Homeಮುಖಪುಟಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರು ಜಾತಿ ತಾರತಮ್ಯದ ಕುರಿತ ಕವಿತೆಯನ್ನು ಪ್ರಕಟಿಸದ ಉತ್ಸವದ ದಿನಪತ್ರಿಕೆಯ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿದೆ.

IFFI ದಿನಪತ್ರಿಕೆಯ ಭಾನುವಾರದ ಆವೃತ್ತಿ ‘ದಿ ಪೀಕಾಕ್’, ಕಲಾವಿದ ಸಿದ್ಧೇಶ್ ಗೌತಮ್ ಅವರ ಎರಡು ಪುಟಗಳ  ವಿವರಣೆ ಒಳಗೊಂಡಿತ್ತು. ಈ ವಿವರಣೆಯನ್ನು ವಾಘ್ ಅವರ ಸೆಕ್ಯುಲರ್ ಕವಿತೆಯ ಜೊತೆಗೆ ಕೊಂಡೊಯ್ಯಲು ಉದ್ದೇಶಿಸಲಾಗಿತ್ತು ಆದರೆ ಕವಿತೆಯನ್ನು ಶನಿವಾರ ತೆಗೆದುಹಾಕಲಾಗಿದೆ.

ಗೋವಾ ಸರ್ಕಾರದ ಪರವಾಗಿ IFFI ನ್ನು ಆಯೋಜಿಸುವ ನೋಡಲ್ ಏಜೆನ್ಸಿಯಾದ ಎಂಟರ್ಟೈನ್ಮೆಂಟ್ ಸೊಸೈಟಿ ಆಫ್ ಗೋವಾ (ESG), ಕವಿತೆಯನ್ನು ಸೃಜನಾತ್ಮಕ ಕಾರಣಗಳಿಗಾಗಿ ಸೇರಿಸದಿರಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ESG ‘ದಿ ಪೀಕಾಕ್‌’ನ ಪ್ರಕಾಶನವನ್ನು ಕೂಡ ಮಾಡುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಗೌತಮ್ ಈ ಕುರಿತು ಬರೆದಿದ್ದು, ಇಂದಿನ ಸಂಚಿಕೆಗಾಗಿ ವಿಷ್ಣು ಸೂರ್ಯ ವಾಘ್ ಅವರ ಕವಿತೆಯನ್ನು ಉಲ್ಲೇಖಿಸದಂತೆ ನನ್ನನ್ನು ಕೇಳಲಾಯಿತು. ವಾಘ್ ಅವರ ಕವಿತೆ ಸೆಕ್ಯುಲರ್, ಇದನ್ನು ನಾನು ಎಚ್ಚರಿಕೆಯಿಂದ ಆರಿಸಿಕೊಂಡಿದ್ದೇನೆ. ಏಕೆಂದರೆ ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿದಿನ ಅನೇಕರಿಂದ ಜಾತಿ ತಾರತಮ್ಯದ ಹಲವಾರು ಘಟನೆಗಳನ್ನು ವ್ಯಕ್ತಪಡಿಸುತ್ತದೆ. ನನ್ನ ಜೀವನದಲ್ಲಿ ನಾನು ಅಪರಿಚಿತ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಪ್ರಸಿದ್ಧ ಕಲಾವಿದನಾಗಿಯೂ ಇದೇ ರೀತಿಯದ್ದನ್ನು ಅನೇಕ ಬಾರಿ ಅನುಭವಿಸಿದ್ದೇನೆ ಎಂದು ಹೇಳಿದ್ದಾರೆ. ಗೌತಮ್  ಕವಿತೆಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕವಿತೆಯನ್ನು ಮುದ್ರಿಸದಿರುವ ನಿರ್ಧಾರದ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಇಎಸ್‌ಜಿ ಸಿಇಒ ಅಂಕಿತಾ ಮಿಶ್ರಾ, ಲೇಖನವನ್ನು ಮುದ್ರಿಸದಿರುವ ನಿರ್ಧಾರವು ಕೇವಲ ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಮತ್ತು ಲೇಖನದ ವಿಷಯಕ್ಕೆ ಮತ್ತು ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಾಘ್ ಅವರ ಸೋದರಳಿಯ ಕೌಸ್ತುಭ್ ನಾಯ್ಕ್, ವಾಘ್ ಅವರ ಸಂಕಲನ ‘ಸುಧೀರ್ ಸೂಕ್ತ’ ಕವಿತೆಯನ್ನು ಭಾಷಾಂತರಿಸಲು ಪೀಕಾಕ್ ತಂಡವು ಕೆಲವು ದಿನಗಳ ಹಿಂದೆ ಹೇಳಿತ್ತು. ಆದರೆ ಬಳಿಕ ಕವಿತೆಯನ್ನು ಮುದ್ರಿಸಲಾಗುವುದಿಲ್ಲ ಎಂದು ಇಎಸ್‌ಜಿ ಅಧಿಕಾರಿಗಳು ತಿಳಿಸಿದ್ದರು. ಕವಿತೆಯನ್ನು ಪ್ರಕಟಿಸದಿರುವ ನಿರ್ಧಾರದ ಹಿಂದಿನ ಕಾರಣಗಳು ತನಗೆ ತಿಳಿದಿಲ್ಲವಾದರೂ, ವಾಘ್ ಅವರ ಕವಿತೆಗಳಲ್ಲಿನ  ಅಂಶಗಳು ಇದಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

ಸುಧೀರ್ ಸೂಕ್ತ ಕವನ ಸಂಕಲನವು 2017ರಲ್ಲಿ ಕೆಲವು ವಿವಾದಗಳನ್ನು ಹುಟ್ಟು ಹಾಕಿತ್ತು.  ವಾಘ್ ಅವರು ತಮ್ಮ ಕವಿತೆ ಮೂಲಕ ಗೋವಾದ ಬಹುಜನ ಸಮಾಜದ ಇತಿಹಾಸಗಳನ್ನು ಉಲ್ಲೇಖಿಸಿದ್ದಾರೆ. ಭಾಷೆಯ ಬಳಕೆ ಮತ್ತು ಅದರ ಚಿತ್ರಣ ಮತ್ತು ವಿಷಯಗಳು ಗೋವಾದ ಸಾಹಿತ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕವಾಗಿವೆ.  ಸಂವಿಧಾನ ದಿನದ ಮುನ್ನಾದಿನದಂದು ಈ ಸೆನ್ಸಾರ್‌ಶಿಪ್ ಕ್ರಿಯೆ ನಡೆದಿರುವುದು ದುರದೃಷ್ಟಕರ ಎಂದು ಕೌಸ್ತುಭ್ ನಾಯ್ಕ್ ಹೇಳಿದ್ದಾರೆ.

2017ರಲ್ಲಿ ವಾಘ್ ಅವರ ಕೊಂಕಣಿಯಲ್ಲಿನ ಕವನಗಳ ಸಂಕಲನವಾದ ಸುಧೀರ್ ಸೂಕ್ತ – ಶೂದ್ರನ ಗೀತೆಗಳು, ಕವನ ವಿಭಾಗದಲ್ಲಿ ಗೋವಾ ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಅಧಿಕೃತವಾಗಿ ಘೋಷಣೆಯ ಮೊದಲು ಪ್ರಶಸ್ತಿಯ ಸುದ್ದಿ ಸೋರಿಕೆಯಾದ ನಂತರ ಪುಸ್ತಕದ ಬಗ್ಗೆ ವಿವಾದವು ಭುಗಿಲೆದ್ದಿತ್ತು. ವಾಘ್ ಮತ್ತು ಪುಸ್ತಕದ ಪ್ರಕಾಶನ ಸಂಸ್ಥೆಯ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ವಾಘ್ ಅವರ ಸಹೋದರ ರಾಮರಾವ್ ವಾಘ್ ಮಾತನಾಡುತ್ತಾ, ಕವಿತೆಗಳು ಜಾತಿ ತಾರತಮ್ಯ ಮತ್ತು ಬಹುಜನ ಸಮಾಜ ಅನುಭವಿಸುತ್ತಿರುವ ನೋವಿನ ಬಗ್ಗೆ ಮಾತನಾಡುತ್ತವೆ. ಅವರ ಕವಿತೆಗಳು ಸಮಾಜದ ಕಟುವಾದ ಸತ್ಯಗಳನ್ನು ತೆರೆದಿಟ್ಟಿವೆ. ಆದರೆ ಕವಿತೆ ಪ್ರಕಟಿಸದಿರಲು ಕಾರಣ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೆಸ್ಬೋಸ್ ದ್ವೀಪದಲ್ಲಿ ಹಡಗು ಮುಳುಗಡೆ: ಭಾರತೀಯರು ಸೇರಿದಂತೆ 13 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...