Homeಮುಖಪುಟಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರು ಜಾತಿ ತಾರತಮ್ಯದ ಕುರಿತ ಕವಿತೆಯನ್ನು ಪ್ರಕಟಿಸದ ಉತ್ಸವದ ದಿನಪತ್ರಿಕೆಯ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿದೆ.

IFFI ದಿನಪತ್ರಿಕೆಯ ಭಾನುವಾರದ ಆವೃತ್ತಿ ‘ದಿ ಪೀಕಾಕ್’, ಕಲಾವಿದ ಸಿದ್ಧೇಶ್ ಗೌತಮ್ ಅವರ ಎರಡು ಪುಟಗಳ  ವಿವರಣೆ ಒಳಗೊಂಡಿತ್ತು. ಈ ವಿವರಣೆಯನ್ನು ವಾಘ್ ಅವರ ಸೆಕ್ಯುಲರ್ ಕವಿತೆಯ ಜೊತೆಗೆ ಕೊಂಡೊಯ್ಯಲು ಉದ್ದೇಶಿಸಲಾಗಿತ್ತು ಆದರೆ ಕವಿತೆಯನ್ನು ಶನಿವಾರ ತೆಗೆದುಹಾಕಲಾಗಿದೆ.

ಗೋವಾ ಸರ್ಕಾರದ ಪರವಾಗಿ IFFI ನ್ನು ಆಯೋಜಿಸುವ ನೋಡಲ್ ಏಜೆನ್ಸಿಯಾದ ಎಂಟರ್ಟೈನ್ಮೆಂಟ್ ಸೊಸೈಟಿ ಆಫ್ ಗೋವಾ (ESG), ಕವಿತೆಯನ್ನು ಸೃಜನಾತ್ಮಕ ಕಾರಣಗಳಿಗಾಗಿ ಸೇರಿಸದಿರಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ESG ‘ದಿ ಪೀಕಾಕ್‌’ನ ಪ್ರಕಾಶನವನ್ನು ಕೂಡ ಮಾಡುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಗೌತಮ್ ಈ ಕುರಿತು ಬರೆದಿದ್ದು, ಇಂದಿನ ಸಂಚಿಕೆಗಾಗಿ ವಿಷ್ಣು ಸೂರ್ಯ ವಾಘ್ ಅವರ ಕವಿತೆಯನ್ನು ಉಲ್ಲೇಖಿಸದಂತೆ ನನ್ನನ್ನು ಕೇಳಲಾಯಿತು. ವಾಘ್ ಅವರ ಕವಿತೆ ಸೆಕ್ಯುಲರ್, ಇದನ್ನು ನಾನು ಎಚ್ಚರಿಕೆಯಿಂದ ಆರಿಸಿಕೊಂಡಿದ್ದೇನೆ. ಏಕೆಂದರೆ ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿದಿನ ಅನೇಕರಿಂದ ಜಾತಿ ತಾರತಮ್ಯದ ಹಲವಾರು ಘಟನೆಗಳನ್ನು ವ್ಯಕ್ತಪಡಿಸುತ್ತದೆ. ನನ್ನ ಜೀವನದಲ್ಲಿ ನಾನು ಅಪರಿಚಿತ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಪ್ರಸಿದ್ಧ ಕಲಾವಿದನಾಗಿಯೂ ಇದೇ ರೀತಿಯದ್ದನ್ನು ಅನೇಕ ಬಾರಿ ಅನುಭವಿಸಿದ್ದೇನೆ ಎಂದು ಹೇಳಿದ್ದಾರೆ. ಗೌತಮ್  ಕವಿತೆಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕವಿತೆಯನ್ನು ಮುದ್ರಿಸದಿರುವ ನಿರ್ಧಾರದ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಇಎಸ್‌ಜಿ ಸಿಇಒ ಅಂಕಿತಾ ಮಿಶ್ರಾ, ಲೇಖನವನ್ನು ಮುದ್ರಿಸದಿರುವ ನಿರ್ಧಾರವು ಕೇವಲ ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಮತ್ತು ಲೇಖನದ ವಿಷಯಕ್ಕೆ ಮತ್ತು ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಾಘ್ ಅವರ ಸೋದರಳಿಯ ಕೌಸ್ತುಭ್ ನಾಯ್ಕ್, ವಾಘ್ ಅವರ ಸಂಕಲನ ‘ಸುಧೀರ್ ಸೂಕ್ತ’ ಕವಿತೆಯನ್ನು ಭಾಷಾಂತರಿಸಲು ಪೀಕಾಕ್ ತಂಡವು ಕೆಲವು ದಿನಗಳ ಹಿಂದೆ ಹೇಳಿತ್ತು. ಆದರೆ ಬಳಿಕ ಕವಿತೆಯನ್ನು ಮುದ್ರಿಸಲಾಗುವುದಿಲ್ಲ ಎಂದು ಇಎಸ್‌ಜಿ ಅಧಿಕಾರಿಗಳು ತಿಳಿಸಿದ್ದರು. ಕವಿತೆಯನ್ನು ಪ್ರಕಟಿಸದಿರುವ ನಿರ್ಧಾರದ ಹಿಂದಿನ ಕಾರಣಗಳು ತನಗೆ ತಿಳಿದಿಲ್ಲವಾದರೂ, ವಾಘ್ ಅವರ ಕವಿತೆಗಳಲ್ಲಿನ  ಅಂಶಗಳು ಇದಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

ಸುಧೀರ್ ಸೂಕ್ತ ಕವನ ಸಂಕಲನವು 2017ರಲ್ಲಿ ಕೆಲವು ವಿವಾದಗಳನ್ನು ಹುಟ್ಟು ಹಾಕಿತ್ತು.  ವಾಘ್ ಅವರು ತಮ್ಮ ಕವಿತೆ ಮೂಲಕ ಗೋವಾದ ಬಹುಜನ ಸಮಾಜದ ಇತಿಹಾಸಗಳನ್ನು ಉಲ್ಲೇಖಿಸಿದ್ದಾರೆ. ಭಾಷೆಯ ಬಳಕೆ ಮತ್ತು ಅದರ ಚಿತ್ರಣ ಮತ್ತು ವಿಷಯಗಳು ಗೋವಾದ ಸಾಹಿತ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕವಾಗಿವೆ.  ಸಂವಿಧಾನ ದಿನದ ಮುನ್ನಾದಿನದಂದು ಈ ಸೆನ್ಸಾರ್‌ಶಿಪ್ ಕ್ರಿಯೆ ನಡೆದಿರುವುದು ದುರದೃಷ್ಟಕರ ಎಂದು ಕೌಸ್ತುಭ್ ನಾಯ್ಕ್ ಹೇಳಿದ್ದಾರೆ.

2017ರಲ್ಲಿ ವಾಘ್ ಅವರ ಕೊಂಕಣಿಯಲ್ಲಿನ ಕವನಗಳ ಸಂಕಲನವಾದ ಸುಧೀರ್ ಸೂಕ್ತ – ಶೂದ್ರನ ಗೀತೆಗಳು, ಕವನ ವಿಭಾಗದಲ್ಲಿ ಗೋವಾ ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಅಧಿಕೃತವಾಗಿ ಘೋಷಣೆಯ ಮೊದಲು ಪ್ರಶಸ್ತಿಯ ಸುದ್ದಿ ಸೋರಿಕೆಯಾದ ನಂತರ ಪುಸ್ತಕದ ಬಗ್ಗೆ ವಿವಾದವು ಭುಗಿಲೆದ್ದಿತ್ತು. ವಾಘ್ ಮತ್ತು ಪುಸ್ತಕದ ಪ್ರಕಾಶನ ಸಂಸ್ಥೆಯ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ವಾಘ್ ಅವರ ಸಹೋದರ ರಾಮರಾವ್ ವಾಘ್ ಮಾತನಾಡುತ್ತಾ, ಕವಿತೆಗಳು ಜಾತಿ ತಾರತಮ್ಯ ಮತ್ತು ಬಹುಜನ ಸಮಾಜ ಅನುಭವಿಸುತ್ತಿರುವ ನೋವಿನ ಬಗ್ಗೆ ಮಾತನಾಡುತ್ತವೆ. ಅವರ ಕವಿತೆಗಳು ಸಮಾಜದ ಕಟುವಾದ ಸತ್ಯಗಳನ್ನು ತೆರೆದಿಟ್ಟಿವೆ. ಆದರೆ ಕವಿತೆ ಪ್ರಕಟಿಸದಿರಲು ಕಾರಣ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೆಸ್ಬೋಸ್ ದ್ವೀಪದಲ್ಲಿ ಹಡಗು ಮುಳುಗಡೆ: ಭಾರತೀಯರು ಸೇರಿದಂತೆ 13 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...