Homeಚಳವಳಿಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ರೈತ ಹೋರಾಟದ ಗೆಲುವನ್ನು ರಾಜಕೀಯ ನಾಯಕರು, ರಾಜಕೀಯ ಪಕ್ಷಗಳು ಬಣ್ಣಿಸಿರುವುದು ಹೀಗೆ....

- Advertisement -
- Advertisement -

“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.

ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್‍ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್‌ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.

ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”

ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!

ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.

“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.

ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್‌ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.

ಡಿ.ಕೆ.ಶಿವಕುಮಾರ್‌: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”

ಇದನ್ನೂ ಓದಿರಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್‌ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್‌ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್‌ಕೆಡಿ ಅವರ ಟ್ವೀಟ್‌ಗಳು ಹೀಗಿವೆ:

“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”

“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”

“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”

“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.


ಇದನ್ನೂ ಓದಿರಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...