Homeಚಳವಳಿಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ರೈತ ಹೋರಾಟದ ಗೆಲುವನ್ನು ರಾಜಕೀಯ ನಾಯಕರು, ರಾಜಕೀಯ ಪಕ್ಷಗಳು ಬಣ್ಣಿಸಿರುವುದು ಹೀಗೆ....

- Advertisement -
- Advertisement -

“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.

ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್‍ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್‌ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.

ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”

ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!

ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.

“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.

ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್‌ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.

ಡಿ.ಕೆ.ಶಿವಕುಮಾರ್‌: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”

ಇದನ್ನೂ ಓದಿರಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್‌ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್‌ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್‌ಕೆಡಿ ಅವರ ಟ್ವೀಟ್‌ಗಳು ಹೀಗಿವೆ:

“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”

“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”

“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”

“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.


ಇದನ್ನೂ ಓದಿರಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...