Homeಚಳವಳಿಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ರೈತ ಹೋರಾಟದ ಗೆಲುವನ್ನು ರಾಜಕೀಯ ನಾಯಕರು, ರಾಜಕೀಯ ಪಕ್ಷಗಳು ಬಣ್ಣಿಸಿರುವುದು ಹೀಗೆ....

- Advertisement -
- Advertisement -

“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.

ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್‍ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್‌ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.

ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”

ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!

ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.

“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.

ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್‌ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.

ಡಿ.ಕೆ.ಶಿವಕುಮಾರ್‌: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”

ಇದನ್ನೂ ಓದಿರಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್‌ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್‌ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್‌ಕೆಡಿ ಅವರ ಟ್ವೀಟ್‌ಗಳು ಹೀಗಿವೆ:

“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”

“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”

“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”

“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.


ಇದನ್ನೂ ಓದಿರಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....