Homeಚಳವಳಿಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ರೈತ ಹೋರಾಟದ ಗೆಲುವನ್ನು ರಾಜಕೀಯ ನಾಯಕರು, ರಾಜಕೀಯ ಪಕ್ಷಗಳು ಬಣ್ಣಿಸಿರುವುದು ಹೀಗೆ....

- Advertisement -
- Advertisement -

“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.

ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್‍ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್‌ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.

ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”

ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!

ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.

“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.

ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್‌ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.

ಡಿ.ಕೆ.ಶಿವಕುಮಾರ್‌: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”

ಇದನ್ನೂ ಓದಿರಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್‌ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್‌ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್‌ಕೆಡಿ ಅವರ ಟ್ವೀಟ್‌ಗಳು ಹೀಗಿವೆ:

“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”

“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”

“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”

“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.


ಇದನ್ನೂ ಓದಿರಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...