Homeಚಳವಳಿಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ರೈತ ಹೋರಾಟದ ಗೆಲುವನ್ನು ರಾಜಕೀಯ ನಾಯಕರು, ರಾಜಕೀಯ ಪಕ್ಷಗಳು ಬಣ್ಣಿಸಿರುವುದು ಹೀಗೆ....

- Advertisement -
- Advertisement -

“ಮೊದಲು ನಿನ್ನನ್ನು ನಿರ್ಲಕ್ಷಿಸುತ್ತಾರೆ, ನಿನ್ನನ್ನು ನೋಡಿ ನಗುತ್ತಾರೆ, ನಂತರ ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ” – ಇದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಂದೇಶ. ಸುದೀರ್ಘ ರೈತ ಹೋರಾಟದ ವಿಚಾರದಲ್ಲಿ ಗಾಂಧೀಜಿಯವರ ಮಾತು ಅಕ್ಷರಶಃ ನಿಜವಾಗಿದೆ.

ದೆಹಲಿ ಗಡಿಯಲ್ಲಿ ಒಂದು ವರ್ಷ ಕಾಲ ಹೋರಾಟ ಕುಳಿತ ರೈತರನ್ನು ಖಾಲಿಸ್ತಾನಿಗಳು ಎಂದು ಜರಿದರು. ದಲ್ಲಾಳಿಗಳೆಂದು ಕರೆದರು. ಟ್ರಾಕ್ಟರ್ ರ್‍ಯಾಲಿಯಲ್ಲಿ ಗಲಭೆಯನ್ನು ಸೃಷ್ಟಿಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದರು. ಗೋದಿ ಮಿಡಿಯಾಗಳು ಪ್ರಭುತ್ವದ ಪರ ನಿಂತು ಹೋರಾಟದ ಕುರಿತು ಅಪಪ್ರಚಾರ ಮಾಡಿದೆವು. 750ಕ್ಕೂ ಹೆಚ್ಚು ರೈತರು ಹುತಾತ್ಮರಾದರು. ಪ್ರತಿಭಟನೆ ಮಾಡಿ ವಾಪಸ್‌ ಬರುತ್ತಿದ್ದ ರೈತರ ಮೇಲೆ ವಾಹನ ಹತ್ತಿಸಲಾಯಿತು. ಎಷ್ಟೊಂದು ಕಹಿ ಘಟನೆ, ಎಷ್ಟೊಂದು ನೋವು. ಇಷ್ಟೆಲ್ಲ ಆದ ಮೇಲೆ ರೈತರಿಗೆ ದಿಗ್ವಿಜಯ.

ಮೊದಲೇ ಹೇಳಿದಂತೆ ಇದು ಗಾಂಧಿವಾದದ ಗೆಲುವು- “First they ignore you, then they laugh at you, then they fight you, and then you win.”

ಇದನ್ನೂ ಓದಿರಿ: ಟ್ಯಾಂಕರ್ v/s ಟ್ರಾಕ್ಟರ್: ಟ್ಯಾಂಕರ್ ಮಣಿಸಿದ ಟ್ರಾಕ್ಟರುಗಳು!

ರಾಜಕೀಯ ನಾಯಕರು, ಪಕ್ಷಗಳು ರೈತರ ಹೋರಾಟವನ್ನು ನೆನೆದಿರುವುದು ಹೀಗೆ….

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ, “ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ದುರಹಂಕಾರಿಗಳ ತಲೆ ತಗ್ಗಿಸಿದ್ದಾರೆ. ಅನ್ಯಾಯದ ವಿರುದ್ಧದ ಈ ವಿಜಯಕ್ಕೆ ಅಭಿನಂದನೆಗಳು! ಜೈ ಹಿಂದ್, ಜೈ ಹಿಂದ್ ರೈತ!” ಎಂದಿದ್ದಾರೆ.

“ರೈತರ ಹೋರಾಟ ಒತ್ತಡವನ್ನು ಸೃಷ್ಟಿ ಮಾಡಲಿದೆ, ಕೃಷಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು” ಎಂದು ಹಿಂದೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ: “ಬಿಜೆಪಿಯ ಕ್ರೌರ್ಯದಿಂದ ಕಂಗೆಡದೆ ಅವಿರತವಾಗಿ ಹೋರಾಡಿದ ಪ್ರತಿಯೊಬ್ಬ ರೈತನಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಇದು ನಿಮ್ಮ ವಿಜಯವಾಗಿದೆ. ಈ ಹೋರಾಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬರಿಗೂ ನನ್ನ ಆಳವಾದ ಸಂತಾಪಗಳು”.

ಸಿದ್ದರಾಮಯ್ಯ: “ರೈತರ ಪ್ರತಿರೋಧದ ಫಲವಾಗಿ ರೈತ ವಿರೋಧಿ ಕಾನೂನುಗಳನ್ನು ಮೋದಿ ಹಾಗೂ ಬಿಜೆಪಿ ಸರ್ಕಾರ ವಾಪಸ್‌ ಪಡೆದಿದ್ದಾರೆ. ಎಲ್ಲ ರೈತರಿಗೆ, ಕಾಂಗ್ರೆಸ್ ನಾಯಕರಿಗೆ, ದೇಶದ ಎಲ್ಲ ನಾಗರಿಕರಿಗೆ ಧನ್ಯವಾದಗಳು”.

ಡಿ.ಕೆ.ಶಿವಕುಮಾರ್‌: “ಒಂದೂವರೆ ವರ್ಷದ ಸುದೀರ್ಘ ಹೋರಾಟದ ನಂತರ ರೈತರ ಪ್ರತಿಭಟನೆಗೆ ಜಯ ಸಂದಿರುವುದು ಸಮಾಧಾನಕರ ಸಂಗತಿ. ಇದು ಕಾಂಗ್ರೆಸ್‌ ಪಕ್ಷಕ್ಕೆ ಆಸ್ತಿಯಂತಿರುವ ಗಾಂಧೀಜಿ ಅವರ ಆದರ್ಶಗಳಿಗೆ ಸಿಕ್ಕಿದ ಗೆಲುವು ಕೂಡ ಹೌದು…”

ಈ ಸುದೀರ್ಘ ಹೋರಾಟದಲ್ಲಿ ಮಡಿದ 700ಕ್ಕೂ ಹೆಚ್ಚು ರೈತರನ್ನು ಹುತಾತ್ಮರು ಎಂದು ಸರ್ಕಾರ ಒಪ್ಪಿಕೊಳ್ಳಬೇಕು. ಜೊತೆಗೆ ಅವರ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ನೀಡಬೇಕು...”

ಇದನ್ನೂ ಓದಿರಿ: ಯಶಸ್ಸಿನತ್ತ ಒಗ್ಗಟ್ಟು ಮತ್ತು ನ್ಯಾಯ: ಕೃಷಿ ಕಾಯ್ದೆಗಳ ರದ್ಧತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಕ್ರಿಯೆ

ಸಿಪಿಐ ಹೇಳಿಕೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಲಕ್ಷಾಂತರ ಕಿಸಾನ್‌ಗಳಿಗೆ ಸಿಪಿಐ (ಎಂ) ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸುತ್ತದೆ! ಎಸ್‌ಕೆಎಂ ನೇತೃತ್ವದ ಕಿಸಾನ್ ಆಂದೋಲನಕ್ಕೆ ಸಂದ ಭಾರಿ ಜಯವಿದು. ಮೋದಿ ಸರ್ಕಾರದ ಪ್ರತಿಯೊಂದು ಕುತಂತ್ರವನ್ನು ಸೋಲಿಸಲಾಯಿತು. ನಿರಂಕುಶ ಹಾಗೂ ಕರಾಳ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಲಾಗಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಮಾಡಿದ್ದಾರೆ. ಎಚ್‌ಕೆಡಿ ಅವರ ಟ್ವೀಟ್‌ಗಳು ಹೀಗಿವೆ:

“ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ..”

“ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು.

“ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು...”

“ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ...”

“ನ್ಯಾಯಕ್ಕಾಗಿ ಹೋರಾಡಿ ಹುತಾತ್ಮರಾದ ರೈತ ಕುಟುಂಬದಲ್ಲಿ ಪ್ರಧಾನಿ ಮೋದಿ ಕ್ಷಮೆ ಕೇಳಬೇಕು” ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.


ಇದನ್ನೂ ಓದಿರಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...