ್ ವಾಘ್ ಮಾತನಾಡುತ್ತಾ, ಕವಿತೆಗಳು ಜಾತಿ ತಾರತಮ್ಯ ಮತ್ತು ಬಹುಜನ ಸಮಾಜ ಅನುಭವಿಸುತ್ತಿರುವ ನೋವಿನ ಬಗ್ಗೆ ಮಾತನಾಡುತ್ತವೆ. ಅವರ ಕವಿತೆಗಳು ಸಮಾಜದ ಕಟುವಾದ ಸತ್ಯಗಳನ್ನು ತೆರೆದಿಟ್ಟಿವೆ. ಆದರೆ ಕವಿತೆ ಪ್ರಕಟಿಸದಿರಲು ಕಾರಣ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೆಸ್ಬೋಸ್ ದ್ವೀಪದಲ್ಲಿ ಹಡಗು ಮುಳುಗಡೆ: ಭಾರತೀಯರು ಸೇರಿದಂತೆ 13 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...