Homeಚಳವಳಿಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ರೈತ ಹೋರಾಟದ ಗೆಲುವನ್ನು ರಾಜಕೀಯ ನಾಯಕರು, ರಾಜಕೀಯ ಪಕ್ಷಗಳು ಬಣ್ಣಿಸಿರುವುದು ಹೀಗೆ....

- Advertisement -
- Advertisement -

“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.

ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್‍ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್‌ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.

ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”

ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!

ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.

“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.

ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್‌ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.

ಡಿ.ಕೆ.ಶಿವಕುಮಾರ್‌: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”

ಇದನ್ನೂ ಓದಿರಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್‌ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್‌ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್‌ಕೆಡಿ ಅವರ ಟ್ವೀಟ್‌ಗಳು ಹೀಗಿವೆ:

“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”

“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”

“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”

“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.


ಇದನ್ನೂ ಓದಿರಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...