Homeಮುಖಪುಟಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರು ಜಾತಿ ತಾರತಮ್ಯದ ಕುರಿತ ಕವಿತೆಯನ್ನು ಪ್ರಕಟಿಸದ ಉತ್ಸವದ ದಿನಪತ್ರಿಕೆಯ ನಿರ್ಧಾರದ ಬಗ್ಗೆ ವಿವಾದ ಭುಗಿಲೆದ್ದಿದೆ.

IFFI ದಿನಪತ್ರಿಕೆಯ ಭಾನುವಾರದ ಆವೃತ್ತಿ ‘ದಿ ಪೀಕಾಕ್’, ಕಲಾವಿದ ಸಿದ್ಧೇಶ್ ಗೌತಮ್ ಅವರ ಎರಡು ಪುಟಗಳ  ವಿವರಣೆ ಒಳಗೊಂಡಿತ್ತು. ಈ ವಿವರಣೆಯನ್ನು ವಾಘ್ ಅವರ ಸೆಕ್ಯುಲರ್ ಕವಿತೆಯ ಜೊತೆಗೆ ಕೊಂಡೊಯ್ಯಲು ಉದ್ದೇಶಿಸಲಾಗಿತ್ತು ಆದರೆ ಕವಿತೆಯನ್ನು ಶನಿವಾರ ತೆಗೆದುಹಾಕಲಾಗಿದೆ.

ಗೋವಾ ಸರ್ಕಾರದ ಪರವಾಗಿ IFFI ನ್ನು ಆಯೋಜಿಸುವ ನೋಡಲ್ ಏಜೆನ್ಸಿಯಾದ ಎಂಟರ್ಟೈನ್ಮೆಂಟ್ ಸೊಸೈಟಿ ಆಫ್ ಗೋವಾ (ESG), ಕವಿತೆಯನ್ನು ಸೃಜನಾತ್ಮಕ ಕಾರಣಗಳಿಗಾಗಿ ಸೇರಿಸದಿರಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ESG ‘ದಿ ಪೀಕಾಕ್‌’ನ ಪ್ರಕಾಶನವನ್ನು ಕೂಡ ಮಾಡುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಗೌತಮ್ ಈ ಕುರಿತು ಬರೆದಿದ್ದು, ಇಂದಿನ ಸಂಚಿಕೆಗಾಗಿ ವಿಷ್ಣು ಸೂರ್ಯ ವಾಘ್ ಅವರ ಕವಿತೆಯನ್ನು ಉಲ್ಲೇಖಿಸದಂತೆ ನನ್ನನ್ನು ಕೇಳಲಾಯಿತು. ವಾಘ್ ಅವರ ಕವಿತೆ ಸೆಕ್ಯುಲರ್, ಇದನ್ನು ನಾನು ಎಚ್ಚರಿಕೆಯಿಂದ ಆರಿಸಿಕೊಂಡಿದ್ದೇನೆ. ಏಕೆಂದರೆ ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿದಿನ ಅನೇಕರಿಂದ ಜಾತಿ ತಾರತಮ್ಯದ ಹಲವಾರು ಘಟನೆಗಳನ್ನು ವ್ಯಕ್ತಪಡಿಸುತ್ತದೆ. ನನ್ನ ಜೀವನದಲ್ಲಿ ನಾನು ಅಪರಿಚಿತ ವಿದ್ಯಾರ್ಥಿಯಾಗಿ ಮಾತ್ರವಲ್ಲದೆ ಪ್ರಸಿದ್ಧ ಕಲಾವಿದನಾಗಿಯೂ ಇದೇ ರೀತಿಯದ್ದನ್ನು ಅನೇಕ ಬಾರಿ ಅನುಭವಿಸಿದ್ದೇನೆ ಎಂದು ಹೇಳಿದ್ದಾರೆ. ಗೌತಮ್  ಕವಿತೆಯನ್ನು ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕವಿತೆಯನ್ನು ಮುದ್ರಿಸದಿರುವ ನಿರ್ಧಾರದ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಇಎಸ್‌ಜಿ ಸಿಇಒ ಅಂಕಿತಾ ಮಿಶ್ರಾ, ಲೇಖನವನ್ನು ಮುದ್ರಿಸದಿರುವ ನಿರ್ಧಾರವು ಕೇವಲ ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಮತ್ತು ಲೇಖನದ ವಿಷಯಕ್ಕೆ ಮತ್ತು ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಾಘ್ ಅವರ ಸೋದರಳಿಯ ಕೌಸ್ತುಭ್ ನಾಯ್ಕ್, ವಾಘ್ ಅವರ ಸಂಕಲನ ‘ಸುಧೀರ್ ಸೂಕ್ತ’ ಕವಿತೆಯನ್ನು ಭಾಷಾಂತರಿಸಲು ಪೀಕಾಕ್ ತಂಡವು ಕೆಲವು ದಿನಗಳ ಹಿಂದೆ ಹೇಳಿತ್ತು. ಆದರೆ ಬಳಿಕ ಕವಿತೆಯನ್ನು ಮುದ್ರಿಸಲಾಗುವುದಿಲ್ಲ ಎಂದು ಇಎಸ್‌ಜಿ ಅಧಿಕಾರಿಗಳು ತಿಳಿಸಿದ್ದರು. ಕವಿತೆಯನ್ನು ಪ್ರಕಟಿಸದಿರುವ ನಿರ್ಧಾರದ ಹಿಂದಿನ ಕಾರಣಗಳು ತನಗೆ ತಿಳಿದಿಲ್ಲವಾದರೂ, ವಾಘ್ ಅವರ ಕವಿತೆಗಳಲ್ಲಿನ  ಅಂಶಗಳು ಇದಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.

ಸುಧೀರ್ ಸೂಕ್ತ ಕವನ ಸಂಕಲನವು 2017ರಲ್ಲಿ ಕೆಲವು ವಿವಾದಗಳನ್ನು ಹುಟ್ಟು ಹಾಕಿತ್ತು.  ವಾಘ್ ಅವರು ತಮ್ಮ ಕವಿತೆ ಮೂಲಕ ಗೋವಾದ ಬಹುಜನ ಸಮಾಜದ ಇತಿಹಾಸಗಳನ್ನು ಉಲ್ಲೇಖಿಸಿದ್ದಾರೆ. ಭಾಷೆಯ ಬಳಕೆ ಮತ್ತು ಅದರ ಚಿತ್ರಣ ಮತ್ತು ವಿಷಯಗಳು ಗೋವಾದ ಸಾಹಿತ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕವಾಗಿವೆ.  ಸಂವಿಧಾನ ದಿನದ ಮುನ್ನಾದಿನದಂದು ಈ ಸೆನ್ಸಾರ್‌ಶಿಪ್ ಕ್ರಿಯೆ ನಡೆದಿರುವುದು ದುರದೃಷ್ಟಕರ ಎಂದು ಕೌಸ್ತುಭ್ ನಾಯ್ಕ್ ಹೇಳಿದ್ದಾರೆ.

2017ರಲ್ಲಿ ವಾಘ್ ಅವರ ಕೊಂಕಣಿಯಲ್ಲಿನ ಕವನಗಳ ಸಂಕಲನವಾದ ಸುಧೀರ್ ಸೂಕ್ತ – ಶೂದ್ರನ ಗೀತೆಗಳು, ಕವನ ವಿಭಾಗದಲ್ಲಿ ಗೋವಾ ಕೊಂಕಣಿ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಅಧಿಕೃತವಾಗಿ ಘೋಷಣೆಯ ಮೊದಲು ಪ್ರಶಸ್ತಿಯ ಸುದ್ದಿ ಸೋರಿಕೆಯಾದ ನಂತರ ಪುಸ್ತಕದ ಬಗ್ಗೆ ವಿವಾದವು ಭುಗಿಲೆದ್ದಿತ್ತು. ವಾಘ್ ಮತ್ತು ಪುಸ್ತಕದ ಪ್ರಕಾಶನ ಸಂಸ್ಥೆಯ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ವಾಘ್ ಅವರ ಸಹೋದರ ರಾಮರಾವ್ ವಾಘ್ ಮಾತನಾಡುತ್ತಾ, ಕವಿತೆಗಳು ಜಾತಿ ತಾರತಮ್ಯ ಮತ್ತು ಬಹುಜನ ಸಮಾಜ ಅನುಭವಿಸುತ್ತಿರುವ ನೋವಿನ ಬಗ್ಗೆ ಮಾತನಾಡುತ್ತವೆ. ಅವರ ಕವಿತೆಗಳು ಸಮಾಜದ ಕಟುವಾದ ಸತ್ಯಗಳನ್ನು ತೆರೆದಿಟ್ಟಿವೆ. ಆದರೆ ಕವಿತೆ ಪ್ರಕಟಿಸದಿರಲು ಕಾರಣ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೆಸ್ಬೋಸ್ ದ್ವೀಪದಲ್ಲಿ ಹಡಗು ಮುಳುಗಡೆ: ಭಾರತೀಯರು ಸೇರಿದಂತೆ 13 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...